Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.
    ರಾಜಕೀಯ

    ಮೂವರು ಮಂತ್ರಿಗಳು ಏನು ಮಾಡುತ್ತಿದ್ದಾರೆ.

    vartha chakraBy vartha chakraಅಕ್ಟೋಬರ್ 9, 202489 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.9 :
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿಗೆ ಯಾವುದೇ ರೀತಿಯ ಕಂಟಕ ಇಲ್ಲಾ ಎಂದು ಹೈಕಮಾಂಡ್ ಸೇರಿದಂತೆ ಹಲವು ನಾಯಕರು ಪದೇ ಪದೇ ಸ್ಪಷ್ಟನೆ ನೀಡಿದರೂ ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಕುತೂಹಲ ಮೂಡಿಸಿವೆ.
    ಅದರಲ್ಲೂ ಮುಖ್ಯಮಂತ್ರಿ ಆಪ್ತ ವಲಯದಲ್ಲೇ ಗುರುತಿಸಿಕೊಂಡಿರುವ ಸಚಿವರಾದ ಸತೀಶ್ ಜಾರಕಿಹೊಳಿ ಡಾ.ಮಹದೇವಪ್ಪ ಮತ್ತು ಡಾ.ಪರಮೇಶ್ವರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿರುವುದು ಹಲವು ಶಾಸಕರನ್ನು ಸಂಪರ್ಕಿಸುತ್ತಿರುವುದು ವಿದ್ಯಮಾನಗಳಿಗೆ ರೋಚಕ ತಿರುವು ನೀಡಿದೆ.
    ಕಳೆದ ವಾರ ಬೆಂಗಳೂರಿನಲ್ಲಿ ಈ ನಾಯಕರು ಸಭೆ ನಡೆಸಿ ಹಲವು ವಿದ್ಯಮಾನಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದರು. ಇದಾದ ನಂತರ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
    ಈ ವೇಳೆ ನಿವೇಶನ ಹಂಚಿಕೆ ಹಗರಣದ ಆರೋಪದ ಹೊಡೆತಕ್ಕೆ ಸಿಲುಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲಿ ಅದರಿಂದ ತೆರವಾಗುವ ಸ್ಥಾನವನ್ನು ದಲಿತ ಸಮುದಾಯಕ್ಕೆ ನೀಡಬೇಕು ಅದರಲ್ಲೂ ಅತ್ಯಂತ ಹಿರಿಯರಾದ ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಮನವಿ ಮಾಡಿದ್ದರು.
    ಆದರೆ ತಾವು ಈಗಾಗಲೇ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿದ್ದು ಈಗ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವುದರಲ್ಲಿ ಅರ್ಥವಿಲ್ಲ ಹೀಗಾಗಿ ತಾವು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಖರ್ಗೆ ಅವರು ಸ್ಪಷ್ಟಪಡಿಸಿದ್ದರು ಎನ್ನಲಾಗಿದೆ. ಎ ಐ ಸಿ ಸಿ ಅಧ್ಯಕ್ಷರಿಂದ ಇಂತಹ ಸ್ಪಷ್ಟನೆ ಬಂದ ನಂತರ ಜಾರಕಿಹೊಳಿ ಅವರು ತಾವು ಉನ್ನತ ಹುದ್ದೆ ಅಲಂಕರಿಸಬೇಕು ಎನ್ನುವುದು ನಮ್ಮೆಲ್ಲರ ಅಪೇಕ್ಷೆಯಾಗಿದೆ ಒಂದು ವೇಳೆ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಾಗದೆ ಹೋದಲ್ಲಿ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಗಿ ದಲಿತ ಸಮುದಾಯಕ್ಕೆ ಸೇರಿದವರೊಬ್ಬರನ್ನು ನೇಮಕ ಮಾಡಬೇಕು ನೀವು ಯಾರನ್ನು ನೇಮಕ ಮಾಡಿದರು ನಾವು ತಕರಾರು ಮಾಡುವುದಿಲ್ಲ ಆದರೆ ಈ ಹುದ್ದೆ ಮಾತ್ರ ದಲಿತರಿಗೆ ಸಿಗಬೇಕು ಎಂದು ಪ್ರತಿಪಾದಿಸಿದ್ದರು ಎನ್ನಲಾಗಿದೆ.
    ಇದಾದ ನಂತರ ಬೆಂಗಳೂರಿಗೆ ಬಂದ ಸತೀಶ್ ಜಾರಕಿಹೊಳಿ ಅವರು ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಬಳಿಕ ಇದೀಗ ಮೈಸೂರಿಗೆ ತೆರಳಿದ ಅವರು ದಲಿತ ಸಮುದಾಯದ ಕೆಲವು ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಮೂಲಕ ಕುತೂಹಲ ಮೂಡಿಸಿದ್ದಾರೆ.
    ಇದರ ಬೆನ್ನಲ್ಲೇ ಚಾಮರಾಜನಗರದಲ್ಲಿರುವ ಸುನಿಲ್‌ ಬೋಸ್‌ ನಿವಾಸದಲ್ಲಿ ಸತೀಶ್‌ ಜಾರಕಿಹೊಳಿ, ಪರಮೇಶ್ವರ್‌ ಮತ್ತು ಮಹಾದೇವಪ್ಪ ಸಭೆ ನಡೆಸಿದರು.
    ಈ ವಿದ್ಯಮಾನ ಈಗ ಸಾಕಷ್ಟು ಕುತೂಹಲ ಮೂಡಿಸಿದೆ.

    Bangalore Congress Government Karnataka News Politics ಕಾಂಗ್ರೆಸ್ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಯ್ಯಪ್ಪನ ದರ್ಶನಕ್ಕಾಗಿ ಇದು ಅನಿವಾರ್ಯ.
    Next Article ಮಾಜಿ ಮುಖ್ಯಮಂತ್ರಿಗಳಿಗೆ ಹನಿ ಟ್ರ್ಯಾಪ್.?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison_cjOt ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • RalphNax ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Williamgeate ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe