Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವ್ಹೀಲಿಂಗ್ ಪಿಡುಗು..
    ಸುದ್ದಿ

    ವ್ಹೀಲಿಂಗ್ ಪಿಡುಗು..

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.14-ನಗರದಲ್ಲಿ ಬೈಕ್‌ ವೀಲ್ಹಿಂಗ್, ಸ್ಟಂಟ್‌ ಮಾಡಿ ಪ್ರಕರಣ ದಾಖಲಿಸಿಕೊಳ್ಳುವವರ ಪೈಕಿ ಅಪ್ರಾಪ್ತರೇ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಕಳೆದ ಜ.1 ರಿಂದ ಮೇ 31ರ ನಡುವೆ ಬೈಕ್‌ ಸ್ಟಂಟ್‌ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ.
    2020ರಲ್ಲಿ ಶೇ.9ರಷ್ಟು , 2021ರಲ್ಲಿ ಶೇ.13ರಷ್ಟು ಅಪ್ರಾಪ್ತರು ಬೈಕ್‌ಸ್ಟಂಟ್‌ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು ಅವರೆಲ್ಲರಿಗೂ ಪಾಲಕರೇ ಬೈಕ್‌ ಕೊಡಿಸಿದ್ದರೆ, ಇನ್ನು ಕೆಲವರು ಸಂಬಂಧಿಕರಿಂದ ಹಾಗು ಸ್ನೇಹಿತರಿಂದ ಬೈಕ್‌ಗಳನ್ನು ಪಡೆದಿದ್ದಾರೆ.
    ಪಾಲಕರಿಗೆ ದಂಡ:
    ಬನ್ನೇರುಘಟ್ಟ ರಸ್ತೆಯಲ್ಲಿ ತನ್ನ ತಂದೆಯ ಗೇರ್‌ಲೆಸ್‌ ಸ್ಕೂಟರ್‌ನಲ್ಲಿ ವೀಲಿಂಗ್‌ ಮಾಡಿದ್ದ 16 ವರ್ಷದ ಬಾಲಕನ ವಿರುದ್ಧ ಇತ್ತೀಚೆಗೆ ಹುಳಿಮಾವು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ತಂದೆಯನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದಾಗ ತನ್ನ ಮಗ ಇಂತಹ ಕೃತ್ಯ ಮಾಡಲು ಸಾಧ್ಯವೇ ಇಲ್ಲ ಎಂದು ವಾದಿಸಿದ್ದರು. ಆದಾಗ್ಯೂ ಸಾಕ್ಷಿ ಆಧರಿಸಿ ಪೊಲೀಸರು ಮೋಟಾರು ವಾಹನ ಕಾಯಿದೆ 180ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದರು. ಬಳಿಕ ನ್ಯಾಯಾಲಯವು ಬಾಲಕನಿಗೆ ಸ್ಕೂಟರ್‌ ನೀಡಿದ್ದಕ್ಕೆ ತಂದೆಗೆ 5 ಸಾವಿರ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ಪೊಲೀಸರ ಪ್ರಕಾರ, ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯ 25 ಸಾವಿರದವರೆಗೂ ದಂಡ ವಿಧಿಸಬಹುದಾಗಿದೆ.
    ಸೆಕ್ಷನ್‌ 180ರ ಅನ್ವಯ ನಿಯಮ ಉಲ್ಲಂಘನೆಗಾಗಿ ದಂಡ ಅಥವ ಮೂರು ತಿಂಗಳ ಜೈಲುಶಿಕ್ಷೆ ವಿಧಿಸಬಹುದಾಗಿದೆ. ಕೆಲ ಪ್ರಕರಣಗಳಲ್ಲಿ ದಂಡ ಮತ್ತು ಜೈಲು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ
    ‘ಅಪ್ರಾಪ್ತರಿಗೆ ವಾಹನ ಚಲಾಯಿಸಲು ಕೊಟ್ಟವರು ಕ್ರಿಮಿನಲ್‌ ಪ್ರಕರಣ ಎದುರಿಸಬೇಕಾಗುತ್ತದೆ. ಜತೆಗೆ ಸಿಆರ್‌ಪಿಸಿ ಸೆಕ್ಷನ್‌ 107ರ ಅಡಿಯಲ್ಲಿ ಬಾಂಡ್‌ಗೆ ಸಹಿ ಹಾಕಬೇಕು. ಅಪರಾಧವನ್ನು ಪುನರಾವರ್ತಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು. ಮತ್ತೊಮ್ಮೆ ಅಪರಾಧ ಪುನರಾವರ್ತನೆಯಾದಲ್ಲಿ ಭಾರಿ ದಂಡ ಮತ್ತು ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ’ ಎಂದು ಸಂಚಾರ ಪೊಲೀಸ್‌ ವಿಭಾಗದ ಜಂಟಿ ಆಯುಕ್ತ ಬಿ.ಆರ್‌ ರವಿಕಾಂತೇಗೌಡ ತಿಳಿಸಿದ್ದಾರೆ.
    ‘ಅಪ್ರಾಪ್ತರು ದ್ವಿಚಕ್ರ ವಾಹನ ಸವಾರಿ ಮಾಡುವ ಪ್ರವೃತ್ತಿ ಹೆಚ್ಚಿದೆ. ಅವರಿಗೆ ಈ ವಯಸ್ಸಿನಲ್ಲೇ ಮೋಜು ಮಾಡುವ ಹುಮ್ಮಸ್ಸು ಹೆಚ್ಚಿರುತ್ತದೆ. ಅನೇಕರು ಅತಿ ವೇಗದ ಚಾಲನೆ, ವೀಲಿಂಗ್‌, ತ್ರಿಬಲ್‌ ರೈಡಿಂಗ್‌ ಮತ್ತು ಇತರ ಸಾಹಸಗಳನ್ನು ಮಾಡಲು ಬಯಸುತ್ತಾರೆ. ಮಾಧ್ಯಮಗಳಲ್ಲಿ ತೋರಿಸುವ ಇಂತಹ ಸಾಹಸಗಳಿಂದ ಅವರು ಪ್ರಚೋದನೆಗೆ ಒಳಗಾಗುತ್ತಾರೆ’ ಎಂದು ಪಶ್ಚಿಮ ಸಂಚಾರ ವಿಭಾಗ ಡಿಸಿಪಿ ಕುಲದೀಪ್‌ಕುಮಾರ್‌ ಜೈನ್‌ ಹೇಳಿದರು.
    ಮಕ್ಕಳ ಕೈಗೆ ಬೈಕ್‌ ಕೊಡದಿರಿ : ‘ಮಕ್ಕಳು ಶಾಲೆಗೆ ಹೋಗುವಾಗ ಹಾಗು ಹಿಂದಿರುಗುವಾಗ ಗೇರ್‌ಲೆಸ್‌ ಸ್ಕೂಟರ್‌ಗಳಲ್ಲಿ ಡಬಲ್‌ ರೈಡಿಂಗ್‌ ಮಾಡುವುದನ್ನು ನಾನು ಗಮನಿಸಿದ್ದೇನೆ. ವಿಪರ್ಯಾಸವೆಂದರೆ, ಕೆಲ ಪ್ರಕರಣಗಳಲ್ಲಿ ಪಾಲಕರೇ ಹಿಂಬದಿ ಸೀಟಿನಲ್ಲಿ ಕುಳಿತಿರುತ್ತಾರೆ’ ಎಂದು ಸಂಚಾರ ಪೋಲಿಸ್‌ ಇನ್ಸ್‌ಪೆಕ್ಟರೊಬ್ಬರು ಹೇಳಿದರು.
    ‘ಮಕ್ಕಳ ಕೈಗೆ ಸ್ಕೂಟರ್‌/ಬೈಕ್‌ ಕೊಡದಂತೆ ನಾವು ಪೋಷಕರಲ್ಲಿ ಮನವಿ ಮಾಡುತ್ತೇವೆ. 16 ವರ್ಷಕ್ಕೆ ಗೇರ್‌ಲೆಸ್‌ ಸ್ಕೂಟರ್‌ಗಳಿಗಾಗಿ ಕಲಿಕಾ ಪರವಾನಗಿಯನ್ನು ಪಡೆಯಬಹುದಾಗಿದೆ. ಅಲ್ಲಿಯವರೆಗೆ ಕಾಯಿರಿ ಎಂದು ಸಲಹೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.

    Bangalore Karnataka vehicale
    Share. Facebook Twitter Pinterest LinkedIn Tumblr Email WhatsApp
    Previous Articleಒಂದೂವರೆ ವರ್ಷದಲ್ಲಿ ಹತ್ತು‌ ಲಕ್ಷ ನೇಮಕಾತಿ: ಪ್ರಧಾನಿ ಸೂಚನೆ
    Next Article ಖತರ್ನಾಕ್ ಪತ್ನಿ..
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • ylo14 ರಲ್ಲಿ ಸಾಕ್ಷಿ ನಾಶಕ್ಕೆ ಯತ್ನಿಸಿದ ದರ್ಶನ್ ಗ್ಯಾಂಗ್.
    • 0lqk7 ರಲ್ಲಿ Reels Star ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe