Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    Trending

    ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP

    vartha chakraBy vartha chakraಮಾರ್ಚ್ 17, 20243 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.17-  ಲೋಕಸಭೆ ಚುನಾವಣೆಯಲ್ಲಿ ಈ ಬಾರಿ‌ ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರಗಳನ್ನು ಗೆದ್ದು , ದಾಖಲೆ ಸೃಷ್ಟಿಸುವ ತವಕದಲ್ಲಿರುವ ಬಿಜೆಪಿಗೆ ಪಕ್ಷದೊಳಗೆ ಎದ್ದಿರುವ ಭಿನ್ನಮತ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ.
    ಬೆಳಗಾವಿ ಹಾವೇರಿ ಶಿವಮೊಗ್ಗ ತುಮಕೂರು ಮೈಸೂರು ಬೆಂಗಳೂರು ದಾವಣಗೆರೆ ಸೇರಿದಂತೆ ಹಲವು ಕಾಣಿಸಿಕೊಂಡಿರುವ ಭಿನ್ನಮತ ನಾಯಕತ್ವಕ್ಕೆ ದೊಡ್ಡ ಸವಾಲು ತಂದೊಡ್ಡಿದೆ ಈ ಬಿಕ್ಕಟ್ಟನ್ನು ಬಗೆಹರಿಸುವಂತೆ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅವರಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪಕ್ಷದ ತೀರ್ಮಾನದ ವಿರುದ್ಧ ಬಂಡಾಯ ಸಾರಿರುವ ನಾಯಕರ ಜೊತೆ ಮಾತುಕತೆ ನಡೆಸಲು ಯತ್ನಿಸಿದರಾದರೂ ಅನೇಕರು ಇದಕ್ಕೆ ಸ್ಪಂದಿಸದೆ ಇರುವುದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

    ಬೆಳಗಾವಿ ಎಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸುವ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರಭಾಕರ ಕೋರೆ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರು ಬಂಡಾಯ ಸಾರಲು ಸಜ್ಜುಗೊಂಡಿದ್ದಾರೆ. ಜಿಲ್ಲೆಯ ಬಹುತೇಕ ಬಿಜೆಪಿ ಶಾಸಕರು ಈ ಗುಂಪಿನೊಂದಿಗೆ ಗುರುತಿಸಿಕೊಂಡಿದ್ದಾರೆ. ಶೆಟ್ಟರ್ ಅಭ್ಯರ್ಥಿಯೆಂದು ಹೆಸರು ಘೋಷಣೆಗೂ ಮುನ್ನವೇ ಕಾಣಿಸಿಕೊಂಡಿರುವ ಈ ಅಪಸ್ವರ ನಾಯಕತ್ವಕ್ಕೆ ಸವಾಲು ತಂದೊಡ್ಡಿದೆ ಪ್ರಮುಖವಾಗಿ ಪಕ್ಷದ ಶಾಸಕರಾದ ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ ಮತ್ತು ರಮೇಶ ಜಾರಕಿಹೊಳಿ ಅವರು ಸ್ಥಳೀಯರಿಗೆ ಟಿಕೆಟ್ ನೀಡುವಂತೆ ಆಗ್ರಹಿಸುತ್ತಿರುವುದು ಹೈಕಮಾಂಡ್ ಚಿಂತೆಗೆ ಕಾರಣವಾಗಿದೆ.
    ಶೆಟ್ಟರ್ ಸ್ಪರ್ಧೆಗೆ ಆಪಸ್ವರ ಎತ್ತುತ್ತಿರುವ ಎಲ್ಲರೊಂದಿಗೆ ಮಾತನಾಡಿ ಬಿಕ್ಕಟ್ಟು ಬಗೆಹರಿಸಬೇಕು ಎಂದು ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸೂಚನೆ ನೀಡಿದೆ.
    ಮತ್ತೊಂದೆಡೆ, ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನಕ್ಕೆ ಹಲವರು ಮುಂದಾಗಿದ್ದಾರೆ ಅದರಲ್ಲೂ
    ಭಿನ್ನಮತವನ್ನು ಶಮನ ಮಾಡಲು ದಾವಣಗೆರೆಗೆ ತೆರಳಿದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಭೈರತಿ ಬಸವರಾಜ್ ಆಗಮಿಸಿದ್ದರೂ ಟಿಕೆಟ್ ವಂಚಿತರ ಸಂಧಾನ ನಡೆಸುವ ಪ್ರಯತ್ನ ಕೈಗೂಡಲಿಲ್ಲ. ಪ್ರಮುಖರಾದ ಎಂ.ಪಿ.ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಕರುಣಾಕರ ರೆಡ್ಡಿ ಸೇರಿದಂತೆ ಅನೇಕರು ಪಕ್ಷದಿಂದ ದೂರ ಉಳಿದಿದ್ದಾರೆ.

    ತುಮಕೂರಿನಲ್ಲಿ ಬಂಡಾಯ ಸಾರಿರುವ ಮಾಧುಸ್ವಾಮಿ ಅವರ ಜೊತೆಗೆ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ ಬಿಕ್ಕಟ್ಟು ಬಗೆಹರಿಸುವ ಪ್ರಯತ್ನ ನಡೆಸಿದರೂ ಅದು ಫಲ ನೀಡಿಲ್ಲ
    ಚಿಕ್ಕಮಗಳೂರು, ಉಡುಪಿಯಲ್ಲೂ ಭಿನ್ನಮತ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಟಿ.ರವಿ ಮುನಿಸಿಕೊಂಡಿರುವುದು ಪಕ್ಷಕ್ಕೆ ದುಬಾರಿಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಉತ್ತರಕನ್ನಡ ಜಿಲ್ಲೆಯಲ್ಲೂ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ನಡುವೆ ಟಿಕೆಟ್ ಸ್ಪರ್ಧೆ ಏರ್ಪಟ್ಟಿದೆ.

    ಈಶ್ವರಪ್ಪ ಬಿಗಿಪಟ್ಟು:
    ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವ ಬಂಡಾಯ ತಲೆ ನೋವಾಗಿ ಪರಿಣಮಿಸಿದೆ. ಮುನಿಸು ಮರೆತು ನಾಳೆ ಶಿವಮೊಗ್ಗದಲ್ಲಿ ನಡೆಯುತ್ತಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಹಿರಿಯ ನಾಯಕರು ಈಶ್ವರಪ್ಪ ಅವರಿಗೆ ಮನವಿ ಮಾಡಿದರೂ ಅದಕ್ಕೆ ಅವರು ಸೊಪ್ಪು ಹಾಕಿಲ್ಲ.
    ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಒಳಗೊಂಡ ಪಕ್ಷದ ನಿಯೋಗ ಈಶ್ವರಪ್ಪ ಅವರ ಮನೆಗೆ ಆಗಮಿಸಿ ಮನವೊಲಿಸಲು ಸಭೆ ನಡೆಸಲಾಯಿತು. ಆದರೆ, ಇದಕ್ಕೆ ಜಗ್ಗದ ಈಶ್ವರಪ್ಪ, ಸಭೆಯ ಮಧ್ಯದಲ್ಲಿಯೇ ಬೇರೆ ಕಾರ್ಯಕ್ರಮದ ನಿಮಿತ್ತ ಎದ್ದು ತೆರೆಳಿದರು.
    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿ ಮಾ.18ಕ್ಕೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಆದರೆ, ಕಾರ್ಯಕ್ರಮದ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ’ಎಂದು ಹೇಳಿದರು.
    ಪ್ರಧಾನಿ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಆದರೆ, ಏಕ ಕುಟುಂಬದ ಕಪಿಮುಷ್ಠಿಯಿಂದ ಪಕ್ಷವನ್ನು ಬಿಡುಗಡೆ ಮಾಡಬೇಕು ಎನ್ನುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ. ಗೆದ್ದ ಬಳಿಕ ಮೋದಿ ಬಳಿ ಹೋಗುವೆ. ಕಾರ್ಯಕ್ರಮಕ್ಕೆ ತೆರಳದಿರುವ ಕುರಿತ ದುಃಖವಿದೆ’ ಎಂದು ತಿಳಿಸಿದರು.

    ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಯಡಿಯೂರಪ್ಪ ಅವರು ಸಂಧಾನಕ್ಕಾಗಿ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸಿದ್ದರು. ನಾನು ಅವರ ಸಂಧಾನಕ್ಕೆ ಒಪ್ಪಿಲ್ಲ. ನನ್ನ ಪುತ್ರನಿಗೆ ಟಿಕೆಟ್ ತಪ್ಪಿಸಿದ್ದು ಮಾತ್ರವಲ್ಲ, ನನಗೆ ಯಡಿಯೂರಪ್ಪ ಕುಟುಂಬದವರು ಮೋಸ ಮಾಡಿದ್ದಾರೆ’ ಎಂದು ದೂರಿದರು.
    ಯಡಿಯೂರಪ್ಪ ಹಾಗೂ ಅವರ ಪುತ್ರರ ಕೈಯಿಂದ ಪಕ್ಷ ನಲುಗುತ್ತಿದೆ. ಲಿಂಗಾಯತರೆಲ್ಲರೂ ಯಡಿಯೂರಪ್ಪ ಅವರ ಕೈಯಲ್ಲಿದ್ದಾರೆಂಬ ಭ್ರಮೆಯಲ್ಲಿ ಕೇಂದ್ರದ ನಾಯಕರಿದ್ದಾರೆ. ಪಕ್ಷ ನಿಷ್ಠೆಯಿಂದ ಹಲವಾರು ವರ್ಷಗಳಿಂದ ಇದ್ದೇನೆ. ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರದೇ ರಾಜ್ಯಭಾರವಾಗಿದೆ. ನೊಂದ ಕಾರ್ಯಕರ್ತರು ಇವರಿಂದ ನಲುಗಿ ಹೋಗಿದ್ದಾರೆ’ ಎಂದು ಆರೋಪಿಸಿದರು.

    Verbattle
    Verbattle
    Verbattle
    BJP ಈಶ್ವರಪ್ಪ ಉಡುಪಿ ಚುನಾವಣೆ ತುಮಕೂರು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಕಣಕ್ಕೆ | Mysore-Kodagu
    Next Article ಅಂಗಡಿಯಲ್ಲಿ ಭಕ್ತಿ ಗೀತೆ ಹಾಕಬಾರದಾ? | Devotional Music
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    3 ಪ್ರತಿಕ್ರಿಯೆಗಳು

    1. PrestonShiny on ನವೆಂಬರ್ 28, 2025 10:31 ಫೂರ್ವಾಹ್ನ

      ?Celebremos a cada emblema de las apuestas !
      http://www.bikesworldrevista.es/
      Casas de apuestas sin licencia espaГ±ola permiten jugar desde dispositivos mГіviles sin pГ©rdida de calidad. Las apuestas en vivo se disfrutan con menor latencia. TambiГ©n se pueden probar estrategias en versiones demo antes de apostar dinero real.
      apuestas sin registro: comparativa Гєtil para principiantes – bikesworldrevista.es
      ?Que la suerte te beneficie con que goces de extraordinarios beneficios inesperados !

      Reply
    2. avigroup on ಡಿಸೆಂಬರ್ 30, 2025 6:00 ಅಪರಾಹ್ನ

      Нужен трафик и лиды? https://avigroup.pro/kazan/sozdanie-sajtov/ SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply
    3. Stevenbus on ಜನವರಿ 19, 2026 5:16 ಅಪರಾಹ್ನ

      Hello caretakers of clear serenity!
      As technology advances, the best air purifier for smoke and pets often includes multiple cleaning modes. These modes allow for customized settings based on both your current air quality needs and the environment. best air purifier for smoke. Tailoring your air purification strategy can maximize effectiveness and satisfaction.
      If you’re considering an investment in your air quality, the best air purifiers for smokers can offer long-term benefits. The health advantages of cleaner air are profound, making them a worthwhile addition to your home. Prioritizing air quality leads to a happier, healthier living environment.
      Eliminate Allergens Using the Best Air Purifier for Smoke and Dust – п»їhttps://airpurifierforcigarettesmoke.vercel.app/
      May you enjoy remarkable invigorating environments !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cliftondef ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • code promo 1xbet tours gratuits ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Georgemen ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.