Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮರಾಜ್ಯ ಎಲ್ಲಿದೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ | Eshwar Khandre
    ರಾಜ್ಯ

    ರಾಮರಾಜ್ಯ ಎಲ್ಲಿದೆ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraಜನವರಿ 23, 202437 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು, ಜ.23: ಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ, ಆದರೆ, ರಾಹುಲ್ ಗಾಂಧೀ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ ಎಂದು ಅರಣ್ಯ, ಸಚಿವ ಈಶ್ವರ ಖಂಡ್ರೆ (Eshwar Khandre) ಪ್ರಶ್ನಿಸಿದ್ದಾರೆ.
    ರಾಹುಲ್ ಗಾಂಧಿ ಅವರ ನ್ಯಾಯಯಾತ್ರೆ ಮೇಲಿನ ದಾಳಿ ವಿರೋಧಿಸಿ, ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ವೇಳೆ ಮಾತನಾಡಿದರು.

    ರಾಜಕೀಯ ಸ್ವಾರ್ಥಕ್ಕಾಗಿ ಇಂದು ದೇಶವನ್ನು ಧರ್ಮ, ಜಾತಿ ಹೆಸರಲ್ಲಿ ಒಡೆಯಲಾಗುತ್ತಿದೆ. ಇದು ದೇಶದ ಸಮಗ್ರತೆ, ಸಾರ್ವಭೌಮತ್ವಕ್ಕೆ ಮಾರಕವಾಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
    ರಾಹುಲ್ ಅವರ ನ್ಯಾಯ ಯಾತ್ರೆಯಲ್ಲಿ ಬಿಜೆಪಿಯ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿ, ದಾಳಿ ಮಾಡುತ್ತಿರುವುದು ಅಕ್ಷಮ್ಯ ಮತ್ತು ಹೇಯ ಕೃತ್ಯ.ಇದು ಪ್ರಜಾಪ್ರಭುತ್ವ ನೀತಿಗೆ ವಿರುದ್ಧವಾಗಿದೆ.ಬಿಜೆಪಿ ಬಾಯಲ್ಲಿ ಶಾಂತಿ ಮಂತ್ರ ಪಠಿಸುತ್ತದೆ. ಬಗಲಲ್ಲಿ ದೊಣ್ಣೆ ಹಿಡಿದು ಹಲ್ಲೆಗೆ ಹೋಗುತ್ತದೆ ಎಂದು ಟೀಕಿಸಿದರು
    ಬಿಜೆಪಿಯ ಕಾರ್ಯಕರ್ತರು ಬಡಿಗೆ ಹಿಡಿದು ತಮ್ಮ ನ್ಯಾಯ ಯಾತ್ರೆಯ ಬಸ್ ಹಿಂದೆ ಬಂದಿದ್ದರು ಎಂದು ನಾಗಾಂವ್ ನಲ್ಲಿ ಸ್ವತಃ ರಾಹುಲ್ ಗಾಂಧೀ ಅವರೇ ಹೇಳಿದ್ದಾರೆ. ಜೊತೆಗೆ ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯ ಯಾತ್ರೆಯಲ್ಲಿ ಭಾಗಿಯಾಗದಂತೆ ಆ ರಾಜ್ಯದ ಜನತೆಗೆ ಬೆದರಿಕೆ ಹಾಕುತ್ತಿದೆ. ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿದ್ದೇವೆಯೋ ಎಂದು ಪ್ರಶ್ನಿಸಿದರು.

    ಬಿಜೆಪಿ ಬಾವುಟ ಹಿಡಿದು ಬಂದ ಗುಂಪು ನ್ಯಾಯ ಯಾತ್ರೆಗೆ ಅಡ್ಡಿಪಡಿಸುತ್ತಿದೆ. ಆದರೆ ನ್ಯಾಯ ಯಾತ್ರೆ ನಿಲ್ಲುವುದಿಲ್ಲ.
    ರಾಹುಲ್ ಗಾಂಧೀ ಅವರ ಭಾರತ್ ಜೋಡೋ ಯಾತ್ರೆಗೆ ಮತ್ತು ನ್ಯಾಯಯಾತ್ರೆಗೆ ದೇಶಾದ್ಯಂತ ದೊರಕುತ್ತಿರುವ ಜನ ಬೆಂಬಲದಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿಯೇ ಈ ರೀತಿ ದಾಳಿ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
    ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಎಲ್ಲ ಪಕ್ಷಗಳಿಗೂ ಸಮಾನವಾದ ಅವಕಾಶ ಇರಬೇಕು ಎಂದು ಹೇಳಿದರು.

    ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಮುಜರಾಯಿ ಇಲಾಖೆ ಮತ್ತು ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ಹಲವಾರು ದೇವಾಲಯಗಳು ಸಂರಕ್ಷಣೆ ಮಾಡಲಾಗಿದೆ, ಆದರೆ ಅದನ್ನು ಕಾಂಗ್ರೆಸ್ ಎಂದಿಗೂ ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ, ಆದರೆ ನಕಲಿ ದೇಶಭಕ್ತರು ಇದನ್ನೇ ಚುನಾವಣಾ ತಂತ್ರ ಮಾಡುತ್ತಿದ್ದಾರೆ ಎಂದು ಹೇಳಿದರು.
    ನಮಗೆಲ್ಲರಿಗೂ ಶ್ರೀ ರಾಮನ ಬಗ್ಗೆ ಗೌರವ ಪ್ರೀತಿ ಇದೆ, ನಾವು ಕೂಡ ಜೈ ಶ್ರೀರಾಮ್, ರಾಮ್ ರಾಮ್ ಎನ್ನುತ್ತೇವೆ. ಈ ಘೋಷಣೆಯಿಂದ ಭಕ್ತಿ ಶ್ರದ್ಧೆ ಮೂಡಬೇಕೆ ಹೊರತು ಅದು ದ್ವೇಷ ಹುಟ್ಟಿಸುವಂತಿರಬಾರದು ನಕಲಿ ದೇಶಭಕ್ತರು ಈ ಘೋಷಣೆಯನ್ನು ಸಂಘರ್ಷಕ್ಕೆ ಬಳಸುತ್ತಿದ್ದಾರೆ, ಇದು ಸರ್ವತ ಸಲ್ಲ ಎಂದರು.

    BJP Congress Eshwar Khandre Karnataka News Politics Trending war ಕಾಂಗ್ರೆಸ್ ಧರ್ಮ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪೋಲಿಸ್ ನೇಮಕ ಅಕ್ರಮ – ಹಲವರ ಎದೆಯಲ್ಲಿ ಡವ ಡವ | PSI Scam
    Next Article ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು | Siddaramaiah
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rylonnie shtori na plastikovie okna s elektroprivodom_npSn ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    • Georgehes ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektrokarniz kypit_ffsl ರಲ್ಲಿ ಬೆಂಗಳೂರಿಗೆ ಎರಡು ಸಾವಿರ ಹೆಚ್ಚುವರಿ ಪೊಲೀಸ್
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe