Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಮ್ಯಾ ಓಟ್ ಯಾರಿಗೆ ಗೊತ್ತಾ?
    ಬೆಂಗಳೂರು

    ರಮ್ಯಾ ಓಟ್ ಯಾರಿಗೆ ಗೊತ್ತಾ?

    vartha chakraBy vartha chakraಸೆಪ್ಟೆಂಬರ್ 5, 2022Updated:ಮಾರ್ಚ್ 20, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಸ್ಯಾಂಡಲ್ವವುಡ್ ನ ಮೋಹಕತಾರೆ ರಮ್ಯಾ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ.ಈಗ ಒಂದು ಕುತೂಹಲಕರ ಹೇಳಿಕೆಯ ಮೂಲಕ ಸುದ್ದಿಯಲ್ಲಿದ್ದಾರೆ ಅದು ಏನೆಂದರೆ ತಾವು ‌ಈ ಬಾರಿ ಯಾರಿಗೆ ಓಟ್ ಹಾಕುತ್ತೇನೆಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
    ಅದು ತಿಳಿಯಬೇಕಾದರೆ ಈ ಸ್ಟೋರಿನಾ ನೋಡಿ ಹಾಗೆ ಇದನ್ನು ಶೇರ್ ಮಾಡಿ ಸಬ್ ಸ್ಕ್ರೈಬ್ ಮಾಡೋದನ್ನು ಮರೆಯಬೇಡಿ.
    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆರಾಯ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಗ್ರಾಮೀಣ ಪ್ರದೇಶದ ಜನತೆಯಂತೂ ವರುಣನ ಆರ್ಭಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ.
    ಇನ್ನೂ ಮಹಾನಗರಿ ಬೆಂಗಳೂರಂತೂ ಅಧ್ವಾನ ನಗರಿಯಾಗಿದೆ.ಕಳೆದ ಮೂರು ವರ್ಷಗಳಿಂದಲೂ ಕುಂಟುತ್ತಾ ಸಾಗಿರುವ ರಸ್ತೆ ನಿರ್ಮಾಣ, ಒಳ ಚರಂಡಿ ಹೂಳೆತ್ತುವಿಕೆ,ಸ್ಮಾರ್ಟ್ ಸಿಟಿಯ ಕಾಮಗಾರಿಗಳು ಜನರನ್ನು ಹೈರಾಣಗೊಳಿಸಿವೆ.
    ಜೂನ್ ನಿಂದ ‌ಸುರಿಯುತ್ತಿರುವ ಮಳೆ ಕಾಮಗಾರಿ ವಿಳಂಬಕ್ಕೆ‌ ಮತ್ತಷ್ಟು ಕೊಡುಗೆ ನೀಡಿದರೆ,ಕೆರೆ,ರಾಜಾ ಕಾಲುವೆ ಒತ್ತುವರಿ, ಹೂಳು ತುಂಬಿರುವ ಚರಂಡಿಗಳಿಂದಾಗಿ ಬೆಂಗಳೂರಿನ ಹಲವು ಬಡಾವಣೆಗಳು ನೀರಿನಿಂದ ಆವೃತವಾಗಿವೆ. ಇದರಿಂದ ನಗರದ ಜನತೆ ಪಾಲಿಕೆಗೆ ಹಿಡಿಶಾಪ ಹಾಕುತ್ತಿದ್ದಾರೆ.
    ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಳ್ಳುತ್ತಿದ್ದು ಅದನ್ನು ನಿಭಾಯಿಸಲು ಹೆಣಗಾಡಿದ ಸಂಚಾರಿ ಪೊಲೀಸರು ಬೆಳ್ಳಂದೂರು ಕಡೆ ಬರಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ.
    ಹೊರವರ್ತುಲ ರಸ್ತೆಯಲ್ಲಿ ಬೆಳ್ಳಂದೂರಿನಿಂದ ಸಿಲ್ಕ್ ಬೋರ್ಡ್ ವರೆಗೆ ಅಲ್ಲಿಂದ ಕೆಆರ್ ಪುರಂ ವರೆಗೆ ಅಗತ್ಯವಿದ್ದರೆ ಮಾತ್ರ ವಾಹನ ಸಂಚಾರ ನಡೆಸಲು ಮನವಿ ಮಾಡಿದ್ದಾರೆ.
    ಹೊರವರ್ತುಲ ರಸ್ತೆಯಲ್ಲಿ ಬೆಳ್ಳಂದೂರಿನಿಂದ ಸಿಲ್ಕ್ ಬೋರ್ಡ್, ಕೆಆರ್ ಪುರಂ ವರೆಗೆ ಅಪಾರ ಪ್ರಮಾಣದ ನೀರು ಮಳೆಯಿಂದ ತುಂಬಿದ್ದು ದ್ವಿಚಕ್ರ ವಾಹನ ಸವಾರರು ಸಂಚಾರ ಕಡಿಮೆ ಮಾಡಲು ಮನವಿ‌ ಮಾಡಲಾಗಿದೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ತಿಳಿಸಿದ್ದಾರೆ.
    ಮಳೆ ಹೆಚ್ಚಾದ ವೇಳೆ ಹೊರವರ್ತುಲ ರಸ್ತೆಯನ್ನು ಬಿಟ್ಟು ಪರ್ಯಾಯ ರಸ್ತೆಯಲ್ಲಿ ಸಂಚರಿಸಬೇಕು ರಾತ್ರಿ ವೇಳೆ ಮಳೆ ಹೆಚ್ಚಾದರೆ ಯಾವುದೇ ಕಾರಣಕ್ಕೂ ಹೊರವರ್ತುಲ ರಸ್ತೆಗೆ ಬರದಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.
    ಇದು‌ ಒಂದೆಡೆಯಾದರೆ ಹೊರ ವರ್ತುಲ ರಸ್ತೆಯ ಐಟಿ ಕಂಪನಿಗಳ ಮುಖ್ಯಸರು , ಉದ್ಯಮಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಲು ಕೋರಿದ್ದಾರೆ.ಇಲ್ಲಿರುವ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ಹೇಳಿ ನಾವು ಬೇರೆ ರಾಜ್ಯಕ್ಕೆ ವಲಸೆ ಹೋಗುತ್ತೇವೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
    ಇದೆಲ್ಲದರ ನಡುವೆ ಉದ್ಯಮಿ ಮೋಹನ್ ದಾಸ್ ಪೈ ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿಯ ಸಮಯದಲ್ಲಿ ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದರು.
    ಇದೀಗ ಮೋಹಕತಾರೆ ರಮ್ಯ ಬೆಂಗಳೂರಿನ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ.ರಾಜಾಕಾಲುವೆ,ಕೆರೆ ಒತ್ತುವರಿ ತೆರವುಗೊಳಿಸಿ ಬೆಂಗಳೂರು ನೀರಿನಿಂದ ಮುಳುಗಡೆಯಾಗುವುದನ್ನು ತಪ್ಪಿಸಿ,ಇಲ್ಲಿನ ಸಂಚಾರ ದಟ್ಟಣೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.ಇಲ್ಲಿನ ‌ಸಮಸ್ಯ ಯಾರು ಬಗೆಹರಿಸುತ್ತಾರೋ ಅವರಿಗೆ ನಾನು ಓಟ್ ಹಾಕುತ್ತೇನೆ ಎಂದಿದ್ದಾರೆ. ಗೊತ್ತಾಯ್ತಲ್ಲ ಈಗ ರಮ್ಯಾ ಓಟ್ ಬೇಕಾದರೆ ಎನು ಮಾಡಬೇಕೂಂತ..

    Bangalore bollywood Entertainment kannada movies News Trending ಕಲೆ ಕಾಲೇಜು ಚಲನಚಿತ್ರ
    Share. Facebook Twitter Pinterest LinkedIn Tumblr Email WhatsApp
    Previous ArticleBangalore drowned by the commission
    Next Article ಕೊರಟಗೆರೆ-ಮಧುಗಿರಿಯಲ್ಲಿ ಜಲ ದಿಗ್ಬಂಧನ
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://arecahotel.vn/betvisa-118/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Timothyfloor ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Richardhew ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe