Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ದರ ಹೆಚ್ಚಳ ಯಾರು, ಹೇಗೆ ಮಾಡಿದ್ದು ಗೊತ್ತಾ!
    ಬೆಂಗಳೂರು

    ವಿದ್ಯುತ್ ದರ ಹೆಚ್ಚಳ ಯಾರು, ಹೇಗೆ ಮಾಡಿದ್ದು ಗೊತ್ತಾ!

    vartha chakraBy vartha chakraಜೂನ್ 13, 2023Updated:ಜೂನ್ 13, 20231 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮಾಸಿಕ ಸರಾಸರಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಉಚಿತ ನೀಡುವ ಯೋಜನೆ ಜಾರಿಗೆ ಬರುತ್ತಿರುವ ಬೆನ್ನಲ್ಲೇ ವಿದ್ಯುತ್ ದರ ಹೆಚ್ಚಳಗೊಂಡಿದೆ.
    ದರ ಹೆಚ್ಚಳದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಇದನ್ನೇ ಬಂಡವಾಳವಾಗಿಸಿಕೊಂಡ ಬಿಜೆಪಿ ಮತ್ತು ಸಂಘ ಪರಿವಾರ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಉಂಟಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಅಪಪ್ರಚಾರದಲ್ಲಿ ನಿರತವಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
    ವಾಸ್ತವವಾಗಿ ವಿದ್ಯುತ್ ದರ ಹೆಚ್ಚಳ ಎನ್ನುವುದು ಸರ್ಕಾರದ ತೀರ್ಮಾನವಲ್ಲ ಅದನ್ನು ಪ್ರತಿವರ್ಷ ವಿದ್ಯುತ್ ದರ ನಿಯಂತ್ರಣ ಆಯೋಗ ಮಾಡಲಿದೆ. ಸಂಸ್ಥೆಯಾದ ಆಯೋಗ ನ್ಯಾಯಾಂಗ ರೀತಿಯಲ್ಲಿ ಕೆಲಸ ಮಾಡಲಿದೆ. ವಿದ್ಯುತ್ ದರ ಪರಿಷ್ಕರಣೆ, ವಿದ್ಯುತ್ ಖರೀದಿ ಒಪ್ಪಂದ ಸಿರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ದರ ನಿಯಂತ್ರಣ ಆಯೋಗ ತೀರ್ಮಾನಿಸಲಿದೆ.
    ವಿದ್ಯುತ್ ವಿತರಣಾ ಸಂಸ್ಥೆಗಳು ಪ್ರತಿ ವರ್ಷ ತಾವು ಗ್ರಾಹಕರಿಗೆ ಪೂರೈಸುವ ವಿದ್ಯುತ್ ಗೆ ಉತ್ಪಾದನಾ ಸಂಸ್ಥೆಗಳಿಗೆ ಯಾವ ಬೆಲೆ ನೀಡುತ್ತವೆ ಅದರ ಪೂರೈಕೆ ಮತ್ತು ವಿತರಣೆಗೆ ಆಗುವ ವೆಚ್ಚ ಸಿಬ್ಬಂದಿಯ ವೇತನ ಎಲ್ಲಾ ಅಂಶಗಳನ್ನು ಲೆಕ್ಕ ಹಾಕಿ ದರ ಪರಿಷ್ಕರಣೆ ಮಾಡುವಂತೆ ಆಯೋಗಕ್ಕೆ ಮಾಡುವಂತೆ ಮನವಿ ಸಲ್ಲಿಸುತ್ತವೆ.
    ದರ ಪರಿಷ್ಕರಣೆಯ ಮನವಿಯನ್ನು ಗುಪ್ತವಾಗಿ ಸಲ್ಲಿಸಲು ಬರುವುದಿಲ್ಲ ಈ ಮನವಿಯ ಬಗ್ಗೆ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳು ವೃತ್ತ ಪತ್ರಿಕೆಗಳಲ್ಲಿ ಜಾಹೀರಾತಿನ ಮೂಲಕ ಸಾರ್ವಜನಿಕರ ಅವಗಾಹನೆಗೆ ಪ್ರಕಟಿಸಬೇಕು. ಆನಂತರ ಆಯೋಗ ಈ ಮನವಿಯನ್ನು ವಿಚಾರಣೆಗೆ ನಿಗದಿ ಪಡಿಸುತ್ತದೆ ಯಾವುದೇ ನಾಗರೀಕರು ಸಂಘ ಸಂಸ್ಥೆಗಳು ರಾಜಕೀಯ ಪಕ್ಷಗಳು ಆಯೋಗದ ಮುಂದೆ ಹಾಜರಾಗಿ ತಮ್ಮ ವಾದ ಮಂಡಿಸಲು ಮುಕ್ತ ಅವಕಾಶ ಕಲ್ಪಿಸಲಾಗುತ್ತದೆ.
    ನಿಗದಿಪಡಿಸಿದ ದಿನದಂದು ಆಯೋಗದ ಮುಖ್ಯಸ್ಥರು ಸಾರ್ವಜನಿಕ ವಿಚಾರಣೆ ನಡೆಸಲಿದ್ದಾರೆ ಈ ವೇಳೆ ಪರ ಮತ್ತು ವಿರೋಧದ ಅಭಿಪ್ರಾಯ ಆಲಿಸಿ ಆಯೋಗ ತನ್ನ ತೀರ್ಪು ಪ್ರಕಟಿಸಲಿದೆ ಈ ತೀರ್ಪು ಪ್ರತಿ ವರ್ಷ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.
    ಅದೇ ರೀತಿಯಲ್ಲಿ ಈ ವರ್ಷವೂ ದರ ನಿಯಂತ್ರಣ ಆಯೋಗ ತನ್ನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಏಪ್ರಿಲ್ ಒಂದರಿಂದ ಜಾರಿಗೆ ಬರುವಂತೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಆದರೆ ಅಂದು ಆಡಳಿತ ನಡೆಸುತ್ತಿದ್ದ ಬಿಜೆಪಿ ನೇತೃತ್ವದ ಸರ್ಕಾರ ಚುನಾವಣೆಯ ಹಿನ್ನೆಲೆಯಲ್ಲಿ ಈ ಆದೇಶವನ್ನು ಜೂನ್ ಒಂದರವರೆಗೆ ಜಾರಿಗೊಳಿಸದಂತೆ ಎಲ್ಲಾ ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಆದೇಶ ನೀಡಿತ್ತು.
    ಅದರಂತೆ ಇದೀಗ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡಿದ್ದು ಈ ಹಿಂದಿನ ಸರ್ಕಾರ ನೀಡಿದ ಸೂಚನೆ ಅನ್ವಯ ಜೂನ್ ಒಂದರಿಂದ ದರ ಹೆಚ್ಚಳ ಆದೇಶ ಜಾರಿಗೆ ವಿದ್ಯುತ್ ವಿತರಣಾ ಸಂಸ್ಥೆಗಳು ಮುಂದಾಗಿವೆ ಈ ವೇಳೆ ಆದೇಶವನ್ನು ಏಪ್ರಿಲ್ ಒಂದರಿಂದ ಜಾರಿಗೆ ತಂದಿದ್ದು ಅಂದಿನ ವಿದ್ಯುತ್ ಬಳಕೆಯನ್ನು ಇಂದಿನ ದರ ಹೆಚ್ಚಳದ ಆದೇಶಕ್ಕೆ ಲೆಕ್ಕಾಚಾರ ಮಾಡಿ ಗ್ರಾಹಕರಿಗೆ ವಿತರಣೆ ಮಾಡಿವೆ.
    ಇದರ ಜೊತೆಯಲ್ಲಿ ಇದರ ಜೊತೆಯಲ್ಲಿ ಅಂದು ಆಡಳಿತ ನಡೆಸುತ್ತಿದ್ದ ಸರ್ಕಾರ ಹೆಚ್ಚಳದ ಮನವಿಯ ಕುರಿತಂತೆ ಸರಿಯಾಗಿ ಅಧ್ಯಯನ ಮಾಡದೆ ಆಯೋಗದ ಮುಂದೆ ತಪ್ಪು ಮನವಿಯನ್ನು ಸಲ್ಲಿಸಿದ ಪರಿಣಾಮ ಗ್ರಾಹಕರು ದರ ಏರಿಕೆಯ ಬರೆ ಹಾಕಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
    ವಿದ್ಯುತ್ ದರ ನಿಯಂತ್ರಣ ಆಯೋಗ ನೀಡಿರುವ ಆದೇಶದ ಅನ್ವಯ ಗೃಹಬಳಕೆ ಗ್ರಾಹಕರು ಬಳಸಿದ ಮೊದಲ ನೂರು ಯೂನಿಟ್ ವರೆಗೆ ಪ್ರತಿ ಯೂನಿಟ್ ವಿದ್ಯುತ್ ಗೆ ನಾಲ್ಕು ರೂಪಾಯಿ 75 ಪೈಸೆ ಶುಲ್ಕ ವಿಧಿಸಲಾಗುತ್ತದೆ ಆನಂತರದನ್ನು ಎರಡನೇ ಸ್ಲಾಬ್ ಎಂದು ಪರಿಗಣಿಸಿ ಪ್ರತಿ ಯೂನಿಟ್ ಗೆ ಏಳು ರೂಪಾಯಿ ದರ ನಿಗದಿಪಡಿಸಲಾಗಿದೆ ಇದು ಹಿಂದಿನ ಸರ್ಕಾರ ಆಯೋಗಕ್ಕೆ ನೀಡಿದ ತಪ್ಪು ಮಾಹಿತಿ ಅನ್ವಯ ಹೊರಡಿಸಲಾಗಿರುವ ಆದೇಶವಾಗಿದೆ.
    ನೆರವಿಗೆ ಬಂದ ಮಂತ್ರಿ ಜಾರ್ಜ್:
    ಈ ಬಗ್ಗೆ ಸಾರ್ವಜನಿಕ ವಲಯದಿಂದ ವ್ಯಾಪಕ ಅಸಮಾಧಾನಗಳು ಮತ್ತು ದೂರಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರು ದರ ಹೆಚ್ಚಳ ಆದೇಶದ ಕುರಿತಂತೆ ಉಂಟಾಗಿರುವ ಲೋಪಗಳನ್ನು ಸರಿಪಡಿಸುವಂತೆ ಕೋರಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದಾರೆ.
    ಇದಕ್ಕೂ ಮುನ್ನ ದರ ನಿಯಂತ್ರಣ ಆಯೋಗದ ತೀರ್ಪಿನಲ್ಲಿ ಇರುವ ಲೋಪ ದೋಷಗಳ ಬಗ್ಗೆ ಅಧ್ಯಯನ ನಡೆಸಲು ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಅಧಿಕಾರಿಯ ವರದಿ ಬಂದ ನಂತರ ಆಯೋಗಕ್ಕೆ ಮೇಲ್ಮನವಿ ಸಲ್ಲಿಸುವ ಜೊತೆಗೆ ನೂತನ ದರ ಹೆಚ್ಚಳದ ಆದೇಶ ಜಾರಿ ಕುರಿತಂತೆಯೂ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

    Verbattle
    Verbattle
    Verbattle
    ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleತಾಯಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಮಗಳು
    Next Article ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    1 ಟಿಪ್ಪಣಿ

    1. Zdnuky on ಫೆಬ್ರವರಿ 13, 2026 8:34 ಫೂರ್ವಾಹ್ನ

      betmgm sports betting online casino betmgm play mgm promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Eboqru ರಲ್ಲಿ ಲೋಕಸಭೆ ಅಖಾಡದಲ್ಲಿ ಅಕ್ರಮದ್ದೆ ಬಾರಿ ಸದ್ದು | Lok Sabha 2024
    • LinwoodGah ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.