Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach
    Trending

    ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach

    vartha chakraBy vartha chakraಡಿಸೆಂಬರ್ 13, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಲೋಕಸಭಾ (Lok Sabha Security Breach) ಕಲಾಪ ನಡೆಯುತ್ತಿರುವ ವೇಳೆಯೇ ಪ್ರೇಕ್ಷಕರ ಗ್ಯಾಲರಿಯಿಂದ ಹಾರಿದ ಇಬ್ಬರು ಆಗಂತುಕರು, ಹಳದಿ ಬಣ್ಣದ ಹೊಗೆ ಎರಚಿ ಆತಂಕ ಸೃಷ್ಟಿಸಿದರು. ಅದರಲ್ಲಿ ಒಬ್ಬ ಸಂಸದರು ಕುಳಿತುಕೊಳ್ಳುವ ಮೇಜುಗಳ ಮೇಲೆಯೇ ಓಡುವ ದೃಶ್ಯ ಲೋಕಸಭೆಯ ಕಲಾಪದ ವಿಡಿಯೊದಲ್ಲಿ ದಾಖಲಾಗಿದೆ.
    ಲೋಕಸಭಾ ಕಲಾಪ ವೀಕ್ಷಣೆಗಾಗಿ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1ರ ಸುಮಾರಿಗೆ ಏಕಾಏಕಿ ಸದನದೊಳಗೆ ನುಗ್ಗಿ, ಹಳದಿ ಬಣ್ಣದ ಹೊಗೆ ಸಿಂಪಡಿಸಿ, ‘ಸರ್ವಾಧಿಕಾರ ನಡೆಯುವುದಿಲ್ಲ’ ಎಂದು ಘೋಷಣೆ ಕೂಗಿದರು. ಇವರನ್ನು ಇದೀಗ ಬಂಧಿಸಲಾಗಿದೆ.ಇಬ್ಬರಿಗೂ ಕಲಾಪ ವೀಕ್ಷಿಸಲು ಮೈಸೂರಿನ ಸಂಸದ ಪ್ರತಾಪ್ ಸಿಂಹ ಪಾಸ್‌ ನೀಡಲು ಶಿಫಾರಸು ಮಾಡಿದ್ದಾರೆ.

    ಹೀಗಾಗಿ ಇವರು ಯಾರು ಎಂಬ ಹುಡುಕಾಟ ನಡೆದಿದ್ದು ಸಾಗರ್ ಶರ್ಮಾ‌ ಉತ್ತರ ಪ್ರದೇಶದವರಾದರೆ ,ಮತ್ತೊಬ್ಬ ಮನೋರಂಜನ್, ಮೈಸೂರಿನವರು.
    34 ವರ್ಷದ ಮನೋರಂಜನ್ ಮೈಸೂರಿನ ವಿಜಯನಗರ 2ನೇ ಹಂತದ ನಿವಾಸಿಯಾಗಿರುವ ದೇವರಾಜೇ ಗೌಡ ಅವರ ‍ಪುತ್ರ.ಇವರು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನ ಮಲ್ಲಾಪುರ ಗ್ರಾಮದವರು.ವೃತ್ತಿಯಲ್ಲಿ ಕೃಷಿಕರಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದಾರೆ
    ಬಿ.ಇ.ಪದವೀಧರನಾಗಿರುವ ಮನೋರಂಜನ್, ಮೈಸೂರಿನಲ್ಲಿ ಹುಟ್ಟಿ, ಅಲ್ಲಿಯೇ ಪ್ರಾಥಮಿಕ ಹಾಗೂ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ ಬೆಂಗಳೂರಿನ ಬಿಐಟಿ ಕಾಲೇಜಿನಿಂದ ಬಿಇ ಪದವಿ ಪಡೆದು ಮನೆಯಲ್ಲಿದ್ದರು.

    ಸುದ್ದಿ ಹೊರಬೀಳುತ್ತಿದ್ದಂತೆ,ವಿಜಯನಗರದ 2ನೇ ಹಂತದಲ್ಲಿರುವ ನಿವಾಸಕ್ಕೆ ವಿಜಯನಗರ ಉಪ ವಿಭಾಗದ ಉಪ ಪೊಲೀಸ್ ಆಯುಕ್ತ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಅವರ ತಂದೆ ದೇವರಾಜೇ ಗೌಡ ಅವರಿಂದ ಮಗನ ಬಗ್ಗೆ ಮಾಹಿತಿ ಪಡೆದರು.
    ಈ ವೇಳೆ ಮನೆಯಲ್ಲಿ ಕ್ರಾಂತಿಕಾರಿ ಚಿಗುವೆರಾ ಸೇರಿದಂತೆ ಹಲವು ದಾರ್ಶನಿಕರು, ಕ್ರಾಂತಿಕಾರಿಗಳ ಬಗ್ಗೆಗಿನ ಪುಸ್ತಕಗಳು ಸಿಕ್ಕಿವೆ. ಕೆಲವೊಂದು ಭೂಗತ ಜಗತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ವಾತಂತ್ರ್ಯ ಹೋರಾಟದ ಕಥನಗಳು ಇಲ್ಲಿವೆ. ಮನೋರಂಜನ್‌ ಸಾಕಷ್ಟು ಕ್ರಾಂತಿಕಾರಿ ಯೋಜನೆಗಳನ್ನು ಹೊಂದಿದ್ದರು ಎನ್ನುವುದು ಅವರ ಓದಿನಿಂದ ಗೊತ್ತಾಗುತ್ತಿದೆ.
    ತಮ್ಮ ಪುತ್ರನ ಕುರಿತಂತೆ, ದೇವರಾಜೇ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ‘ಸಮಾಜದ ಬಗ್ಗೆ ಒಲವು ಹೊಂದಿದ್ದ. ನೊಂದವರಿಗೆ ಸಹಾಯ ಮಾಡಬೇಕೆಂಬ ಮನೋಭಾವವಿತ್ತು. ಮನೆಯಲ್ಲಿದ್ದ ಪುಸ್ತಕಗಳನ್ನು ಹೆಚ್ಚು ಓದುತ್ತಿದ್ದ. ಆಗಾಗ ದೆಹಲಿ, ಬೆಂಗಳೂರಿಗೆ ತೆರಳುತ್ತಿದ್ದ. ತಪ್ಪು ಮಾಡಿದ್ದರೆ ಗಲ್ಲುಶಿಕ್ಷೆಯಾಗಲಿ’ ಎಂದರು.

    Verbattle
    Verbattle
    Verbattle
    lok sabha lok sabha security breach News Politics Trending Varthachakra ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    Next Article ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    2 ಪ್ರತಿಕ್ರಿಯೆಗಳು

    1. Bbwaes on ಫೆಬ್ರವರಿ 12, 2026 10:42 ಫೂರ್ವಾಹ್ನ

      mgm draftkings online casino betmgm play mgm grand betting

      Reply
    2. Girkfs on ಫೆಬ್ರವರಿ 19, 2026 10:24 ಅಪರಾಹ್ನ

      Revel in the harmony of balanced odds and fun. crowncoincasino guarantees harmonious gaming environments. Balance your bets and harmonize wins!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Oauboy ರಲ್ಲಿ ವಿಜಯೇಂದ್ರ ಬದಲಾಗಲೇ ಬೇಕಂತೆ.
    • Kdrqmk ರಲ್ಲಿ ಮಕ್ಕಳ ಮೊಟ್ಟೆ ಕದ್ದ ಅಂಗನವಾಡಿ ಕಾರ್ಯಕರ್ತೆ
    • Xdhmme ರಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.