Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದ DG&IG ಯಾರಾಗಲಿದ್ದಾರೆ ಗೊತ್ತಾ?
    ಬೆಂಗಳೂರು

    ರಾಜ್ಯದ DG&IG ಯಾರಾಗಲಿದ್ದಾರೆ ಗೊತ್ತಾ?

    vartha chakraBy vartha chakraಮೇ 15, 2023Updated:ಮೇ 15, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.15- ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ-ಐಜಿಪಿ) ಪ್ರವೀಣ್ ಸೂದ್  ಅವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಹಾಲಿ ಸಿಬಿಐ ನಿರ್ದೇಶಕರಾಗಿರುವ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿ ಇದೇ ಮೇ. 25 ರಂದು ಮುಗಿಯಲಿದೆ. ಈ ಹಿನ್ನೆಲೆಯಲ್ಲಿ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐ ಮುಖ್ಯಸ್ಥರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
    ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿರುವ ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಇನ್ನೂ ಒಂದು ವರ್ಷ ಇತ್ತು. ಈಗ ಅವರು ಸಿಬಿಐ ಮುಖ್ಯಸ್ಥರಾಗಿ ನೇಮಕಗೊಂಡಿದ್ದು, ರಾಜ್ಯಕ್ಕೆ ಹೊಸ ಪೊಲೀಸ್ ಮಹಾ ನಿರ್ದೇಶಕರ ನೇಮಕವಾಗಬೇಕಾಗಿದ್ದು ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳಲ್ಲಿ ಪೈಪೋಟಿ ಎದುರಾಗಿದೆ.
    ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್‌ ಮೋಹನ್‌, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್‌, ನೇಮಕಾತಿ ವಿಭಾಗದ ಡಿಜಿಪಿ ಕಮಲ್‌ಪಂತ್‌, ನಗರ ಪೊಲೀಸ್‌ ಆಯುಕ್ತ ಸಿ.ಎಚ್‌. ಪ್ರತಾಪ್‌ರೆಡ್ಡಿ ಹೆಸರು ಕೇಳಿಬಂದಿವೆ.
    ಪ್ರವೀಣ್‌ ಸೂದ್‌ ಮೇ 25ರೊಳಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವೆ ಅವಧಿಯಲ್ಲಿಯೇ ನೂತನ ಸರಕಾರ ಸೂದ್‌ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನೇಮಕಗೊಳಿಸಬೇಕಿದೆ. ಹೀಗಾಗಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಯಾರನ್ನು ನೇಮಕ ಮಾಡಲಿದೆ ಎನ್ನುವುದು ಸದ್ಯದ ಕುತೂಹಲವಾಗಿದೆ.
    ಸೇವಾ ಜೇಷ್ಠತೆ ಆಧಾರದಲ್ಲಿ ಡಾ. ಅಲೋಕ್‌ ಮೋಹನ್‌ ಹಾಗೂ ಪ್ರಾಮಾಣಿಕತೆ ,ದಕ್ಷತೆ ಆಧಾರದಲ್ಲಿ ಕಮಲ್ ಪಂತ್ ಅವರಲ್ಲಿ ಒಬ್ಬರನ್ನು ಸರ್ಕಾರ  ಡಿಜಿ-ಐಜಿ ಹುದ್ದೆಗೆ ಪರಿಗಣಿಸುವ ಸಾಧ್ಯತೆಗಳು ಹೆಚ್ಚಾಗಿವೆ.
    ಹಲವು ವಿವಾದಗಳಲ್ಲಿ ಸಿಲುಕಿರುವ ರವೀಂದ್ರನಾಥ್‌, ಇತ್ತೀಚೆಗಷ್ಟೇ ಡಿಜಿಪಿ ಹುದ್ದೆಗೆ ಬಡ್ತಿ ಪಡೆದಿರುವ ಪ್ರತಾಪ್‌ರೆಡ್ಡಿ, ಪ್ರಶಾಂತ್ ಕುಮಾರ್ ಠಾಕೂರ್  ಅವರ ನೇಮಕದ ಸಾಧ್ಯತೆ ಕಡಿಮೆ.
    ಐವರು ಅಧಿಕಾರಿಗಳ ಸೇವಾ ಜೇಷ್ಠತೆ, ಕಾರ್ಯವೈಖರಿ, ಸೇವಾ ಅನುಭವ ಆಧರಿಸಿ ಒಬ್ಬರ ಹೆಸರನ್ನು ನೂತನ ಸರ್ಕಾರ ಅಂತಿಮಗೊಳಿಸಲಿದೆ.
    ಅಲೋಕ್‌ ಮೋಹನ್‌ ಹಿನ್ನಲೆ:
    ,ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ರಾಜ್ಯ ಕೇಡರ್‌ ಐಪಿಎಸ್‌ ಅಧಿಕಾರಿ. 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿರುವ ಅವರು, ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ.
    ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಲಿ ತರಬೇತಿ ವಿಭಾಗದ ಡಿಜಿಪಿಯಾಗಿದ್ದಾರೆ. ಈ ವರ್ಷ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, ಅಲೋಕ್‌ ಮೋಹನ್‌ ನಂತರದ ಸ್ಥಾನದಲ್ಲಿ ಡಿಜಿ-ಐಜಿ ಹುದ್ದೆಯ ರೇಸ್‌ನಲ್ಲಿದ್ದಾರೆ.
    ಎಡಿಜಿಪಿ ತರಬೇತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬರುವ ಸೆಪ್ಟೆಂಬರ್ ಗೆ ನಿವೃತ್ತರಾಗುವ ಹಾಗೂ ಸೇವಾವಧಿಯಲ್ಲಿ ಹಲವು ವಿವಾದಗಳಿಗೆ ಎಡೆಮಾಡಿಕೊಟ್ಟಿರುವ  ರವೀಂದ್ರನಾಥ್ ಅವರನ್ನು ಡಿಜಿ-ಐಜಿಪಿ ಹುದ್ದೆಗೆ ನೇಮಕ‌ ಮಾಡುವ ಸಾಧ್ಯತೆ ಕಡಿಮೆ.
    ಕಮಲ್‌ ಪಂಥ್‌ ಅವರು ಹಿಂದೆ ನಗರ ಪೊಲೀಸ್‌ ಆಯುಕ್ತರಾಗಿದ್ದು ಹಾಲಿ ತರಬೇತಿ ನೇಮಕಾತಿ ವಿಭಾಗದ ಡಿಜಿಪಿಯಾಗಿದ್ದಾರೆ.
    ನಗರ ಪೊಲೀಸ್‌ ಆಯುಕ್ತ ಸಿ.ಎಚ್‌. ಪ್ರತಾಪ್‌ರೆಡ್ಡಿ ಕೂಡ ಡಿಜಿ-ಐಜಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ.
    2020ರಲ್ಲಿ ಭಾಸ್ಕರ್‌ ರಾವ್‌ ಅವರನ್ನು ವರ್ಗಾವಣೆ ಮಾಡಿ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ 1990ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿರುವ ಕಮಲ್ ಪಂಥ್ ಅವರನ್ನು ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ಸದ್ಯ ಕಮಲ್  ಪಂಥ್ ಎಡಿಜಿಪಿ ಸಿಐಡಿ ನೇಮಕಾತಿ ವಿಭಾಗದಲ್ಲಿದ್ದಾರೆ.
    ಒಟ್ಟಿನಲ್ಲಿ ಈ ನಾಲ್ವರಲ್ಲಿ ಯಾರು ಕರ್ನಾಟಕ ಮಹಾ ಪೊಲೀಸ್ ನಿರ್ದೇಶಕರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ
    Next Article ಪರಮೇಶ್ವರ್ ಆಗುತ್ತಾರಂತೆ CM!
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 703lb on ಜೂನ್ 3, 2025 9:23 ಅಪರಾಹ್ನ

      where to get generic clomid tablets can i order generic clomid prices clomiphene cycle how to buy cheap clomiphene without prescription buying clomiphene no prescription where buy generic clomid price how to get generic clomid

      Reply
    2. cialis sale manila on ಜೂನ್ 10, 2025 5:07 ಫೂರ್ವಾಹ್ನ

      I couldn’t turn down commenting. Adequately written!

      Reply
    3. is flagyl safe during pregnancy on ಜೂನ್ 11, 2025 11:31 ಅಪರಾಹ್ನ

      I couldn’t turn down commenting. Warmly written!

      Reply
    4. xnlx4 on ಜೂನ್ 19, 2025 12:00 ಅಪರಾಹ್ನ

      order inderal 20mg sale – clopidogrel 75mg cheap brand methotrexate 2.5mg

      Reply
    5. qewil on ಜೂನ್ 22, 2025 8:08 ಫೂರ್ವಾಹ್ನ

      amoxicillin pills – order combivent 100mcg online cheap buy ipratropium generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig ರಲ್ಲಿ November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    • +7 (499) 460-69-87 ರಲ್ಲಿ ಅಂಗನವಾಡಿ ಅಸ್ತಿತ್ವಕ್ಕೆ ಧಕ್ಕೆ ಇಲ್ಲ.
    • +7 (499) 460-69-87 ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe