ಬೆಂಗಳೂರು, ಅ.3 – ರಾಜ್ಯದಲ್ಲಿ ಈ ಹಿಂದೆ ನಡೆದಿರುವ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯಸರ್ಕಾರ ಮೊದಲು ಬಹಿರಂಗಪಡಿಸಬೇಕು. ಅದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ನಡೆಸಿರುವುದು ಸರ್ಕಾರದಿಂದ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದು ಕಾಂಗ್ರೆಸ್ ಪಕ್ಷದಿಂದ. ಹೀಗಾಗಿ ತಾವು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೇಳಿಕೆ ನೀಡುವುದಿಲ್ಲ. ನೇರವಾಗಿ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
ಕಾಂಗ್ರೆಸ್ನ ವರಿಷ್ಠ ನಾಯಕ ರಾಹುಲ್ಗಾಂಧಿ ದೇಶ ಮತ್ತು ರಾಜ್ಯಗಳಲ್ಲಿ ಜಾತಿ ಜನಗಣತಿ ಆಗಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಬಹಳ ಹಿಂದೆಯೇ ಕಾಂತರಾಜು ನೇತೃತ್ವದಲ್ಲಿ ಸಮೀಕ್ಷೆ ನಡೆಸಿದೆ. ಅದನ್ನು ಅನುಷ್ಠಾನಕ್ಕೆ ತರಲು ಸಾಧ್ಯವೋ, ಇಲ್ಲವೋ ಅದು ಬೇರೆ ವಿಚಾರ. ಆದರೆ ಮೊದಲು ಅದು ಬಹಿರಂಗಗೊಳಿಸಬೇಕಿದೆ ಎಂದು ಹೇಳಿದರು ಜಾತಿ ಜನಗಣತಿ ವರದಿ ಬಿಡುಗಡೆಯಾಗದೇ ಇರುವುದಕ್ಕೆ ಹಲವು ಕಾರಣಗಳಿರಬಹುದು. ಬಿಡುಗಡೆಯಾದ ತಕ್ಷಣವೇ ಅನುಷ್ಠಾನಕ್ಕೆ ಬರುತ್ತದೆ ಎಂದೇನಿಲ್ಲ. ಮೊದಲು ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ಅಲ್ಲಿರುವ ಲೋಪದೋಷಗಳನ್ನು ಪರಿಶೀಲಿಸಿ ಮತ್ತೊಮ್ಮೆ ಸಮೀಕ್ಷೆ ನಡೆಸಬಹುದು ಎಂದು ಹೇಳಿದರು.
ರಾಜ್ಯದಲ್ಲಿ ಮೊದಲಿನಿಂದಲೂ ಆವನೂರು ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಸೇರಿದಂತೆ ಹಲವು ವರದಿಗಳಿವೆ. ಬಿಜೆಪಿ ಸರ್ಕಾರದಲ್ಲೂ ಒಂದು ವರದಿಯಿದೆ. ಎಲ್ಲವನ್ನೂ ಸೇರಿಸಿ ವರದಿಯನ್ನು ಬಹಿರಂಗ ಪಡಿಸಲಿ. ಕೆಲವು ಸಮುದಾಯಗಳು ಹೆಚ್ಚಿವೆ, ಕೆಲವು ಕಡಿಮೆ ಇವೆ ಎಂಬ ಚರ್ಚೆಗಳಿವೆ. ಅದನ್ನು ನಂತರ ಸರಿಪಡಿಸಬಹುದು. ವಿಧಾನಸಭೆ, ವಿಧಾನಪರಿಷತ್ನಲ್ಲಿ ಚರ್ಚೆಯಾದ ಬಳಿಕವೇ ಇದು ಅನುಷ್ಠಾನಕ್ಕೆ ಬರಲು ಸಾಧ್ಯ ಎಂದು ಹೇಳಿದರು.
ಈ ಹಿಂದೆ ಸಮೀಕ್ಷೆ ನಡೆಸಿರುವುದು ರಾಜ್ಯಸರ್ಕಾರ. ಅದರ ಕುರಿತು ಏನೆಲ್ಲಾ ಚರ್ಚೆ ನಡೆದಿದೆ. ಸಂಪುಟದಲ್ಲಿ ಏನೆಲ್ಲಾ ವಿಶ್ಲೇಷಣೆಗಳಾಗಿವೆ ಎಂಬ ಮಾಹಿತಿ ತಮಗಿಲ್ಲ. ಈ ಬಗ್ಗೆ ಸರ್ಕಾರವೇ ಸ್ಪಷ್ಟನೆ ನೀಡಬೇಕು. ಆದರೆ ಪಕ್ಷದ ಸದಸ್ಯನಾಗಿ ಈ ಬಗ್ಗೆ ಪ್ರಸ್ತಾಪಿಸುವ ಅಧಿಕಾರ ತಮಗಿದೆ ಎಂದು ತಿಳಿಸಿದರು.
4 ಪ್ರತಿಕ್ರಿಯೆಗಳು
where can i get generic clomiphene cost generic clomid online how to get generic clomid without prescription clomiphene chart can i purchase cheap clomiphene pills get generic clomid prices can i order cheap clomid online
Thanks for sharing. It’s acme quality.
Thanks towards putting this up. It’s understandably done.
amoxil drug – purchase ipratropium without prescription ipratropium usa