Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
    ರಾಜಕೀಯ

    ಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?

    vartha chakraBy vartha chakraಫೆಬ್ರವರಿ 24, 2023Updated:ಫೆಬ್ರವರಿ 24, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.24- ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿರುವ ಶೇಕಡ 40ರಷ್ಟು ಕಮಿಷನ್‌ ಆರೋಪ ಹಾಗೂ ಸಾಲು ಸಾಲಾಗಿ ಹೊರಬರುತ್ತಿರವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ವಿರುದ್ಧ ಇವರು ಮಾಡುತ್ತಿರುವ ಆರೋಪಗಳು ನಿಜವಾಗಿದ್ದರೆ ಇಷ್ಟು ದಿನಗಳ ಕಾಲ ಏನು ಮಾಡುತ್ತಿದ್ದರು ಜೈಲಿಗೆ ಯಾಕೆ ಹಾಕಲಿಲ್ಲ ಎಂದು ಪ್ರಶ್ನಿಸಿದರು.
    ವಿಧಾನಸಭೆಯಲ್ಲಿ ತಾವಿಲ್ಲದ ಸಮಯದಲ್ಲಿ ಅವರು ಮಾಡಿರುವ ಯಾವ ಆರೋಪಗಳಿಗೂ ಆಧಾರವಿಲ್ಲ ಎಂದು ಸ್ಪಷ್ಟ ಪಡಿಸಿದರು.
    2003ರಲ್ಲಿ ಅರ್ಕಾವತಿ ಬಡಾವಣೆ ನಿರ್ಮಾಣ ಪ್ರಾರಂಭವಾಯಿತು.ನಾನು ಅಧಿಕಾರಕ್ಕೆ ಬರುವ ಮೊದಲೇ 2,750 ಎಕರೆ ಜಮೀನು ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ನಂತರ 1,919 ಎಕರೆ 13 ಗುಂಟೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಗದೀಶ್ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಹೈಕೋರ್ಟ್‌ ಆದೇಶದಂತೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ಪರಿಶೀಲನೆಗೆ ಅಧಿಕಾರಿಗಳ ತಂಡ ರಚಿಸಲಾಗಿತ್ತು’ ಎಂದರು.
    ‘ಅಧಿಕಾರಿಗಳು ವರದಿ ನೀಡುವಾಗ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿತ್ತು. ಆದ್ದರಿಂದ ಅವರು ಕಡತವನ್ನು ಅನುಮೋದಿಸಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಹೈಕೋರ್ಟ್‌ನಲ್ಲಿ ಒಂದು ಅರ್ಜಿ ಬಾಕಿ ಇತ್ತು. ಸುಪ್ರೀಂ ಕೋರ್ಟ್‌ ನಿಗದಿಪಡಿಸಿದ ಮಾನದಂಡಗಳ ಆಧಾರದಲ್ಲಿ ಪರಿಷ್ಕೃತ ಯೋಜನೆ ರೂಪಿಸಿರುವುದಾಗಿ ಅಧಿಕಾರಿಗಳು ವಿವರಿಸಿದರು. ಆ ಬಳಿಕ ನಾನು ಕಡತಕ್ಕೆ ಅನುಮೋದನೆ ನೀಡಿದೆ’ ಎಂದು ಹೇಳಿದರು.
    ‘ಅದು ರೀ–ಡೂ ಅಲ್ಲ. ರೀ ಮಾಡಿಫೈಡ್‌ ಸ್ಕೀಂ. ನಮ್ಮ ಅವಧಿಯಲ್ಲಿ ಯಾವುದೇ ಜಮೀನಿನ ಡಿನೋಟಿಫಿಕೇಷನ್‌ ನಡೆದಿರಲಿಲ್ಲ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಗಿನ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪ ಮಾಡಿದ್ದರು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗ ರಚಿಸಿದ್ದೆ. ಯಾವ ಅಕ್ರಮವೂ ನಡೆದಿಲ್ಲ ಎಂದು ಆಯೋಗ ಹೇಳಿದೆ. ಇದೆಲ್ಲವೂ ತಿಳಿಯದವರಂತೆ ಬೊಮ್ಮಾಯಿ ಆರೋಪ ಮಾಡಿದ್ದಾರೆ’ ಎಂದರು.
    ಕೆಂಪಣ್ಣ ಆಯೋಗದ ವರದಿ ಪರಿಶೀಲನೆಗಾಗಿ ನಿವೃತ್ತ ನ್ಯಾಯಮೂರ್ತಿ ಕೇಶವ ನಾರಾಯಣ ಅಧ್ಯಕ್ಷತೆಯಲ್ಲಿ ಹೈಕೋರ್ಟ್‌ ಸಮಿತಿ ನೇಮಿಸಿದೆ. ನಿವೃತ್ತ ಐಎಎಸ್‌ ಅಧಿಕಾರಿ ಸಂದೀಪ್‌ ದವೆ ಮತ್ತು ನಿವೃತ್ತ ಐಪಿಎಸ್‌ ಅಧಿಕಾರಿ ಎನ್‌.ಎಸ್‌. ಮೇಘರಿಕ್‌ ಸಮಿತಿಯಲ್ಲಿದ್ದಾರೆ. ವಿಷಯ ಈಗ ಸಮಿತಿಯ ಮುಂದಿದೆ. ಇಂತಹ ಸಂದರ್ಭದಲ್ಲಿ ಸುಳ್ಳು ಆರೋಪ ಮಾಡುವುದು ಸರಿಯೆ ಎಂದು ಪ್ರಶ್ನಿಸಿದರು.
    ‘ಬಿಜೆಪಿ ಸರ್ಕಾರದ ಹಗರಣಗಳನ್ನು ನಿರಂತರವಾಗಿ ಬಯಲಿಗೆ ತರುತ್ತಿದ್ದೇವೆ. ಇದರಿಂದ ತಪ್ಪಿಸಿಕೊಳ್ಳಲು ಬೊಮ್ಮಾಯಿ ಸದನದಲ್ಲಿ ವೀರಾವೇಶದ ಮಾತುಗಳನ್ನು ಆಡಿದ್ದಾರೆ. ನಾನು ಸದನದಲ್ಲಿ ಇಲ್ಲದ ಸಂದರ್ಭದಲ್ಲಿ ಆಧಾರರಹಿತ ಆರೋಪ ಮಾಡಿದ್ದಾರೆ. ನಾವು ಅಕ್ರಮ ಎಸಗಿದ್ದರೆ ಇವರ ಅಧಿಕಾರದ ಅವಧಿಯಲ್ಲಿ ತನಿಖೆ ನಡೆಸಿ, ಕ್ರಮ ಜರುಗಿಸಲು ಅವಕಾಶ ಇತ್ತಲ್ಲವೆ’ ಎಂದು ಕೇಳಿದರು

    Verbattle
    Verbattle
    Verbattle
    ನ್ಯಾಯ ಬೊಮ್ಮಾಯಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮ ಬಂದೂಕುಗಳ ವಶ
    Next Article ಬೀದಿ ನಾಯಿಗಳಿಗೆ ಊಟ ಹಾಕಿದ್ದೆ ತಪ್ಪಾಯ್ತಾ?
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jwtuvn ರಲ್ಲಿ ವಿಜಯೇಂದ್ರ ಬದಲಾವಣೆಗೆ ಹೆಚ್ಚಿದ ಒತ್ತಡ.
    • LinwoodGah ರಲ್ಲಿ ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್
    • 1win_ilSi ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.