Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi
    Viral

    ಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi

    vartha chakraBy vartha chakraಡಿಸೆಂಬರ್ 4, 202323 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶ ಬಿಜೆಪಿಗೆ ಆನೆ ಬಲ ತಂದೊಡ್ಡಿದೆ.ಜೊತೆಗೆ ಹಲವು ಸವಾಲುಗಳನ್ನು ಮುಂದೊಡ್ಡಿದೆ.
    ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸೇರಿದಂತೆ ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರು ಮಂದಿ ರಾಜವಂಶಸ್ಥರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಇವರ ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಕೇಂದ್ರ ಮಂತ್ರಿಗಳು ಮತ್ತು ಸಂಸದರು‌ ಉನ್ನತ ಹುದ್ದೆಗಾಗಿ ಪ್ರಬಲ ಲಾಭಿ ನಡೆಸಿದ್ದಾರೆ.

    ಯಾರನ್ನೂ ಆಯ್ಕೆ ಮಾಡಿದರೂ‌ ಅದು ಸುಲಭದ ಆಯ್ಕೆಯಾಗುವುದಿಲ್ಲ. ಭಿನ್ನಮತ, ಅಪಸ್ವರ ಕಟ್ಟಿಟ್ಟ ಬುತ್ತಿ ಎಂಬ ವಾತಾವರಣ ಮನೆ ಮಾಡಿದೆ. ಅದರಲ್ಲೂ ವಸುಂಧರಾ ರಾಜೆ ಅವರು ಪ್ರಧಾನಿ ಮೋದಿ ಸೇರಿದಂತೆ ಯಾರೂ ಹೇಳಿದರೂ ಕೇಳಿದಂತಹ ನಿಲುವು ಹೊಂದಿದ್ದಾರೆ. ಹೀಗಾಗಿ ಎಲ್ಲರಿಗೂ ಸಮ್ಮತವಾಗುವ ವ್ಯಕ್ತಿ ಬೇಕಾಗಿದೆ.
    ಹೀಗಾಗಿ ಈಗ ರಾಜಸ್ಥಾನದಲ್ಲಿ ಸಿಎಂ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಕೇಳಿಬರುತ್ತಿದೆ. ಸಾಕಷ್ಟು ಮಂದಿ ಹೆಸರು ಕೇಳಿಬರುತ್ತಿದೆ. ಇದರಲ್ಲಿ ಪ್ರಮುಖವಾದ ಹೆಸರು ಮಹಂತ್ ಬಾಲಕನಾಥ್ ಅವರದ್ದು.
    ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿರುವ ಬಿಜೆಪಿ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಅಂತಹದ್ದೇ ಒಂದು ಪ್ರಯೋಗವನ್ನು ರಾಜಸ್ಥಾನದಲ್ಲಿ ಮಾಡಲು ಬಿಜೆಪಿಯ ಚಿಂತಕರ ಚಾವಡಿ‌ ಮುಂದಾಗಿದೆ.ಈ ರೀತಿ ಆದಲ್ಲಿ‌ ಸಂಭಾವ್ಯ ಭಿನ್ನಮತ ಹತ್ತಿಕ್ಕಬಹುದು.ಅಷ್ಟೇ ಅಲ್ಲ ಪ್ರಬಲ ಹಿಂದುತ್ವ ಪ್ರತಿಪಾನೆಯೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸಬಹುದು‌ ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ.

    ಇಂತಹ ಲೆಕ್ಕಾಚಾರ ಯಶಸ್ವಿಯಾಗಬೇಕಾದರೆ ಅದಕ್ಕೆ ಸೂಕ್ತವಾದವರು ಆಲ್ವಾರ್ ಕ್ಷೇತ್ರದ ಸಂಸದ ಮಹಂತ್ ಬಾಲಕನಾಥ್ ಎಂಬ ಚರ್ಚೆಗಳು ನಡೆದಿವೆ.ಜೊತೆಗೆ 39 ವರ್ಷದ ಮಹಂತ್ ಬಾಲಕನಾಥ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಡುವೆ ಸಾಕಷ್ಟು ಹೋಲಿಕೆಗಳು ಮತ್ತು ಸಾಮ್ಯತೆಗಳಿವೆ.
    ಮಹಾಂತಾ ಬಾಲಕನಾಥ್ ಮತ್ತು ಯೋಗಿ ಆದಿತ್ಯನಾಥ್ ಇಬ್ಬರೂ ನಾಥ ಪರಂಪರೆಯ ಮಠಗಳಿಗೆ ಸೇರಿದವರು. ಇಬ್ಬರೂ ಕೂಡ ಹಿಂದುತ್ವದ ಪರವಾದ ಪ್ರಖರ ವಾಗ್ಮಿಗಳೆಂದು ಗುರುತಿಸಿಕೊಂಡಿದ್ದಾರೆ.ಇಬ್ಬರ ಆಲೋಚನೆ, ವಿಚಾರಧಾರೆ, ಕಾರ್ಯಶೈಲಿ ಒಂದೇ ರೀತಿಯಲ್ಲಿದೆ.
    ಆಲ್ವಾರ್ ಲೋಕಸಭಾ ಕ್ಷೇತ್ರದ ಮತದಾರರು ಬಾಲಕನಾಥ್ ಅವರ ಬಗ್ಗೆ ವಿಶೇಷ ಗೌರವಾದರ ಹೊಂದಿದ್ದಾರೆ. ಅದೇ ರೀತಿ ರಾಜ್ಯದ ಬಿಜೆಪಿ ಕಾರ್ಯಕರ್ತರು ಕೂಡಾ ವಿಶೇಷ ಗೌರವ ‌ನೀಡುತ್ತಾರೆ.ಹೀಗಾಗಿ ಇವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂಬ ಚಿಂತನೆಯಲ್ಲಿ ಬಿಜೆಪಿ ನಾಯಕತ್ವ ತೊಡಗಿದೆ.

    Balaknath Yogi Government Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಗೆಲುವು ತಂದುಕೊಟ್ಟ ಕಮಲ್ ನಾಥ್ | Kamal Nath
    Next Article ಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_kgot ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • rylonnie shtori na plastikovie okna s elektroprivodom_zkSn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • MichaelTeamy ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe