Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದರಿಂದಲಾದರೂ Bangalore traffic ಕಡಿಮೆಯಾಗುತ್ತಾ?
    ಬೆಂಗಳೂರು

    ಇದರಿಂದಲಾದರೂ Bangalore traffic ಕಡಿಮೆಯಾಗುತ್ತಾ?

    vartha chakraBy vartha chakraಜನವರಿ 27, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.27- ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಜಗತ್ತಿನೆಲ್ಲೆಡೆ ಸುದ್ದಿ ಮಾಡುತ್ತಿದೆ.ಇದನ್ನು ಬಗೆಹರಿಸಲು ಸಂಚಾರಿ ಪೊಲೀಸರು ಮತ್ತು ಸರ್ಕಾರ ಹಲವಾರು ಕ್ರಮ ಕೈಗೊಳ್ಳುತ್ತಿದ್ದರೂ ಅವುಗಳು ನಿರೀಕ್ಷಿತ ಫಲಿತಾಂಶ ತರುತ್ತಿಲ್ಲ.

    ಬೆಂಗಳೂರಿನ ಕೆಲವು ಖಾಸಗಿ ಸಂಸ್ಥೆಗಳೂ ಕೂಡ ಸಂಚಾರ ದಟ್ಟಣೆ ನಿವಾರಿಸಲು ಹಲವಾರು ಪ್ರಯೋಗ ಮಾಡುತ್ತಿವೆ.ಇವುಗಳಿಂದ ಕೆಲವು ಬಾರಿ ಕೆಲವು ಕಡೆ ಒಳ್ಳೆಯ ಫಲಿತಾಂಶ ಸಿಕ್ಕಿದ್ದರೂ ಎಲ್ಲಾ ಕಡೆಗಳಲ್ಲಿ ಇದು ಯಶಸ್ವಿಯಾಗಿಲ್ಲ. ಹೀಗಾಗಿ ಸಂಚಾರಿ ಪೊಲೀಸರು ದಟ್ಟಣೆ ನಿಯಂತ್ರಣ ಮಾಡಲು ಒಂದಲ್ಲ ಒಂದು ಪರಿಹಾರ ಹುಡುಕುತ್ತಲೇ ಇದ್ದಾರೆ.ಇದರ ಭಾಗವಾಗಿ ಈಗ
    ಸಂಚಾರ ದಟ್ಟಣೆ ನಿಯಂತ್ರಿಸಲು ಸಂಚಾರ ಪೊಲೀಸರು ಡ್ರೋನ್ ಕ್ಯಾಮರಾ ಮೊರೆ ಹೋಗಿದ್ದಾರೆ.

    ನಗರದಲ್ಲಿ ಇನ್ನು ಮುಂದೆ ಪ್ರತಿ ದಿನವೂ ಡ್ರೋನ್ ಕ್ಯಾಮಾರಾ ಗಳು ಹಾರಾಡಲಿದ್ದು,ಅವುಗಳ ಮೂಲಕ ಪ್ರಮುಖ ಟ್ರಾಫಿಕ್ ಜಂಕ್ಷನ್ ನ ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.
    ನಗರದಲ್ಲಿ ದಿನದಿಂದ ದಿನಕ್ಕೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಟೋಯಿಂಗ್ ಇಲ್ಲದ ಕಾರಣ ವಾಹನ ನಿಲುಗಡೆಗೆ ಅವಕಾಶ(ನೋ ಪಾರ್ಕಿಂಗ್) ಇಲ್ಲದ ಕಡೆಗಳಲ್ಲಿ ವಾಹನ ಸವಾರರು ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಮಾರ್ಕೆಟ್ ರಸ್ತೆಗಳು, ಮುಖ್ಯ ಜಂಕ್ಷನ್ ನ ಸಂಪರ್ಕಿಸುವ ರಸ್ತೆಗಳು, ಸಣ್ಣ ಸಣ್ಣ ರಸ್ತೆಗಳಲ್ಲಿ ಹೇಗೆ ಬೇಕೆಂದರೆ ವಾಹನ ಪಾರ್ಕ್ ಮಾಡಿ ಹೋಗುತ್ತಿದ್ದಾರೆ. ಅಲ್ಲದೇ ಕೆಲ ಮುಖ್ಯ ಜಂಕ್ಷನ್ ಗಳಲ್ಲಿ ಸಿಗ್ನಲ್ ಬಿಡುವುದರ ಬಗ್ಗೆ ಗೊಂದಲ ಇರಲಿದೆ. ಒಂದು ಜಂಕ್ಷನ್ನಲ್ಲಿ ಯಾವ ರೂಟ್ ನಲ್ಲಿ ಹೆಚ್ಚು ವಾಹನಗಳಿದೆ. ಯಾವ ಸಿಗ್ನಲ್ ಬೇಗ ಬಿಡಬೇಕು, ಸಿಗ್ನಲ್ ಬಿಟ್ಟಾಗ ವಾಹನಗಳನ್ನು ಸುಗಮ ಸಂಚಾರಗೊಳಿಸುವುದು, ನಿಯಂತ್ರಣ ‌ಮಾಡುವಲ್ಲಿ ಸಂಚಾರ ಪೊಲೀಸರ ವೈಫಲ್ಯ ಇದೆಲ್ಲವನ್ನೂ ಗಮನಿಸಿ ಸಂಚಾರ ಸುಗಮಗೊಳಿಸಲು ಡ್ರೋನ್ ಸಹಾಯವಾಗಲಿದೆ.

    ಡ್ರೋನ್ ಹಾರಿಸಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಪರಿಹರಿಸಲು ಸಹಾಯವಾಗಲಿದೆ, ಕೆಲವೊಮ್ಮೆ ಆ್ಯಂಬುಲೆನ್ಸ್ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿ ಹಾಕಿಕೊಂಡರೆ ವಾಹನ ದಟ್ಟಣೆ ಸುಗಮಗೊಳಿಸಲು ಸಹಾಯವಾಗಲಿದೆ. ಇದರಿಂದ ಪೀಕ್ ಅವರ್ ನಲ್ಲಿ ಸಂಚಾರ ದಟ್ಟಣೆ ಸರಿಪಡಿಸಬಹುದು.

    ಮೆಜೆಸ್ಟಿಕ್, ಎಂಜಿ ರೋಡ್, ರಾಜಭವನ, ಚಾಲುಕ್ಯ ಸರ್ಕಲ್, ತುಮಕೂರು ರಸ್ತೆ, ಹೆಬ್ಬಾಳ, ಕೋರಮಂಗಲ, ಸಿಲ್ಕ್ ಬೋರ್ಡ್, ಮಾರತ್ತಹಳ್ಳಿ, ಬೆಳ್ಳಂದೂರು ಹೀಗೆ ಯಾವ್ಯಾವ ಜಂಕ್ಷನ್ ಗಳಲ್ಲಿ ಅತಿ ಹೆಚ್ಚು ಸಂಚಾರ ದಟ್ಟಣೆಯಿದೆ ಅಲ್ಲೆಲ್ಲಾ ಡ್ರೋನ್ಗಳ ಬಳಕೆ ಮಾಡಿಕೊಳ್ಳಲಾಗುತ್ತೆ. ಡ್ರೋನ್ಗಳ ಮೂಲಕ ಪರಿಶೀಲನೆ ನಡೆಸಿ ಕೂಡಲೇ ಸಂಚಾರ ಸುಗಮಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಪ್ರಾಯೋಗಿಕವಾಗಿ ಪ್ರಮುಖ ಜಂಕ್ಷನ್ ಗಳಲ್ಲಿ ಡ್ರೋನ್ಗಳು ಹಾರಾಡುತ್ತಿವೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಡ್ರೋನ್ ಗಳು ಹಾರಾಡಲಿವೆ

    Bangalore Bangalore traffic traffic ತುಮಕೂರು
    Share. Facebook Twitter Pinterest LinkedIn Tumblr Email WhatsApp
    Previous Articleಇವರಿಗೆಲ್ಲಾ ಸಿಕ್ಕಿದೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ
    Next Article ಅಯೋಧ್ಯೆಯಲ್ಲಿ ಅದಮ್ಯ ಚೇತನ ಟ್ರಸ್ಟ್ ಸೇವೆಗೆ ಬಹು ಪರಾಕ್
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardWrege ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • QVLeroy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • WayneseinA ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe