Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi
    Trending

    ಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi

    vartha chakraBy vartha chakraಡಿಸೆಂಬರ್ 14, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.14- ಬೆಳಗಾವಿ ಜಿಲ್ಲೆಯ (Belagavi) ಹೊಸ ವಂಟಮುರಿ ಗ್ರಾಮದ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ ಥಳಿಸಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್‌ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
    ಪ್ರಕರಣದ ತನಿಖೆಗೆ ಕೈಗೊಂಡ ಕ್ರಮಗಳು ಹಾಗೂ ಸಂತ್ರಸ್ಥೆಗೆ ನೀಡಲಾದ ಪರಿಹಾರ, ಚಿಕಿತ್ಸೆ ಮತ್ತು ಸಾಂತ್ವನ ಕುರಿತಾಗಿ ಕೈಗೊಂಡಿರುವ ಕ್ರಮದ ವರದಿಯನ್ನು ಹೈಕೋರ್ಟ್ ಡಿ.18ರೊಳಗೆ
    ಸಲ್ಲಿಸುವಂತೆ ಸೂಚಿಸಿದೆ. ಅಷ್ಟೇ ಅಲ್ಲ ಅಂದಿನ ವಿಚಾರಣೆ ಸಮಯದಲ್ಲಿ,ಬೆಳಗಾವಿ ಪೊಲೀಸ್ ಆಯುಕ್ತರು, ಹಾಗೂ ಎಸಿಪಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗುವಂತೆ ಆದೇಶ ನೀಡಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ದೇಶವು 76ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಇಂತಹ ಘಟನೆ ನಡೆದಿರುವುದು ನಮ್ಮೆಲ್ಲರ ಅಂತಃಕರಣವನ್ನು ಕಲಕಿ, ತಲೆತಗ್ಗಿಸುವಂತೆ ಮಾಡಿದೆ. ಇದೊಂದು ಹೃದಯ ಮಿಡಿಯುವ ಆಘಾತಕಾರಿ ಘಟನೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
    ಸಂತ್ರಸ್ತೆಯನ್ನು ಪ್ರಾಣಿಗಿಂತ ಕೀಳಾಗಿ ನಡೆಸಿಕೊಂಡಿದ್ದಾರೆ. ಇವರು ಮನುಷ್ಯರೆಂದು ಕರೆಸಿಕೊಳ್ಳಲು ಯೋಗ್ಯರಲ್ಲ. ಎರಡು ಗಂಟೆ ಕಾಲ ಮಹಿಳೆಯನ್ನು ಹಿಂಸಿಸಲಾಗಿದೆ. ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹೊಡೆಯಲಾಗಿದೆ. ಸಂತ್ರಸ್ತೆ ಎದುರಿಸಿರಬಹುದಾದ ನೋವನ್ನು ಊಹಿಸಲೂ ಸಾಧ್ಯವಿಲ್ಲ. ಬಡವರ ಮೇಲೆಯೇ ಇಂತಹ ದೌರ್ಜನ್ಯಗಳು ನಡೆಯುವುದೇಕೆ ಎಂದು ನ್ಯಾಯಪೀಠ ಆಕ್ರೋಶ ವ್ಯಕ್ತಪಡಿಸಿದೆ.

    ಸಂತ್ರಸ್ತೆಗೆ ಅತ್ಯುತ್ತಮ ಚಿಕಿತ್ಸೆ ಹಾಗೂ ಕೌನ್ಸಿಲಿಂಗ್ ಒದಗಿಸುವ ಅಗತ್ಯವಿದೆ. ಯಾವ ಆಸ್ಪತ್ರೆಯಲ್ಲಿ ಯಾವ ವೈದ್ಯರು ಚಿಕಿತ್ಸೆ ನೀಡಿದ್ದಾರೆ, ಪೊಲೀಸರು ಕೈಗೊಂಡ ಕ್ರಮವೇನು, ಈ ಕುರಿತು ವರದಿ ನೀಡಲು ಸೂಚನೆ ನೀಡಿತು.
    ಮಹಿಳಾ ಆಯೋಗ, ಮಾನವ ಹಕ್ಕುಗಳ ಆಯೋಗ ಏನು ಮಾಡುತ್ತಿದೆ, ಯತ್ರ ನಾರ್ಯಸ್ತು ಪೂಜ್ಯಂತೆ ರಮಂತೆ ತತ್ರ ದೇವತಃ ಎಂಬ ಮಂತ್ರವಿದ್ದರೂ ಪ್ರಯೋಜನವೇನು ಬಂತು, ದ್ವಾಪರ ಯುಗದಲ್ಲಿ ದ್ರೌಪದಿಯನ್ನು ವಿವಸ್ತ್ರಗೊಳಿಸಿದಾಗ ರಕ್ಷಿಸಲು ಕೃಷ್ಣನಿದ್ದ. ಇದು ದುಶ್ಯಾಸನರ ಕಾಲ.
    ಸಂತ್ರಸ್ತೆಯ ಸಹಾಯಕ್ಕೆ ಯಾರೂ ಬರಲಿಲ್ಲ. ನಮ್ಮಲ್ಲಿ ಕಾನೂನು ಭಯವಿಲ್ಲವೆಂಬ ಸಂದೇಶ ಹೋಗುತ್ತಿದೆ ಎಂದು ಕಿಡಿಕಾರಿತು ಸ್ವಾತಂತ್ರ ಬಂದು 75 ವರ್ಷದ ನಂತರವೂ ಇಂತಹ ಘಟನೆ ನಡೆದಿದೆ. ಇಂತಹ ಸಮಾಜದಲ್ಲಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂಬ ಸ್ಥಿತಿ ಬರಬಾರದು. ಇದು ನಾವೆಲ್ಲ ನಾಚಿಕೆ ಪಡಬೇಕಾದ ವಿಷಯ ಎಂದು ಹೇಳಿದ ನ್ಯಾಯಪೀಠ, ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಡಿ.18ರೊಳಗೆ ವರದಿ ಸಲ್ಲಿಸಬೇಕು. ಬೆಳಗಾವಿ ಪೊಲೀಸ್ ಆಯುಕ್ತರು ಮುಂದಿನ ವಿಚಾರಣೆಗೆ ಹಾಜರಾಗುವುದರ ಜತೆಗೆ ಎಸಿಪಿಯೂ ಕೂಡ ಹಾಜರಾಗಬೇಕು ಎಂದು ಹೇಳಿದೆ.

    Verbattle
    Verbattle
    Verbattle
    belagavi Government News Trending ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi
    Next Article ಇಂಧನ ಮಂತ್ರಿ ಜಾರ್ಜ್ ಅವರ ಕಾಳಜಿ-ಬೆಳಕು ಕಂಡ ಗಡಿಗ್ರಾಮ | KG George
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Tracymix ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • LinwoodGah ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.