Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋವಿಡ್ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ 40 ಸಾವಿರ ಕೋಟಿ ಲೂಟಿ | Yediyurappa
    ಸುದ್ದಿ

    ಕೋವಿಡ್ ಹೆಸರಲ್ಲಿ ಯಡಿಯೂರಪ್ಪ ಸರ್ಕಾರ 40 ಸಾವಿರ ಕೋಟಿ ಲೂಟಿ | Yediyurappa

    vartha chakraBy vartha chakraಡಿಸೆಂಬರ್ 26, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ, ಡಿ.26: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Yediyurappa) ಮತ್ತವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಂದು ವಿವಾದದ ಬಾಂಬ್ ಸಿಡಿಸಿದ್ದಾರೆ.
    ಕೊರೊನಾ ಮೊದಲನೇ ಅಲೆ ಅಪ್ಪಳಿಸಿದ ಸಮಯದಲ್ಲಿ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಆರೋಗ್ಯ ಇಲಾಖೆಯಲ್ಲಿ ನಡೆದ ಖರೀದಿಯಲ್ಲಿ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.
    ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದ ಸರ್ಕಾರವಿದ್ದರೇನು? ಬೇರೆ ಸರ್ಕಾರ ಇದ್ದರೇನು? ಕಳ್ಳರು ಕಳ್ಳರೇ ಅಲ್ವಾ? ಯಡಿಯೂರಪ್ಪ ಅವಧಿಯಲ್ಲಿ ಪ್ರತಿಯೊಬ್ಬ ಕೊರೊನಾ ರೋಗಿಗೆ 8 ರಿಂದ 10 ಲಕ್ಷ ರೂ. ಬಿಲ್ ಮಾಡಿದ್ದಾರೆ ಇದೆಲ್ಲವೂ ಗೋಲ್ ಮಾಲ್ ಎಂದು ಹೇಳಿದರು
    ಬಿಜೆಪಿಯಲ್ಲಿ ಯಾರು ಯಾರು ಲೂಟಿ ಮಾಡಿ, ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದನ್ನು ಹೊರ ತೆಗೆಯುವೆ. ಯಡಿಯೂರಪ್ಪ ಅವರು ಕೊರೊನಾ ಸಂದರ್ಭದಲ್ಲಿ 45 ರೂಪಾಯಿಗೆ ಸಿಗುತ್ತಿದ್ದ ಮಾಸ್ಕ್ ಗೆ 485 ರೂಪಾಯಿ ನಿಗದಿಪಡಿಸಿದ್ದರು ಎಂದು ದೂರಿದರು.

    ಸೋಂಕು ಪೀಡಿತರಿಗಾಗಿ ಬೆಂಗಳೂರಿನಲ್ಲಿ 10 ಸಾವಿರ ಬೆಡ್ ಸಿದ್ದಪಡಿಸಿ, ಇದಕ್ಕೆ 10 ಸಾವಿರ ಬೆಡ್ ಬಾಡಿಗೆ ಪಡೆದಿದರು. ಬಾಡಿಗೆ ನೀಡಿದ ಆ ಹಣದಲ್ಲೇ ಬೆಡ್ ಗಳನ್ನು ಖರೀದಿ ಮಾಡಿದ್ದರೆ ಕೋಟ್ಯಾಂತರ ರೂಪಾಯಿ ಉಳಿಯುತ್ತಿತ್ತು. ಇದರಲ್ಲಿ ಎಷ್ಟು ಸಾವಿರ ಕೋಟಿ ರೂಪಾಯಿ ಕೊಳ್ಳೆ ಹೊಡೆದಿದ್ದೀರಿ ಎಂದು ಪ್ರಶ್ನಿಸಿದರು.
    ಈ ವಿಚಾರವನ್ನು ವಿಧಾನಸೌಧದಲ್ಲಿ ಯಡಿಯೂರಪ್ಪ ಅವರಿಗೆ ನೇರವಾಗಿ ಹೇಳಿರುವೆ. ನನಗೆ ಕೊರೊನಾ ಪಾಸಿಟಿವ್ ಆದಾಗ ಮಣಿಪಾಲ್ ಆಸ್ಪತ್ರೆಯಲ್ಲಿ 5 ಲಕ್ಷ 80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿಂದ ಕೊಡಬೇಕು” ಎಂದು ಅವಾಗಲೇ ಪ್ರಶ್ನಿಸಿದ್ದೆ ಎಂದು ತಿಳಿಸಿದರು.
    ನಾನು ಈ ರೀತಿಯಲ್ಲಿ ಮಾತನಾಡುತ್ತಿರುವುದಕ್ಕೆ ಅವರು ನನಗೆ ನೊಟೀಸ್ ಕೊಡಲಿ, ಪಕ್ಷದಿಂದ ಹೊರ ಹಾಕಲಿ ಇದಕ್ಕೆಲ್ಲ ಹೆದರುವುದಿಲ್ಲ ಎಂದು ಹೇಳಿದರು ಇವರೆಲ್ಲರ ಬಣ್ಣ ಬಯಲು ಮಾಡುವೆ. ಸತ್ಯ ಹೇಳಿದರೆ ಎಲ್ಲರಿಗೂ ಭಯ, ಹೀಗಾಗಿ ಭಯದಲ್ಲಿ ಇಡಬೇಕು.

    ಎಲ್ಲರೂ ಕಳ್ಳರಾದರೆ ರಾಜ್ಯ, ದೇಶವನ್ನು ಯಾರು ಉಳಿಸುತ್ತಾರೆ. ಪ್ರಧಾನಿ ಮೋದಿ ಅವರು ಇದ್ದಾರೆ ಎಂಬ ಕಾರಣಕ್ಕೆ ದೇಶ ಉಳಿದಿದೆ ಎಂದರು.
    ಆರೋಗ್ಯ ವಿಚಾರದಲ್ಲಿ ನಾನು ಯಾವುದೇ ರೀತಿಯಲ್ಲೂ ಸರ್ಕಾರದಿಂದ ಹಣ ಇಲ್ಲಿವರೆಗೂ ಪಡೆದಿಲ್ಲ. ಶಾಸಕರಿಗೆ 2 ಲಕ್ಷ ರೂಪಾಯಿ ಸಂಬಳವಿದೆ. ನಾನು ಕಮಿಟಿ ಸಭೆಗೆ ಹೋದರೇ 65 ಸಾವಿರ ರೂಪಾಯಿ ಸಿಗುತ್ತದೆ. ತೆಗೆದುಕೊಂಡರೆ ನಾವು ಮನುಷ್ಯರಾ ಎಂದರು.
    ಯತ್ನಾಳರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ವಿಚಂಪ್ರತಿಕ್ರಿಯಿಸಿ, “ಎಂಥವರ ಬಗ್ಗೆ ಪ್ರಶ್ನೆ ಕೇಳುತ್ತೀರಿ. ಅವರೆಲ್ಲ ರಾಜ್ಯ ಉಪಾಧ್ಯಕ್ಷ ಹೇಗೆ ಆಗುತ್ತಾರೆ. ಇನ್ನು ಬಹಳ ವಿಷಯಗಳಿವೆ ನನ್ನನ್ನು ಉಚ್ಚಾಟನೆ ಮಾಡಿದ ಬಳಿಕ ಬಯಲು ಮಾಡುತ್ತೇನೆ” ಎಂದು ತಿಳಿಸಿದರು.

    Verbattle
    Verbattle
    Verbattle
    #yediyurappa ED ಆರೋಗ್ಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ನರೇಂದ್ರ ಮೋದಿ ಆರ್ಥಿಕ ತಜ್ಞರಾ? | Modi
    Next Article ಕೋವಿಡ್ ಸೋಂಕು ಪೀಡಿತರಿಗೆ ಕಡ್ಡಾಯ ರಜೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Olcbeh ರಲ್ಲಿ ಪಾರ್ಟಿ ಪತ್ತೆ ಹಚ್ಚದ ಪೊಲೀಸರು ಸಸ್ಪೆಂಡ್.
    • LeonardReawn ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.