Facebook Twitter Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home»ಬೆಂಗಳೂರು»ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್
    ಬೆಂಗಳೂರು

    ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್

    vartha chakraBy vartha chakraಜುಲೈ 4, 2023Updated:ಜುಲೈ 4, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು – ವಿಧಾನಸಭೆ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಪಕ್ಷದ ನಾಯಕತ್ವದ ವಿರುದ್ಧವೇ ಹಲವರು ಬಂಡಾಯ ಸಾರಿದ್ದು,ಬಿಕ್ಕಟ್ಟು ಶಮನಕ್ಕೆ ಮುಂದಾಗುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಕ್ಷದ ಹೈಕಮಾಂಡ್ ಮನವಿ ಮಾಡಿದೆ.
    ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಗೆ ತೆರಳಿದ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಮುಖಂಡರೊಂದಿಗೆ ರಾಜ್ಯದ ವಿದ್ಯಮಾನಗಳ ಕುರಿತಂತೆ ಸಮಾಲೋಚನೆ ನಡೆಸಿದರು.
    ಈ ವೇಳೆ ಯಡಿಯೂರಪ್ಪ ಪಕ್ಷದಲ್ಲಿ ನಾಯಕತ್ವದ ಗೊಂದಲದಿಂದಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುವ ಪ್ರಯತ್ನವನ್ನು ನಾಯಕತ್ವ ಮಾಡುತ್ತಿಲ್ಲ ಇದು ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಸೇರಿದಂತೆ ಎಲ್ಲರಿಗೂ ಬೇಸರ ತರಿಸಿದೆ ಇಂತಹ ಸಮಯದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತಂದುಕೊಡಬಲ್ಲ ನಾಯಕತ್ವದ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಗಮನಹರಿಸಬೇಕಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
    ಪಕ್ಷದ ರಾಜ್ಯ ಘಟಕವು ಸೇರಿದಂತೆ ಎಲ್ಲಾ ಘಟಕಗಳ ಪುನರ್ ರಚನೆ ಆಗಬೇಕಿದೆ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಬೇಕು ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣಿಗೊಳಿಸಬೇಕಿದೆ ತಿಳಿಸಿದ್ದಾರೆ.
    ಪಕ್ಷ ಪುನರ್ ಸಂಘಟನೆಯ ಸಮಯದಲ್ಲಿ ಸಾಮಾಜಿಕ ನ್ಯಾಯ ಪಾಲನೆ ಜೊತೆಗೆ ಪ್ರಬಲ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾರ್ಯಕರ್ತರು ಹಾಗೂ ಜನಸಾಮಾನ್ಯರ ಒಂದು ವಲಯದಲ್ಲಿ ಪಕ್ಷ ಪ್ರಬಲ ಸಮುದಾಯವನ್ನು ಕಡೆಗಣಿಸುತ್ತಿದೆ ಎಂಬ ಅಭಿಪ್ರಾಯ ಮೂಡಿದೆ. ಇದನ್ನು ದೂರ ಮಾಡುವ ನಿಟ್ಟಿನಲ್ಲಿ ನಾಯಕತ್ವ ಕೆಲಸ ಮಾಡಬೇಕಿದೆ ಎಂದು ಹೇಳಿರುವ ಅವರು ಈ ನಿಟ್ಟಿನಲ್ಲಿ , ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಸಚೇತಕರಾಗಿ ಸುನಿಲ್ ಕುಮಾರ್ ಅವರನ್ನು ನೇಮಕ ಮಾಡಬೇಕು ವಿಧಾನ ಪರಿಷತ್ತಿಗೆ ಪ್ರತಿಪಕ್ಷ ನಾಯಕರಾಗಿ ಶಶಿಲ್ ನಮೋಶಿ ಅಥವಾ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡುವಂತೆ ಸಲಹೆ ಮಾಡಿದ್ದಾರೆ ಎಂದು ಗೊತ್ತಾಗಿದೆ.
    ಪಕ್ಷದ ಅಧ್ಯಕ್ಷರಾಗಿ ಹಿರಿಯ ನಾಯಕ ಆರ್.ಅಶೋಕ್ ‌ಅಥವಾ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಬೇಕು ಎಂದು ಹೇಳಿದ್ದು,ಉನ್ನತ ಹುದ್ದೆಗೆ ಪ್ರಭಾವಿ ಸಮುದಾಯಕ್ಕೆ ಸೇರಿದ ಅನುಭವಿ ಹಿರಿಯರನ್ನು ನೇಮಕ ಮಾಡಬೇಕು.ಪ್ರಚೋದನಾಕಾರಿ ಹೇಳಿಕೆ ನೀಡುವವರ ಬಾಯಿಗೆ ಲಗಾಮು ಹಾಕಬೇಕು ಎಂದು ಸಲಹೆ ಮಾಡಿರುವುದಾಗಿ ತಿಳಿದು ಬಂದಿದೆ.
    ಅತ್ಯಂತ ಖಚಿತವಾಗಿ ಯಡಿಯೂರಪ್ಪ ತಮ್ಮ ಅಭಿಪ್ರಾಯ ಮಂಡಿಸಿ ಇದೇ ರೀತಿಯಲ್ಲಿ ಸಂಘಟನಾತ್ಮಕ ನಿರ್ಧಾರ ಕೈಗೊಳ್ಳಲು ಹೇಳಿದ ಪರಿಣಾಮ ನಿರ್ಧಾರ ಕೈಗೊಳ್ಳಲು ಅಸಾಧ್ಯವಾದ ಹೈಕಮಾಂಡ್ ತನ್ನ ನಿರ್ಧಾರ ಮುಂದೂಡಿದೆ.
    ಯಾವುದೇ ತೀರ್ಮಾನವಾಗಲಿ,ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕೆಂಬ ಒತ್ತಡದಲ್ಲಿರುವ ಹೈಕಮಾಂಡ್ ಈ ಬಗ್ಗೆ ಅಭಿಪ್ರಾಯ ಆಲಿಸಲು ವೀಕ್ಷಕರನ್ನು ಕಳುಹಿಸಿದೆ.

    ಚುನಾವಣೆ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email
    Previous Articleಸಾಲ ತೀರಿಸೋಕೆ ಎಳನೀರು ಕದ್ದ!
    Next Article ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 100km ವೇಗಮಿತಿ | Bengaluru Mysuru Expressway
    vartha chakra
    • Website

    Related Posts

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    ಸೆಪ್ಟೆಂಬರ್ 22, 2023

    ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery

    ಸೆಪ್ಟೆಂಬರ್ 22, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    KS&DL ಗೆ ಕಾರ್ಪೊರೇಟ್ ರೂಪ

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • scholding ರಲ್ಲಿ ಇವರೆಲ್ಲ ರಷ್ಯಾಕ್ಕೆ ಬರುವಂತಿಲ್ಲ!
    • mail order prescription drugs from canada ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • buy instagram followers uk ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    Latest Kannada News

    NDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS

    ಸೆಪ್ಟೆಂಬರ್ 22, 2023

    KS&DL ಗೆ ಕಾರ್ಪೊರೇಟ್ ರೂಪ

    ಸೆಪ್ಟೆಂಬರ್ 22, 2023

    ಉದ್ಯೋಗ ಖಾತ್ರಿ‌ ಅವಧಿ ಹೆಚ್ಚಳ ಮಾಡಿ | Employment

    ಸೆಪ್ಟೆಂಬರ್ 22, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    ಹಾಲಶ್ರೀ ಪೊಲೀಸರ ಬಲೆಗೆ ಬಿದ್ದಿದ್ದು ಹೇಗೆ ಗೊತ್ತಾ?
    Subscribe