Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.
    ಕಾನೂನು

    ಅಧಿಕಾರಿಗಳಿಗೆ ಸಚಿವ ಜಾರ್ಜ್ ಕಟ್ಟಾಜ್ಞೆ.

    vartha chakraBy vartha chakraಅಕ್ಟೋಬರ್ 14, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.14,:
    ಕುಸುಮ್‌ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
    ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಅವರು,”ಮುಂದಿನ ವರ್ಷ ಜನವರಿಯಿಂದಲೇ ವಿದ್ಯುತ್‌ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದ್ದು, ಅದಕ್ಕೆ ಪೂರಕವಾಗಿ ಕುಸುಮ್‌ ಸಿ ಅಡಿ ಪ್ರಗತಿಯಲ್ಲಿರುವ ಸೋಲಾರ್‌ ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಫೀಡರ್‌ಗಳಿಗೆ ವಿದ್ಯುಚ್ಛಕ್ತಿ ಒದಗಿಸಲು ಕ್ರಮ ಕೈಗೊಳ್ಳಬೇಕು,”ಎಂದು ಸೂಚಿಸಿದರು.
    ಕುಸುಮ್‌ ಸಿ ಯೋಜನೆಯಡಿ ಮೊದಲ ಹಂತದ ಅನುಷ್ಠಾನವನ್ನು ತ್ವರಿತಗೊಳಿಸುವ ಜತೆಗೆ, ಎರಡನೇ ಹಂತದ ಯೋಜನೆಗೆ ಟೆಂಡರ್‌ ಪ್ರಕ್ರಿಯೆಯನ್ನ ತ್ವರಿತವಾಗಿ ಆರಂಭಿಸಬೇಕು. ಅಲ್ಲದೇ, ಎಷ್ಟು ಫೀಡರ್‌ಗಳಿಗೆ ಯಾವ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸಲಾಗುತ್ತದೆ ಎಂಬ ಬಗ್ಗೆ ಕೆಪಿಟಿಸಿಎಲ್‌ಗೆ ಮಾಹಿತಿ ನೀಡಬೇಕು. ಅದರನ್ವಯ, ಅಗತ್ಯಕ್ಕೆ ತಕ್ಕಂತೆ ಸಬ್‌ಸ್ಟೇಷನ್‌ಗಳ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುತ್ತದೆ,”ಎಂದು ಹೇಳಿದರು.
    “ಕುಸುಮ್‌ ಬಿ ಯೋಜನೆಯಡಿ ರಾಜ್ಯಕ್ಕೆ 40,000 ಸೋಲಾರ್‌ ಪಂಪ್‌ಸೆಟ್‌ಗಳು ಮಂಜೂರಾಗಿವೆ.ಈ ಗುರಿ ತಲುಪಲು ಫೀಡರ್‌ಗಳಿಂದ 500 ಮೀಟರ್‌ಗೂ ಹೆಚ್ಚು ದೂರವಿರುವ ಅಕ್ರಮ ಪಂಪ್‌ಸೆಟ್‌ಗಳ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಮೇರೆಗೆ ಸೋಲಾರ್‌ ಪಂಪ್‌ಸೆಟ್‌ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
    ಅಕ್ರಮ ಪಂಪ್‌ಸೆಟ್‌ಗಳನ್ನು ಹೊಂದಿರುವ 10,151 ಅರ್ಜಿಗಳು ಕುಸುಮ್‌ ಬಿ ಅಡಿ ನೋಂದಣಿಯಾಗಿವೆ. ಅದೇ ರೀತಿ ಹೊಸದಾಗಿ, 27820 ಅರ್ಜಿಗಳು ಬಂದಿದ್ದು, ಒಟ್ಟು 37,971 ಅರ್ಜಿಗಳಿಗೆ ಸಂಬಂಧಿಸಿದಂತೆ ಸೋಲಾರ್‌ ಪಂಪ್‌ಸೆಟ್‌ಗಳನ್ನು ಕಾಲಮಿತಿಯಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
    “ಕೃಷಿ ಪಂಪ್ ಸೆಟ್‌ಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳು ಪರಿಣಾಮಕಾರಿಯಾಗಿವೆ. ಹೀಗಾಗಿ ಈ ಯೋಜನೆಗಳ ಅನುಷ್ಠಾನ ಕುರಿತು ಆಯಾ ಜಿಲ್ಲಾ ಮಟ್ಟದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ವಿದ್ಯುತ್ ಪೂರೈಕೆ ಸಮಿತಿಯ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮಿತಿಯ ಸಲಹೆಗಳನ್ನು ಪಡೆದು ಯೋಜನೆಯನ್ನು ಇನ್ನಷ್ಟು ತ್ವರಿತವಾಗಿ ನಿರ್ವಹಣೆ ಮಾಡಬೇಕು”, ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics ಕಾಂಗ್ರೆಸ್ ಕಾನೂನು ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅರ್ಥ ಶಾಸ್ತ್ರದ ನೊಬೆಲ್ ಪ್ರಶಸ್ತಿ ಎಂದೇ ಪ್ರಸಿದ್ದಿ ಪಡೆದಿರುವ ‘ಸ್ವೆರಿಜೆಸ್ ರಿಕ್ಸ್​ಬ್ಯಾಂಕ್ ಪ್ರಶಸ್ತಿ’ಯನ್ನು ಪಡೆದ ಅಮೇರಿಕಾದ ಮೂವರು ಅರ್ಥಶಾಸ್ತ್ರಜ್ಞರು
    Next Article ರೈಲ್ವೆ ಕಾಮಗಾರಿಯಿಂದ ಒಂದು ವಾರಗಳ ಕಾಲ ರಾಜ್ಯದ ಕೆಲ ರೈಲು ಸಂಚಾರದಲ್ಲಿ ಬದಲಾವಣೆ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    1 ಟಿಪ್ಪಣಿ

    1. avigroup on ಡಿಸೆಂಬರ್ 30, 2025 8:02 ಅಪರಾಹ್ನ

      Нужен трафик и лиды? сайт студии avigroup SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Daviddek ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • AU88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.