Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    ಸುದ್ದಿ

    ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?

    vartha chakraBy vartha chakraಜೂನ್ 6, 2025Updated:ಜೂನ್ 6, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-ಆರ್​ಸಿಬಿ ಐಪಿಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ವೇಳೆ ಉತ್ತರ ವಲಯ ಡಿಸಿಪಿ ಸೈದುಲು ಅಡಾವತ್ ಹಾಗೂ ಅವರ ಅವರ ಇಬ್ಬರು ಅಧೀನ ಅಧಿಕಾರಿಗಳ ದಿಟ್ಟ ಕ್ರಮ ಹಲವು ಮಂದಿಯ ಪ್ರಾಣವನ್ನು ಉಳಿಸಿದೆ.
    ಐಪಿಎಲ್‌ ಗೆದ್ದ ಆರ್‌ಸಿಬಿ ತಂಡದ ಆಟಗಾರರಿಗೆ ವಿಧಾನ ಸೌಧದ ಮೆಟ್ಟಿಲಿನ ಮೇಲೆ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ,ಉಪಮುಖ್ಯಮಂತ್ರಿ‌ ಸೇರಿ ಬಹುತೇಕರೂ ಭಾಗಿಯಾಗಿದ್ದರು.
    ಬಹುತೇಕ ಪೋಲಿಸ್‌ ಪಡೆಯನ್ನು ವಿಧಾನ ಸೌಧದ ಆವರಣದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಬಳಿಕದ ಕಾರ್ಯಕ್ರಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿ ಆಗಿದ್ದರಿಂದ ಅಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಧಾವಿಸಲು ಆರಂಭಿಸಿದ್ದರು. ಆದರೆ, ಗೇಟ್ 17 ಅನ್ನು ಕ್ರೀಡಾಂಗಣದ ಭದ್ರತಾ ಸಿಬ್ಬಂದಿಯೊಬ್ಬರು ಮಾತ್ರ ನಿರ್ವಹಿಸುತ್ತಿದ್ದರು.
    ಹೆಚ್ಚುತ್ತಿರುವ ಜನಸಂದಣಿಯನ್ನು ನಿಯಂತ್ರಿಸಲು ಅಲ್ಲಿ ಪೋಲೀಸರೇ ಇರಲಿಲ್ಲ. ಹೀಗಾಗಿ ಆರ್‌ಸಿಬಿ ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಕಿತ್ತೆಸೆದು ಕ್ರೀಡಾಂಗಣದ ಒಳಗೆ ನುಗ್ಗಲು ಆರಂಭಿಸಿ ಸುಮಾರು 5ಸಾವಿರ ಕ್ಕೂ ಅಧಿಕ ಮಂದಿ ಒಂದೇ ಗೇಟ್‌ನಲ್ಲಿ ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರುವ ಹಂತ ತಲುಪಿತ್ತು.
    ಇತ್ತ ಗೇಟ್‌ 18ರಲ್ಲಿಯೂ ಅಷ್ಟೇ ಸಂಖ್ಯೆಯ ಜನರು ಸೇರಿದ್ದರು.
    ಈ ವೇಳೆ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿದ್ದ ಉಪ ಪೊಲೀಸ್ ಆಯುಕ್ತ (ಉತ್ತರ) ಸೈದುಲು ಅದಾವತ್ ಹಾಗೂ ಅವರ ಗನ್ ಮ್ಯಾನ್ ಅಭಿಲಾಷ್ ಮತ್ತು ಆರ್ ಟಿ ನಗರ ಠಾಣೆ ಪೊಲೀಸ್ ಸಬ್-ಇನ್ಸ್ ಪೆಕ್ಟರ್ (ಪಿಎಸ್ಐ) ನಟರಾಜ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
    ಒಂದು ಕ್ಷಣವನ್ನೂ ವ್ಯರ್ಥಮಾಡದ ಡಿಸಿಪಿ ಅದಾವತ್‌ ತಾವೇ ಸ್ವತಃ ಲಾಟಿ ಚಾರ್ಚ್‌ ಮಾಡಿ ಜನರನ್ನು ಚದುರಿಸಿದ್ದಾರೆ. ಬಳಿಕ ಅವರ ತಂಡದ ಸದಸ್ಯರು ಗುಂಪನ್ನು ಚದುರಿಸಿ ಗೇಟ್‌ ಅನ್ನು ಬಂದ್‌ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
    ಡಿಸಿಪಿ ಮತ್ತು ಅವರ ಸಿಬ್ಬಂದಿ ಜನಸಮೂಹವನ್ನು ಚದುರಿಸಲು ಗೇಟ್ 18 ಮತ್ತು 19 ರ ಕಡೆಗೆ ಲಾಠಿ ಚಾರ್ಜ್ ಮಾಡಿದರು. ಇದರಿಂದಾಗಿ, ಗೇಟ್ 19 ರಲ್ಲಿ ಯಾವುದೇ ಕಾಲ್ತುಳಿತ ಸಂಭವಿಸಲಿಲ್ಲ. ಈ ಮಧ್ಯೆ, ಸುಮಾರು ಐದು ಜನರು ಪ್ರಜ್ಞೆ ತಪ್ಪಿ ಬಿದ್ದಿದ್ದರು ಮತ್ತು ಅವರನ್ನು ಗೇಟ್ 17 ರ ಒಳಗೆ ಚಿಕಿತ್ಸೆ ನೀಡಲಾಯಿತು. ಒಂದು ವೇಳೆ ಡಿಸಿಪಿ ಅದಾಲತ್‌ ಹಾಗೂ ಅವರ ತಂಡ ದಿಟ್ಟತನ ತೋರದೇ ಇದ್ದಿದ್ದರೆ ಇನ್ನೂ ದೊಡ್ಡ ಘೋರ ದುರಂತಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿ ಆಗುತ್ತಿತ್ತು.
    ಪೊಲೀಸ್‌ ಕೊರತೆ ಮಧ್ಯೆ ಒಂದು ವಿಭಾಗದ ಉಸ್ತುವಾರಿ ಹೊಂದಿರುವ ಹಿರಿಯ ಅಧಿಕಾರಿಯೊಬ್ಬರು ತಾವೇ ಸ್ವತಃ ಕಾರ್ಯಾಚರಣೆಗೆ ಇಳಿದು ತಮ್ಮ ಸುರಕ್ಷತೆಯನ್ನು ಲೆಕ್ಕಿಸದೇ ಕಾರ್ಯ ದಕ್ಷತೆ ಮೆರೆದಿದ್ದಾರೆ. ಈ ಘಟನೆಯಲ್ಲಿ ಡಿಸಿಪಿ ಅದಾವತ್ ಅವರಿಗೂ ಗಾಯಗಳಾಗಿ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

    Verbattle
    Verbattle
    Verbattle
    ಚಿನ್ನ ಪೋಲಿಸ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleದಯಾನಂದ್ ಗೆ ಯಾಕೆ ಶಿಕ್ಷೆ !
    Next Article ಕಳ್ಳ, ಕಲ್ಕೆರೆ ಮಂಜನಿಗೆ ಗುಂಡಿಟ್ಟ ಪೊಲೀಸ್
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    • LarryCax ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • LinwoodGah ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.