Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್
    Viral

    ಜಟಕಾ ಬಂಡಿಯ ಮುಸ್ಲಿಂ ಬಜೆಟ್ ಎಂದ ಅಶೋಕ್

    vartha chakraBy vartha chakraಮಾರ್ಚ್ 7, 202542 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.7:
    ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕ, ಅಭಿವೃದ್ಧಿ ಶೂನ್ಯ, ದೂರದೃಷ್ಟಿ ರಹಿತ ಅಡ್ಡ ಕಸುಬಿ ಬಜೆಟ್ ಎಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು ಇದೊಂದು ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಾಲ ಮಾಡಲಾಗಿದೆ ಎಂದು ಟೀಕಿಸಿದರು.
    ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು ಮುಂದುವರಿಸಲಾಗಿದೆ. ಹಳೆ ಮೈಸೂರು ಅಥವಾ ಉತ್ತರ ಕರ್ನಾಟಕಕ್ಕೆ ನೀರಾವರಿ ಯೋಜನೆಗಳನ್ನು ಕೇಂದ್ರ ಸರ್ಕಾರದ ಅನುಮತಿ ಬಳಿಕ ಮುಂದುವರಿಸುತ್ತೇವೆ ಎಂದು ತಿಳಿಸಲಾಗಿದೆ. ಇದನ್ನು ಓದಿ ಪುಟಗಳನ್ನು ವ್ಯರ್ಥ ಮಾಡಲಾಗಿದೆ ಎಂದರು.
    ಅಬಕಾರಿ ಇಲಾಖೆಗೆ 60,000 ಕೋಟಿ ರೂ. ಗುರಿ ನೀಡಿ, ಹೊಸ ಬಾರ್‌ಗಳನ್ನು ಘೋಷಿಸಲಾಗಿದೆ. ಇದನ್ನು ಕಾಂಗ್ರೆಸ್‌ ಶಾಸಕರ ಬಾಯಿ ಮುಚ್ಚಿಸಲು ಮಾಡಲಾಗಿದೆ. ಇದರಿಂದ 40,000 ಕೋಟಿ ರೂ. ಆದಾಯ ಬರಲಿದೆ. ಅನ್ನಭಾಗ್ಯ ಹೋಗಿ ಕುಡುಕರ ಭಾಗ್ಯ ಬಂದಿದೆ. 4-5 ಸಾವಿರ ಕೋಟಿ ರೂ. ಆದಾಯ ಹೆಚ್ಚಿಸಲು ಈ ಕ್ರಮ ವಹಿಸಲಾಗಿದೆ ಎಂದರು.
    ಕಳೆದ ಬಜೆಟ್‌ನಲ್ಲೂ ಯಾವುದೇ ತೆರಿಗೆ ಘೋಷಣೆ ಮಾಡಿರಲಿಲ್ಲ. ಬಳಿಕ ತೆರಿಗೆಗಳನ್ನು ಹೆಚ್ಚಿಸಲಾಯಿತು. ಈ ಬಾರಿಯೂ ಬಜೆಟ್‌ ನಂತರ ತೆರಿಗೆ ಏರಿಕೆ ಮಾಡಲಾಗುತ್ತದೆ. ಬಸವರಾಜ ಬೊಮ್ಮಾಯಿ ಬಜೆಟ್‌ ಮಂಡನೆ ಮಾಡಿದಾಗ, ಅದು ಹೆಚ್ಚುವರಿಯಾಗಿತ್ತು. ಕಾಂಗ್ರೆಸ್‌ ಕೊರತೆ ಬಜೆಟ್‌ ಮಂಡಿಸಿದೆ. 193 ಪುಟಗಳಲ್ಲಿ ಹೊಸತನವೇ ಇಲ್ಲ ಎಂದು ಹೇಳಿದರು
    ಇದು ಕೇವಲ ಮುಸ್ಲಿಮರ ಬಜೆಟ್‌. ಮುಸ್ಲಿಮರ ಜಟಕಾ ಗಾಡಿ ಏರಿಕೊಂಡು ಸಿದ್ದರಾಮಯ್ಯ ಪ್ರಯಾಣ ಮಾಡಿದ್ದಾರೆ. ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ 1,000 ಕೋಟಿ ರೂ. ನೀಡಲಾಗಿದೆ. ವಕ್ಫ್‌ ಬೋರ್ಡ್‌ ಮುಚ್ಚಿ ಎಂದರೆ, ಅದಕ್ಕೆ 150 ಕೋಟಿ ರೂ. ನೀಡಿದ್ದಾರೆ. ಮುಸ್ಲಿಮರ ವಿದೇಶ ಪ್ರಯಾಣಕ್ಕೆ 30 ಲಕ್ಷ ರೂ. ನೀಡಲಾಗುತ್ತದೆ. ಆದರೆ ಗುರುದ್ವಾರಗಳಿಗೆ ಕೇವಲ 2 ಕೋಟಿ ರೂ. ನೀಡಲಾಗಿದೆ. ಮುಸ್ಲಿಮರ ಓಟಿನ ಋಣ ತೀರಿಸಲು ಈ ಬಜೆಟ್‌ ನೀಡಲಾಗಿದೆ ಎಂದು ದೂರಿದರು.
    ಎತ್ತಿನಹೊಳೆ ಪೂರ್ಣಗೊಳಿಸಲಾಗುವುದು ಎಂದಿದ್ದಾರೆ. ಆದರೆ ಹಣ ಎಷ್ಟು ನಿಗದಿ ಮಾಡಿದ್ದಾರೆ ಎಂದು ಹೇಳಿಲ್ಲ. ತುಂಗಾ, ಕೃಷ್ಣೆ ಮೊದಲಾದ ನೀರಾವರಿ ಯೋಜನೆಗಳಿಗೆ ಹಣ ನೀಡಿಲ್ಲ. ಅಭಿವೃದ್ಧಿಗೆ ಒಂದು ತೊಟ್ಟು ನೀರು ಕೂಡ ಕೊಟ್ಟಿಲ್ಲ. ಬೆಂಗಳೂರಿನಲ್ಲಿ ಎಲ್ಲವನ್ನೂ ಸುರಂಗ ಮಾಡಲು ಯೋಜನೆ ರೂಪಿಸಿದ್ದಾರೆ. 40,000 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಘೋಷಿಸಲಾಗಿದೆ. ಫೆರಿಫರಲ್‌ ರಿಂಗ್‌ ರಸ್ತೆಯನ್ನೇ ಇನ್ನೂ ಮಾಡಿಲ್ಲ. ಇನ್ನು ಸುರಂಗ ಯೋಜನೆ ಮಾಡಲು ಯಾರೂ ಮುಂದೆ ಬರಲ್ಲ. ಬೆಂಗಳೂರಿನ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ರಸ್ತೆ ಗುಂಡಿ ಮುಚ್ಚುವ, ಕಸದ ಸಮಸ್ಯೆ ಪರಿಹರಿಸುವ ಬಗ್ಗೆ ಹೇಳಿಲ್ಲ. ಚುನಾವಣೆ ಇರುವುದರಿಂದ ಇಂತಹ ಬೋಗಸ್‌ ಬಜೆಟ್‌ ಮಂಡಿಸಲಾಗಿದೆ ಎಂದು ಟೀಕಿಸಿದರು

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬೆಂಗಳೂರು ಬೊಮ್ಮಾಯಿ ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Next Article ಅಕ್ಕ ಸೊಸೈಟಿ ಸ್ಥಾಪನೆ
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Marcusreomb ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • MichaelAffew ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.