ಬೆಂಗಳೂರು,ಮೇ.13:
ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
ಸಾಕ್ಷಿಗಳ ನಾಶಕ್ಕೆ ಯತ್ನಿಸಬಾರದು, ದೇಶ ಬಿಟ್ಟು ಹೋಗಬಾರದು, ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದ ನ್ಯಾಯಾಲಯ ಜಾಮೀನು ನೀಡಿದೆ.
ಜಾಮೀನು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, “ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ” ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದರು
ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ ವಿ ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.
ಎಸ್ ಐ ಟಿ ಪರವಾಗಿ ವಾದ ಮಂಡಿಸಿದ ವಕೀಲರು
ನ್ಯಾಯಾಲಯ ಆರೋಪಿ ಪ್ರಭಾವಿ ಎಂದು ಅಂಶವನ್ನ ಪರಿಗಣಿಸಬೇಕು. ಇದು ಕೇವಲ ಮಹಿಳೆಯನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣವಲ್ಲ. ಅಪಹರಣವಾದ ಮಹಿಳೆ ಅತ್ಯಾಚಾರ ಪ್ರಕರಣ ಸಂತ್ರಸ್ತೆಯಾಗಿದ್ದು, ದೂರು ನೀಡದಂತೆ ಮಾಡಿದ ಯತ್ನವಿದು. ಅಲ್ಲದೆ ಇತರೆ ಮಹಿಳೆ ದೂರು ನೀಡಿದರೆ ತಮಗೆ ತೊಡಕಾಗಬಹುದು ಎಂಬ ಅಪಹರಿಸಲಾಗಿತ್ತು. ಸಾಕ್ಷಿಗಳ ಹೇಳಿಕೆ ಇನ್ನೂ ದಾಖಲಿಸಿಕೊಳ್ಳಬೇಕು. ಇತರೆ ಮಹಿಳೆಯರು ದೂರು ಕೊಡಬೇಕಾದರೆ ರೇವಣ್ಣಗೆ ಜಾಮೀನು ನೀಡಕೂಡದು ಎಸ್ಐಟಿ ಪರ ವಕೀಲರು ವಾದಿಸಿದರು.
ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಸಾಕ್ಷಿ ನಾಶಪಡಿಸದಂತೆ ಸೂಚಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಹಾಗೆಯೇ ಎಸ್ಐಟಿ ತನಿಖೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಹೇಳಿದೆ.

5 ಪ್ರತಿಕ್ರಿಯೆಗಳು
Lås op for legendariske gevinster hos Betano Casino https://betanogame.org/da/. Nye brugere tjener op til €500 plus 200 gratis spins. Sikkert, spændende og altid givende.
Главные новости: https://l-parfum.ru/catalog/Gucci/glamorous-magnolia/
дизайн проект частного дома дизайн дома под ключ
дизайнер интерьера квартиры спб санкт петербург дизайнер интерьера
Fresh news on Page: https://bcircleagency.com/cuia-e-o-superior-casino-online-em-portugal-no1-acimade-2025/