Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆ ಶಿವಕುಮಾರ್ ಮತ್ತು ದೇವರಾಜ ಗೌಡ ನಡುವೆ ನಡೆದಿದ್ದೇನು.?
    Trending

    ಡಿಕೆ ಶಿವಕುಮಾರ್ ಮತ್ತು ದೇವರಾಜ ಗೌಡ ನಡುವೆ ನಡೆದಿದ್ದೇನು.?

    vartha chakraBy vartha chakraಮೇ 7, 20241 ಟಿಪ್ಪಣಿ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.7:
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗ ಪ್ರಕರಣ ಕ್ಷಣಕ್ಕೊಂದು ತಿರುವು ನಡೆಯುತ್ತಿದೆ. ಬಿಜೆಪಿ ನಾಯಕರ ಒತ್ತಡ ಮತ್ತು ಕುಮಾರಸ್ವಾಮಿ ಅವರ ಒಪ್ಪಿಗೆಯ ಮೇರೆಗೆ ವಕೀಲ ದೇವರಾಜೇ ಗೌಡ ಈ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದಾರೆ ಎಂದು ಹಿರಿಯ ನಾಯಕ ಶಿವರಾಮೇಗೌಡ ಆಪಾದಿಸಿದ್ದಾರೆ.
    ಪೆನ್ ಡ್ರೈವ್ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂದು ನಿನ್ನೆ ವಕೀಲ ದೇವರಾಜೇಗೌಡ ಆರೋಪ ಮಾಡಿ ಆಡಿಯೋ ಬಿಡುಗಡೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಇಂದು ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದಾರೆ.
    ದೇವರಾಜಗೌಡ ಹಾಗೂ ತಮ ನಡುವಿನ ಭೇಟಿ ಹಾಗೂ ಅನಂತರದ ಬೆಳವಣಿಗೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿರುವ ಶಿವರಾಮೇಗೌಡ ಅವರು ಈ ಪ್ರಕರಣದಲ್ಲಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.
    ತಾವು ಮತ್ತು ದೇವರಾಜೇಗೌಡ ಬಿಜೆಪಿಯಲ್ಲಿದ್ದೇವು. ಅವರು ಹೊಳೆನರಸೀಪುರದ ಅಭ್ಯರ್ಥಿ ಎಂಬ ಕಾರಣಕ್ಕೆ ಸಿಕ್ಕಾಗ ಹಾಯ್‌ ಬಾಯ್‌ ಹೇಳುತ್ತಿದ್ದೆ. ನಾಲ್ಕು ದಿನಗಳ ಹಿಂದಷ್ಟೆ ಅವರ ಜೊತೆ ಮಾತನಾಡಿದ್ದು ಬಿಟ್ಟರೆ, ಅದಕ್ಕೂ ಮೊದಲು ಹೆಚ್ಚಿನ ಪರಿಚಯ ಇರಲಿಲ್ಲ.ತಮ್ಮ ಮನೆಯಲ್ಲಿ ಎಂದಿನಂತೆ ಜನರನ್ನು ಭೇಟಿ ಮಾಡುವ ವೇಳೆ ಹೊಳೆನರಸೀಪುರದವರು ಬಂದಿದ್ದರು. ಅವರು ನಮ್ಮ ದೇವರಾಜೇಗೌಡರು ನಿಮ್ಮನ್ನು ಕೇಳುತ್ತಿದ್ದರು ಎಂದು ಹೇಳಿದರು. ವಿಡಿಯೋ ಬಹಿರಂಗದ ಬಗ್ಗೆ ನನಗೂ ಕುತೂಹಲ ಇತ್ತು. ಹಾಗಾಗಿ ಕರೆ ಮಾಡಿಕೊಡುವಂತೆ ಹೊಳೆನರಸೀಪುರದವರ ಬಳಿ ಹೇಳಿದ್ದೆ. ಫೋನ್‌ನಲ್ಲಿ ಸಂಪರ್ಕಕ್ಕೆ ಸಿಕ್ಕ ದೇವರಾಜೇಗೌಡರಿಗೆ ನಿಮ್ಮ ಆಸೆ ಈಡೇರಿತ್ತಲ್ಲ, ಎರಡು ವರ್ಷದ ನಿಮ್ಮ ಹೋರಾಟ ಯಶಸ್ವಿಯಾಯಿತಲ್ಲ ಎಂಬುದಾಗಿ ಅಭಿನಂದಿಸಿದ್ದೆ ಎಂದು ತಿಳಿಸಿದರು.
    ಆಗ ದೇವರಾಜ ಗೌಡ ಅವರು ನಾನು ಹಿರಿಯ ವಕೀಲೆ ಪ್ರಮೀಳಾನೇಸರ್ಗಿ ಅವರ ಕಚೇರಿಯಲ್ಲಿ ಕಿರಿಯ ವಕೀಲನಾಗಿ ಕೆಲಸ ಮಾಡುತ್ತಿದ್ದೇನೆ ನಾನು ತುಂಬಾ ಕಷ್ಟದಲ್ಲಿದ್ದು ನಿಮ್ಮನ್ನು ಭೇಟಿಯಾಗಬೇಕಿದೆ ಎಂದು ಹೇಳಿದ್ದರು ಆಗ ನಾನು ಈಗ ಸಾಧ್ಯವಿಲ್ಲ ನಾನು ಕೊಂಚ ಬ್ಯುಸಿಯಾಗಿದ್ದೇನೆ ಎಂದು ಹೇಳಿದ್ದೆ ಆನಂತರದಲ್ಲಿ ವಕೀಲೆ ಪ್ರಮೀಳಾನೇಸರ್ಗಿ  ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತನಾಡಿದ್ದೆ ಎಂದು ತಿಳಿಸಿದರು
    ಈ ವೇಳೆ ದೇವರಾಜ ಗೌಡ ಅವರು ತಮಗೆ
    ಬಿಜೆಪಿಯ ಎಲ್ಲಾ ಮುಖಂಡರು ವಿಡಿಯೋ ಬಹಿರಂಗ ಪಡಿಸುವಂತೆ ಬಲವಂತ ಮಾಡಿದ್ದರು. ಅದಕ್ಕಾಗಿ ನಾನೇ ಬಿಡುಗಡೆ ಮಾಡಿದ್ದೆ. ಅದಕ್ಕೆ ಕುಮಾರಸ್ವಾಮಿಯವರ ಒಪ್ಪಿಗೆಯೂ ಇತ್ತು ಎಂದು  ನನ್ನ ಬಳಿ ಹೇಳಿಕೊಂಡರು. ನಾನು ವಿಡಿಯೋ ಬಿಡುಗಡೆ ಮಾಡಿದ ಮೇಲೆ ಸಾಕಷ್ಟು ಬೆಳವಣಿಗೆಯಾಗಿದೆ.ವ್ಯಾಪಕ ಚರ್ಚೆಯಾಗುತ್ತಿದೆ. ಒಮೆ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿಸಿ ಎಂದು ಅವರು ಕೇಳಿಕೊಂಡರು. ದೇವರಾಜಗೌಡ ಕೂಡ ಯುವ ಕಾಂಗ್ರೆಸ್‌‍ನಲ್ಲಿದ್ದರಂತೆ, ಆಗ ಡಿ.ಕೆ.ಶಿವಕುಮಾರ್‌ ಬೆಂಬಲ ನೀಡಲಿಲ್ಲ ಎಂಬ ಆಕ್ಷೇಪವನ್ನು ವ್ಯಕ್ತ ಪಡಿಸಿದ್ದರು. ಆಗಿದ್ದು ಆಗಿ ಹೋಯಿತು ಬಿಡಿ ಎಂದು ನಾನು ಸಮಾಧಾನ ಮಾಡಿದ್ದೆ. ನಮ ಮಾತುಕತೆ ವೇಳೆಗೆ ಡಿ.ಕೆ.ಶಿವಕುಮಾರ್‌ ಬೇರೆ ಊರಿನ ಪ್ರವಾಸದಲ್ಲಿದ್ದರು. ದೇವರಾಜೇಗೌಡ ರಾತ್ರಿ ಏಳು ಗಂಟೆಯವರೆಗೂ ತಮ ಜೊತೆಯಲ್ಲಿ ತಿಂಡಿ ತಿಂದುಕೊಂಡು ತಿರುಗಾಡಿಕೊಂಡಿದ್ದರು. ಆ ಬಳಿಕ ಹೋದರು. ಆ ಕ್ಷಣದಲ್ಲಿ ಅವರ ಚಟುವಟಿಕೆ ನೋಡಿದರೆ ಪ್ರಜ್ವಲ್‌ ರೇವಣ್ಣನಿಗಿಂತ ದೊಡ್ಡ ಮನೋರೋಗಿ ಎನಿಸಿತ್ತು ಎಂದು ವಿವರಿಸಿದರು.
    ತಮ್ಮ ಮೊಬೈಲ್‌ ಅನ್ನು ಗುಪ್ತಚರ ಇಲಾಖೆಯವರು ಟಾಪ್‌ ಮಾಡುತ್ತಿದ್ದಾರೆ ಎಂದು ಆತ ವಾಕಿಟಾಕಿ ಬಳಸುತ್ತಿದ್ದಾರೆ. ಹೋರಾಟ ಮಾಡುವ ನೀನು ಹುಷಾರು ಎಂದು ನಾನು ಕಾಳಜಿಯಿಂದ ಹೇಳಿದ್ದೆ. ರಾತ್ರಿ 11ಗಂಟೆಗೆ ಎಂದಿನಂತೆ ನಾನು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಆರಂಭದಲ್ಲಿ ದೇವರಾಜೇಗೌಡ ನಿಮ ಬಳಿ ಮಾತನಾಡಬೇಕಂತೆ ಮಾತನಾಡುತ್ತೀರಾ ಎಂದು ಡಿ.ಕೆ.ಶಿವಕುಮಾರ್‌ ಅವರನ್ನು ಕೇಳಿದೆ.
    ಅವರು ಬೇಡ ಎಂದರು, ನಾನೇಕೆ ಅವರ ಜೊತೆ ಮಾತನಾಡಬೇಕು ಎಂದು ಅವರು ಹೇಳಿದರು. ನಾನೇ ಬಲವಂತ ಮಾಡಿ ಒಪ್ಪಿಸಿದೆ. ಸರಿ ಕರೆ ಮಾಡಿಕೊಡಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಆ ವೇಳೆಗೆ ದೇವರಾಜೇಗೌಡ ದೂರದಲ್ಲಿದ್ದೇನೆ ಬರಲು ತಡವಾಗುತ್ತದೆ ಎಂದು ಹೇಳಿದ್ದರು.ನಾನು
    ಫೋನ್‌ನಲ್ಲೇ ಮಾತನಾಡಿ ಎಂದು ಡಿ.ಕೆ.ಶಿವಕುಮಾರ್‌ ಕೈಗೆ ಫೋನ್‌ ಕೊಟ್ಟೆ. ಡಿ.ಕೆ.ಶಿವಕುಮಾರ್‌ ಬಳಿಯೂ ದೇವರಾಜ್‌ಗೌಡ ಫೋನ್‌ನಲ್ಲಿ ಎರಡು ಮೂರು ಮಂದಿ ಸಂತ್ರಸ್ತರ ಬಗ್ಗೆ ವಿವರಣೆ ನೀಡುತ್ತಿದ್ದರು,ಅದನ್ನೇಲ್ಲಾ ಕೇಳಲು ನಿರಾಕರಿಸಿದ ಡಿ.ಕೆ.ಶಿವಕುಮಾರ್‌ ಎಸ್‌‍ಐಟಿ ರಚನೆ ಮಾಡಿದ್ದೇವೆ. ಏನೇ ಇದ್ದರೂ ತನಿಖಾಧಿಕಾರಿಗಳ ಮುಂದೆ ಹೇಳಿ ಎಂದು ಫೋನ್‌ ಕಟ್‌ ಮಾಡಿದ್ದರು ಎಂದು ಶಿವರಾಮೇಗೌಡ ವಿವರಿಸಿದ್ದಾರೆ.
    ಡಿ.ಕೆ.ಶಿವಕುಮಾರ್‌ಗೂ ಇದಕ್ಕೂ ಸಂಬಂಧ ಇಲ್ಲ, ದೇವರಾಜೇಗೌಡನನ್ನೂ ಕರೆದುಕೊಂಡು ಬಾ ಎಂದು ನನ್ನ ಬಳಿ ಅವರು ಹೇಳಿರಲಿಲ್ಲ. ಇಷ್ಟು ಕೆಳಮಟ್ಟದಲ್ಲಿ ರಾಜಕಾರಣ ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ. ಡಿ.ಕೆ.ಶಿವಕುಮಾರ್‌ ಮಾತನಾಡಿರುವ ಆಡಿಯೋ ಇದ್ದರೆ ಪೂರ್ತಿ ಬಹಿರಂಗ ಮಾಡಲಿ. ರಾಜಕೀಯಕ್ಕಾಗಿ ಸ್ಟಂಟ್‌ ಮಾಡುವುದು ಬೇಡ ಎಂದು ಶಿವರಾಮೇಗೌಡ ಸವಾಲು ಹಾಕಿದರು.
    ಡಿ.ಕೆ.ಶಿವಕುಮಾರ್‌ ಮಾತನಾಡಿರುವ ಕಾಲ್‌ ಅನ್ನು ದೇವರಾಜೇಗೌಡ ರೆಕಾರ್ಡ್‌ ಮಾಡಿಕೊಳ್ಳುವುದು ನನಗೆ ಗೊತ್ತಿರಲಿಲ್ಲ. ವಕೀಲ ಎಂಬ ಗೌರವದಿಂದ ನಾನು ಮಾತನಾಡಿದ್ದೆ, ಈ ರೀತಿ ಮಾಡುತ್ತಾರೆ ಎಂಬ ಮಾಹಿತಿ ಇದಿದ್ದರೆ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿರಲಿಲ್ಲ ಎಂದು ಅಸಮಧಾನ ವ್ಯಕ್ತ ಪಡಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಮಾನಸಿಕ ಅಸ್ವಸ್ಥ!.?
    Next Article ಪೆನ್ ಡ್ರೈವ್ ಪ್ರಕರಣ ಶಿವಕುಮಾರ್ ಮಾಡಿದ ಪಿತೂರಿಯಂತೆ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    1 ಟಿಪ್ಪಣಿ

    1. Lrofwc on ಫೆಬ್ರವರಿ 11, 2026 3:20 ಅಪರಾಹ್ನ

      mgm promotions https://betmgm-play.com/ betmgm District of Columbia

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Fufrha ರಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಅಸಲಿ ಕಾರಣ ಇಲ್ಲಿದೆ | BJP Karnataka
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.