Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿ ದರ್ಶನ ಹೆಸರಲ್ಲಿ ಶಾಸಕರಿಗೆ ಪಂಗನಾಮ.
    ಅಪರಾಧ

    ತಿರುಪತಿ ದರ್ಶನ ಹೆಸರಲ್ಲಿ ಶಾಸಕರಿಗೆ ಪಂಗನಾಮ.

    vartha chakraBy vartha chakraಡಿಸೆಂಬರ್ 26, 202461 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಕಲಿಯುಗದ ಪ್ರತ್ಯಕ್ಷ ದೈವ ಎಂದೆ ತಿರುಪತಿಯ ವೆಂಕಟೇಶ್ವರನನ್ನು ಆರಾಧಿಸಿ ಪೂಜಿಸುತ್ತಾರೆ. ಏಳು ಬೆಟ್ಟದ ಒಡೆಯನ ದರ್ಶನಕ್ಕೆ ಪ್ರತಿದಿನ ಲಕ್ಷಾಂತರ ಮಂದಿ ತಿರುಪತಿಗೆ ಭೇಟಿ ನೀಡುತ್ತಾರೆ.
    ಸರತಿ ಸಾಲಿನಲ್ಲಿ ದಿನ ಗಟ್ಟಲೆ ಕಾದು ನಿಂತು ಕೇವಲ ಒಂದೆರಡು ನಿಮಿಷ ಮಾತ್ರ ವೆಂಕಟೇಶ್ವರನ ದರ್ಶನ ಸಿಗುತ್ತದೆ. ಹೆಚ್ಚಿನ ಅವಧಿ ಹಾಗೂ ಶೀಘ್ರ ದರ್ಶನಕ್ಕಾಗಿ ಭಕ್ತರು ಲಕ್ವಾಂತರ ರೂಪಾಯಿ ವಿನಿಯೋಗಿಸಲು ಸಿದ್ಧರಿರುತ್ತಾರೆ.
    ಭಕ್ತರ ಇಂತಹ ಮನೋಭಿಲಾಷ ಅರಿತ ಕೆಲವು ವಂಚಕರು ವೆಂಕಟೇಶ್ವರನ ದರ್ಶನ ಮಾಡಿಸುವ ಇಲ್ಲವೇ ವಿಶೇಷ ಪೂಜೆ ಅಥವಾ ಆರಾಧನೆಗೆ ವ್ಯವಸ್ಥೆ ಮಾಡಿಕೊಡುವ ಹೆಸರಿನಲ್ಲಿ ವಂಚನೆ ಮಾಡುವ ಪ್ರಕರಣಗಳು ನಡೆಯುತ್ತಲೇ ಇರುತ್ತದೆ.
    ಮೊನ್ನೆ ಮೊನ್ನೆಯಷ್ಟೇ ಭಾರತ ಕ್ರಿಕೆಟ್ ತಂಡದ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಮ್ಯಾನೇಜರ್ ಗೆ ಶೀಘ್ರವಾಗಿ ವಿಐಪಿ ದರ್ಶನ ಮಾಡಿಸುವ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೋಸ ಮಾಡಿರುವ ಪ್ರಕರಣ ನಡೆದಿತ್ತು ಇದು ಇನ್ನೂ ಹಸಿರಾಗಿರುವಾಗಲೇ ನೆಲಮಂಗಲ ಕ್ಷೇತ್ರದ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಅವರಿಗೆ ಪಂಗನಾಮ ಹಾಕಿರುವ ಘಟನೆ ನಡೆದಿದೆ.
    ಬಿಜೆಪಿ ಶಾಸಕ ಎಸ್ ಆರ್ ಶ್ರೀನಿವಾಸ್ ಅವರನ್ನು ಈ ಹಿಂದಿನ ಆಂಧ್ರಪ್ರದೇಶ ಸರ್ಕಾರ ತಿರುಪತಿ ದೇವಸ್ಥಾನ ಟ್ರಸ್ಟ್ ನ ಸದಸ್ಯರಾಗಿ ನೇಮಕ ಮಾಡಿತ್ತು. ಶಾಸಕ ವಿಶ್ವನಾಥ್ ಅವರು ಕರ್ನಾಟಕದಿಂದ ತಿರುಪತಿಗೆ ಹೋಗುವವರಿಗೆ ದರ್ಶನ, ವಸತಿ ಸೌಲಭ್ಯ ಕಲ್ಪಿಸಿಕೊಡುತ್ತಿದ್ದರು ಇದಕ್ಕಾಗಿ ಮಾರುತಿ ಎಂಬ ಹೆಸರಿನ ಸಿಬ್ಬಂದಿಯನ್ನು ನೇಮಕ ಮಾಡಿದ್ದರು.
    ಈ ವ್ಯಕ್ತಿ ವಿಶ್ವನಾಥ್ ಟಿಟಿಡಿ ಯ ಸದಸ್ಯರಾಗಿರುವವರೆಗೆ ತಿರುಪತಿಯಲ್ಲಿ ತಮ್ಮ ಶಾಸಕರು ಸೂಚಿಸಿದ ವ್ಯಕ್ತಿಗಳಿಗೆ ದೇವರ ದರ್ಶನ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿ ಕೊಡುತ್ತಿದ್ದರು.
    ವಿಶ್ವನಾಥ್ ಅವರ ಅವಧಿ ಮುಗಿಯುತ್ತಿದ್ದಂತೆ ಅವರು ಮಾರುತಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದರು. ಇದಾದ ನಂತರವೂ ಮಾರುತಿ ತಿರುಪತಿಯಲ್ಲಿ ಕೆಲವರ ಸಂಪರ್ಕದೊಂದಿಗೆ ಆಸಕ್ತರಿಗೆ ದುಬಾರಿ ಬೆಲೆಗೆ ದೇವರ ದರ್ಶನ ಮತ್ತು ಇತರೆ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಮಾಡುತ್ತಿದ್ದರು.
    ಅದೇ ರೀತಿ ಶಾಸಕ ಶ್ರೀನಿವಾಸ್ ಮತ್ತು ಅವರ ಆತನಿಗೆ ದೇವರ ದರ್ಶನ ಮತ್ತು ಅಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿ ಕೊಡುವುದಾಗಿ ಹೇಳಿ ಎಂಟು ಲಕ್ಷ ರೂಪಾಯಿ ಪಡೆದುಕೊಂಡಿದ್ದ ಆದರೆ ವರ್ಷ ಕಳೆದರೂ ಶಾಸಕರು ಸೇರಿದಂತೆ ಯಾರಿಗೂ ಯಾವುದೇ ರೀತಿಯ ದರ್ಶನ ಮತ್ತು ಸೇವೆಗೆ ಅವಕಾಶ ಕಲ್ಪಿಸಲಿಲ್ಲ ಜೊತೆಗೆ ಹಣ ಕೂಡ ವಾಪಸ್ ಕೊಡಲಿಲ್ಲ ಇದರಿಂದ ಬೇಸರಗೊಂಡ ಶಾಸಕರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
    ಇದಾದ ನಂತರ ಮಾರುತಿ ತಲೆಮರಿಸಿಕೊಂಡಿದ್ದ ಎಂದು ಹೇಳಲಾಗಿದೆ. ಇದೀಗ ಆತನನ್ನು ಪತ್ತೆ ಹಚ್ಚಿರುವ ನೆಲಮಂಗಲ ಪೊಲೀಸರು ಅವನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ

    ಕರ್ನಾಟಕ ಕಾಂಗ್ರೆಸ್ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Next Article ಕಾಡಿನಲ್ಲಿ ನಾಡ ಬಾಂಬ್ ಇಟ್ಟ ಕೇಡಿಗಳು.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GordonMoF ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • ElliottAlods ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Lune Finvex ರಲ್ಲಿ ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe