ಬೆಂಗಳೂರು.ಜು,9:
ತಮ್ಮ ಗೆಳತಿ ಹಾಗೂ ಚಿತ್ರ ನಟಿ ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ರವಾನಿಸಿದ್ದಾರೆ ಎಂದು ಕೋಪಗೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಹತ್ಯೆ ಮಾಡಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಪಡಬಾರದ ಸಂಕಷ್ಟ ಪಡುತ್ತಿದ್ದಾರೆ.
ಕೋಪದಲ್ಲಿ ಅತ್ಯಂತ ದುಡುಕಿನಿಂದ ತೆಗೆದುಕೊಂಡ ನಿರ್ಧಾರದ ಪರಿಣಾಮವಾಗಿ ಇಡೀ ತಮ್ಮ ತಂಡದೊಂದಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಅಲ್ಲಿನ ಒಳ್ಳೆ ಕಾಟ ಹಾಗೂ ಬಾಯಿ ರುಚಿಸದ ಊಟದಿಂದ ಬೇಸತ್ತು ಹೋಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ತಮಗೆ ಜೈಲಿನ ಊಟ ಸೇರುತ್ತಿಲ್ಲವಾದ ಕಾರಣ ಮನೆಯೂಟ ನೀಡಲು ಅನುಮತಿ ಕೊಡಬೇಕೆಂದು ಕೋರಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ
ನನಗೆ ಜೈಲಿನ ಊಟ ಸೇವಿಸಿದರೆ ಅಲರ್ಜಿ ಉಂಟಾಗುತ್ತಿದೆ. ಕಳೆದ ವಾರದಿಂದ ನನಗೆ ಪರಪ್ಪನ ಅಗ್ರಹಾರದಲ್ಲಿ ಜೈಲಿನ ಅಧಿಕಾರಿಗಳು ನೀಡುತ್ತಿರುವ ಊಟ ಸೇರುತ್ತಿಲ್ಲ. ಹೀಗಾಗಿ ಮನೆಯೂಟ ನೀಡಲು ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿಕೊಂಡಿದ್ದಾರೆ.
ನಾನು ಜೈಲಿನ ಊಟ ಸರಿಯಿಲ್ಲ ಎಂದು ಇಲ್ಲವೇ ಆ ಊಟಕ್ಕೆ ಅಗೌರವ ತೋರಿಸುತ್ತಿಲ್ಲ. ನನ್ನ ದೇಹಕ್ಕೆ ಒಗ್ಗುತ್ತಿಲ್ಲವಾದ್ದರಿಂದ ವೈದ್ಯರ ಸೂಚನೆ ಮೇರೆಗೆ ಮನೆಯೂಟ ಮಾಡಬೇಕು. ನ್ಯಾಯಾಲಯ ನನ್ನ ಮನವಿಯನ್ನು ಪರಿಗಣಿಸಬೇಕೆಂದು ರಿಟ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಊಟದ ಜೊತೆಗೆ ಮನೆಯಿಂದ ಹಾಸಿಗೆ, ದಿಂಬು, ಬ್ರೆಷ್, ಟೂನ್ಪೇಸ್ಟ್, ಸೋಪು ಹಾಗೂ ಬಟ್ಟೆಗಳನ್ನು ಬಳಸಲು ಅವಕಾಶ ನೀಡಬೇಕು, ನ್ಯಾಯಾಲಯವು ನನ್ನ ಮನವಿಯನ್ನು ಪರಿಗಣಿಸುತ್ತದೆ ಎಂಬ ವಿಶ್ವಾಸವನ್ನು ಇಟ್ಟುಕೊಂಡಿರುವುದಾಗಿ ಹೇಳಿದ್ದಾರೆ.
ಇದೀಗ ನ್ಯಾಯಾಲಯ ದರ್ಶನ್ ಅವರ ಮನವಿಯನ್ನು ಪರಿಗಣಿಸುತ್ತದೆಯೇ ಎಂಬುದು ಕುತೂಹಲಕಾರಿ.
Previous Articleರಾಮನಗರ ಜಿಲ್ಲೆ ಹೆಸರು ಬದಲಾಗಬೇಕಿದೆ, ಯಾಕೆ ಗೊತ್ತಾ..?
Next Article ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ.

1 ಟಿಪ್ಪಣಿ
Play like the jackpot already has your face on it – https://gpdifluca.com/wazamba-casino-review-2026/ , This is where broke becomes a personality trait you used to have .