ಬೆಂಗಳೂರು,ಮೇ.15:
ದೀಪ ಆರುವ ಮುನ್ನ ಪ್ರಜ್ವಲಿಸಿ ಉರಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಜ್ವಲಿಸುತ್ತಿದ್ದಾರೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಹಪಹಪಿಸುವರು ಯಾರು ಇಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯಲ್ಲಿ ವಿಜಯೇಂದ್ರ ಅವರ ಸ್ಥಾನವನ್ನು ಕಿತ್ತುಕೊಳ್ಳಲು ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತದೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಸಿಗಲಿದೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ ಎಂದಿದ್ದಾರೆ
ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ ಎಂದು ಹೇಳಿದ್ದಾರೆ
ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದಿದ್ದಾರೆ
ನೀವು ಮುಖ್ಯಮಂತ್ರಿಯಾಗುವ ವೇಳೆ ಶಿವಕುಮಾರ್ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದು ಎಚ್ಚರಿಸಿದ್ದಾರೆ.
4 ಪ್ರತಿಕ್ರಿಯೆಗಳು
where to buy generic clomiphene can you buy cheap clomid without insurance can i buy clomiphene without prescription zei: can you buy clomiphene online buy cheap clomiphene tablets cost of cheap clomiphene without rx cost of clomiphene
With thanks. Loads of expertise!
buy propranolol generic – buy propranolol paypal purchase methotrexate pill
buy generic amoxil – cost ipratropium 100 mcg purchase ipratropium for sale