Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿ.ಎಫ್ ಕಟ್ಟಲೂ‌ ದುಡ್ಡಿಲ್ಲವಂತೆ.
    Trending

    ಪಿ.ಎಫ್ ಕಟ್ಟಲೂ‌ ದುಡ್ಡಿಲ್ಲವಂತೆ.

    vartha chakraBy vartha chakraನವೆಂಬರ್ 27, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.27-
    ಅತ್ಯಂತ ವಿಶ್ವಾಸಾರ್ಹ ಹಾಗೂ ಶಿಸ್ತಿನ ಸೇವೆಗೆ ಹೆಸರಾದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ತೀವ್ರ ಸ್ವರೂಪದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಇದರ ಪರಿಣಾಮವಾಗಿ ನಿಗಮದ ನೌಕರರ ಭವಿಷ್ಯ ನಿಧಿ ಕೂಡಾ ಪಾವತಿಸಿಲ್ಲ.
    ಕಳೆದ ಕೆಲವು ತಿಂಗಳುಗಳಿಂದ ನೌಕರರ ಭವಿಷ್ಯ ನಿಧಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಆರ್ಥಿಕ ನೆರವು ನೀಡುವಂತೆ ಕೋರಿ ರಾಜ್ಯ ರಸ್ತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
    ಭವಿಷ್ಯ ನಿಧಿ ಕಾಯ್ದೆ ಪ್ರಕಾರ ಪ್ರತಿ ತಿಂಗಳು ನೌಕರರ ವೇತನದಲ್ಲಿ ಭವಿಷ್ಯ ನಿಧಿ ಮೊತ್ತ ಕಡಿತಗೊಳಿಸಬೇಕು ಹಾಗೂ ಉದ್ಯೋಗದಾತರು ಅದಕ್ಕೆ ಸಮಾನವಾದ ಮೊತ್ತವನ್ನು ಸೇರಿಸಿ ನೌಕರರ ಭವಿಷ್ಯ ನಿಧಿ ಖಾತೆಗೆ ಹಣ ಪಾವತಿಸಬೇಕು.
    ಆದರೆ, ನೌಕರರ ವೇತನದಿಂದ ಕಡಿತಗೊಳಿಸಿದ ಮತ್ತು ತಮ್ಮ ಪಾಲವನ್ನು ಭವಿಷ್ಯ ನಿಧಿ ನ್ಯಾಸಕ್ಕೆ ಪಾವತಿಸುವಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ವಿಫಲವಾಗಿವೆ.
    ಇದರಿಂದಾಗಿ ನಾಲ್ಕೂ ನಿಗಮಗಳು ಭವಿಷ್ಯ ನಿಧಿ ನ್ಯಾಸಕ್ಕೆ ಭವಿಷ್ಯ ನಿಧಿ ಬಾಕಿ ಹಾಗೂ ವಿಳಂಬ ಬಡ್ಡಿ ಸೇರಿದಂತೆ 2024ರ ಅಕ್ಟೋಬರ್‌ವರೆಗೆ 2,792.61 ಕೋಟಿ ರೂ ಪಾವತಿಸುವುದು ಬಾಕಿ ಉಳಿದಿದೆ.
    ಈ ಮೊತ್ತ ಪಾವತಿಸಲು ತಮಗೇ ಸಾಧ್ಯವೇ ಇಲ್ಲ ಎಂದು ಹೇಳಿರುವ ನಿಗಮಗಳು, ಅದಕ್ಕಾಗಿ ಸರ್ಕಾರದಿಂದ ಆರ್ಥಿಕ ನೆರವು ನೀಡುವಂತೆ ಪತ್ರದ ಮೂಲಕ ಕೋರಿವೆ.
    523.52 ಕೋಟಿ  ಬಡ್ಡಿ:
    ರಾಜ್ಯ ರಸ್ತೆ ಸಾರಿಗೆ ನಿಗಮಗಳ ಲೆಕ್ಕದಂತೆ ಒಟ್ಟು 2,269.09 ಕೋಟಿ ರೂ. ಭವಿಷ್ಯ ನಿಧಿ ಬಾಕಿ ಉಳಿಸಿಕೊಂಡಿವೆ. ಅಲ್ಲದೆ, ಹೀಗೆ ನಿಗದಿತ ಸಮಯದಲ್ಲಿ ಭವಿಷ್ಯ ನಿಧಿ ಪಾವತಿಸದೆ ವಿಳಂಬ ಮಾಡಿದ್ದಕ್ಕಾಗಿ 523.52 ಕೋಟಿ ರು. ಹೆಚ್ಚುವರಿ ಬಡ್ಡಿ ರೂಪದಲ್ಲಿ ಪಾವತಿಸಬೇಕಿದೆ.
    ಅದರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು 2021ರ ಸೆಪ್ಟೆಂಬರ್‌ನಿಂದ 2024ರ ಅಕ್ಟೋಬರ್ ವರೆಗೆ ಸತತ 3 ವರ್ಷಗಳ ಕಾಲ ಭವಿಷ್ಯ ನಿಧಿ ಮೊತ್ತ ಪಾವತಿಸಿಲ್ಲ. ಹೀಗಾಗಿ 821.48 ಕೋಟಿ ರು. ಭವಿಷ್ಯ ನಿಧಿ ಬಾಕಿಗೆ 232.9 ಕೋಟಿ ರು. ವಿಳಂಬ ಬಡ್ಡಿ ಪಾವತಿಸಬೇಕಾಗಿದೆ.
    ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದಂತೆ ಆರ್ಥಿಕ ನೆರವು ನೀಡುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಸರ್ಕಾರಕ್ಕೆ ಪತ್ರದ ಮೂಲಕ ಕೋರಿದ್ದಾರೆ.
    ಈ ಪತ್ರದಲ್ಲಿ ಕೊರೋನಾ ಅವಧಿಯಲ್ಲಿ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಿವೆ. ಅದರ ಜತೆಗೆ ತೈಲ ಬೆಲೆ, ವೇತನ ಹೆಚ್ಚಳದಿಂದಾಗಿ ನಿಗಮಗಳ ವೆಚ್ಚ ಹೆಚ್ಚಳವಾಗುವಂತಾಗಿದೆ. ಅದರ ಪರಿಣಾಮ ನೌಕರರ ಮತ್ತು ನಿಗಮಗಳ ವಂತಿಗೆಯ ಭವಿಷ್ಯ ನಿಧಿ ಮೊತ್ತವನ್ನು ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆರ್ಥಿಕ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
    ಹಲವು ತಿಂಗಳಿನಿಂದ ಭವಿಷ್ಯ ನಿಧಿ ಮೊತ್ತ ಪಾವತಿಸ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಭವಿಷ್ಯ ನಿಧಿ ಕಚೇರಿಯ ಪ್ರಾದೇಶಿಕ ಆಯುಕ್ತರು ಗಂಭೀ ವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲ ಸಾರಿಗೆ ನಿಗಮಗಳಿಗೆ ನೀಡಲಾಗಿರುವ ಭವಿಷ್ಯ ನಿಧಿ ವಿನಾಯಿತಿಯನ್ನು ರದ್ದು ಮಾಡುವ ಎಚ್ಚರಿಕೆ ನೀಡಿದ್ದಾರೆ.

    ಕರ್ನಾಟಕ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    Next Article ಕರ್ನಾಟಕದಲ್ಲಿ 563 ಹುಲಿಗಳು
    vartha chakra
    • Website

    Related Posts

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • accounts-marketplace.xyz_Lob ರಲ್ಲಿ ಎಲೆ ಅಡಿಕೆ ತಿನ್ನಿಸಿ‌ ಮಗುವನ್ನು ಕೊಂದಳಾ ಅಜ್ಜಿ? | Murder
    • accounts-marketplace.xyz_Lob ರಲ್ಲಿ ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    • accounts-offer.org_Lob ರಲ್ಲಿ ಅರಣ್ಯ ಅಪರಾಧಗಳ ತಡೆಗೆ IT ನೆರವು | Wildlife Crimes
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe