Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    Trending

    ಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?

    vartha chakraBy vartha chakraಜುಲೈ 1, 202428 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜು.1:
    ಅಂತರ್ ಜಿಲ್ಲಾ ವರ್ಗಾವಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಖಾಕಿ ಪಡೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.ಪೊಲೀಸ್‌‍ ಸಿಬ್ಬಂದಿಗಳ ಬಹು ದಿನದ ಬೇಡಿಕೆಯಾದ ಅಂತರ್‌ಜಿಲ್ಲಾ ವರ್ಗಾವಣೆಗೆ ಪ್ರತ್ಯೇಕ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉತ್ತರ ಕರ್ನಾಟಕ ಭಾಗದಿಂದ ಬಂದು ಬೆಂಗಳೂರಿನಲ್ಲಿ ಪೊಲೀಸ್‌‍ ಸೇವೆಯಲ್ಲಿ ಸೇರಿದವರಿಗೆ ಮರಳಿ ತವರಿನತ್ತ ಹೋಗಲು ಅವಕಾಶ ಇಲ್ಲದಂತಾಗಿದೆ.ಈ ಹಿನ್ನೆಲೆಯಲ್ಲಿ ವರ್ಗಾವಣೆ ನಿಯಮ ರೂಪಿಸಲಾಗುತ್ತಿದೆ.ಇದರಿಂದ ಆರೋಗ್ಯ ಸಮಸ್ಯೆ, ಪೋಷಕರ ಅವಲಂಬನೆ, ಪತಿ-ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆಗೆ ಅನುಕೂಲವಾಗುವಂತೆ ನಿಯಮಾವಳಿಗಳನ್ನು ಪರಿಷ್ಕರಿಸುವುದಾಗಿ ಹೇಳಿದರು
    ದೇಶಾದ್ಯಂತ ನೂತನ ಅಪರಾಧ ಮತ್ತು ನ್ಯಾಯ ಕಾನೂನುಗಳು ದೇಶಾದ್ಯಂತ ಜಾರಿಯಾಗುತ್ತಿದೆ. ರಾಜ್ಯಸರ್ಕಾರ ಅವುಗಳ ಅನುಷ್ಠಾನಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದೆ‌.ಹೀಗಾಗಿ ಎಲ್ಲಿಯೂ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಇರುವುದಿಲ್ಲ ಎಂದರು.
    ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಈಗಾಗಲೇ ಹಗರಣದ ಬಗ್ಗೆ ಎಸ್‌‍ಐಟಿ ಮತ್ತು ಸಿಬಿಐನಿಂದ ಪ್ರತ್ಯೇಕವಾದ ತನಿಖೆ ನಡೆಯುತ್ತಿದೆ. ವರದಿ ಬರುವವರೆಗೂ ಯಾರ ಪಾತ್ರದ ಬಗ್ಗೆಯೂ ಸ್ಪಷ್ಟತೆ ಇಲ್ಲ. ತನಿಖೆ ಪೂರ್ಣಗೊಳ್ಳುವವರೆಗೂ ತಾಳೆಯಿಂದ ಇರಿ ಎಂದು ಬಿಜೆಪಿ ನಾಯಕರಿಗೆ ಹೇಳಿದರು.
    ಸಿಬಿಐನವರು ಬ್ಯಾಂಕಿನಲ್ಲಾಗಿರುವ ಹಗರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಎಸ್‌‍ಐಟಿ ಇಲಾಖೆ ಲೋಪಗಳ ಬಗ್ಗೆ ವಿಚಾರಣೆ ನಡೆಸುತ್ತದೆ. ಈ ಎರಡೂ ತನಿಖೆಯ ವರದಿಗಳು ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಅದು ಅಧಿಕಾರಿಗಳೇ ಇರಲಿ, ರಾಜಕಾರಣಿಗಳೇ ಇರಲಿ, ಸರ್ಕಾರ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಡಿಸಿಎಂ ಹುದ್ದೆಗಾಗಿ ನಮಲ್ಲಿ ಯಾವುದೇ ಕಿತ್ತಾಟಗಳಿಲ್ಲ. ಜನಾದೇಶ ನೀಡಿದಂತೆ ನಮ ಸರ್ಕಾರ ಅಭಿವೃದ್ಧಿ ಕೆಲಸದತ್ತ ಗಮನ ಹರಿಸಿದೆ. ಬಿಜೆಪಿಯವರು ಅನಗತ್ಯವಾಗಿ ನಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನೀರಾವರಿ, ರಸ್ತೆ ಅಭಿವೃದ್ಧಿ,ಕಂದಾಯ ಇಲಾಖೆ ಸೇರಿದಂತೆ ಯಾವುದೇ ಅಭಿವೃದ್ಧಿ ಚಟುವಟಿಕೆಗಳು ನಿಂತಿಲ್ಲ.
    ಜೊತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನೂ ಕೂಡ ಮುಂದುವರೆಸಲಾಗಿದೆ ಎಂದು ತಿಳಿಸಿದರು. ಬಿಜೆಪಿ ನಾಯಕರುಗಳ ನಡುವೆ ಹೊಂದಾಣಿಕೆ ಇಲ್ಲ. ಪರಸ್ಪರ ಅವರೇ ಕಚ್ಚಾಡುತ್ತಿದ್ದಾರೆ. ನಮ ಬಗ್ಗೆ ಹೇಳಿಕೆ ನೀಡುವುದು ಹಾಸ್ಯಾಸ್ಪದ ಎಂದರು.

    Bangalore Government Karnataka News Police Trending Varthachakra ಆರೋಗ್ಯ ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ಕಾನೂನಿನ ಅನ್ವಯ ಮೊದಲ FIR ಯಾರ ಮೇಲೆ ಗೊತ್ತಾ.?
    Next Article DCM ಹುದ್ದೆಯ ಬಗ್ಗೆ ಮಾತನಾಡುವುದು Nonsense.
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_kgot ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • rylonnie shtori na plastikovie okna s elektroprivodom_zkSn ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • MichaelTeamy ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe