Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು.
    Trending

    ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು.

    vartha chakraBy vartha chakraಜೂನ್ 29, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-
    ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿರುವ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಸಮರ ಘೋಷಣೆ ಮಾಡಿದೆ.
    ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜವಾಬ್ದಾರಿ ಹೊರಬೇಕು ಹಾಗೂ ಸಚಿವ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮ ನಡೆಸಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ಚಿತ್ರದುರ್ಗದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರೆ ಕೋಲಾರದಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತ್ರತ್ವದಲ್ಲಿ ಕಾರ್ಯಕರ್ತರು ಹೋರಾಟ ನಡೆದರು.
    ಹೋರಾಟದ ಬಗ್ಗೆ ಮಾಹಿತಿ ನೀಡಿದ ವಿಜಯೇಂದ್ರ ಅವರು, ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ ಸರಿ. ಆದರೆ ಪ್ರಕರಣ ಇಲ್ಲಿಗೆ ಮುಗಿದಿಲ್ಲ. ಅಧಿಕಾರಿಗಳ ಮೇಲೆ ಆರೋಪ ಹಾಕಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತೇಪೆ ಹಾಕಲು ಹೊರಟ್ಟಿದ್ದಾರೆ ಎಂದು ಆಪಾದಿಸಿದರು
    ಈ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಜವಾಬ್ದಾರಿ ಹೊರಬೇಕು. ಹಾಗೆಯೇ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
    ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಎಸ್‌ಐಟಿ ಮಾಜಿ ಸಚಿವ ನಾಗೇಂದ್ರ ಅವರನ್ನು ಕರೆದು ವಿಚಾರಣೆ ಮಾಡುವ ಧೈರ್ಯ ತೋರಿಲ್ಲ. ನಾಗೇಂದ್ರ ಆಪ್ತರ ಬಗ್ಗೆ ಆರೋಪಿಯಾಗಿರುವ ಸತ್ಯನಾರಾಯಣ ವರ್ಮ ಮಾಡಿರುವ ಆರೋಪ ಗಂಭೀರವಾದದ್ದು. ಈ ಬಗ್ಗೆ ನ್ಯಾಯಾಲಯವೂ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಅವರು ಹೇಳಿದರು.
    ಸಿಎಂ ರಾಜಿನಾಮೆ:
    ಕೋಲಾರದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಿ ಪಕ್ಷ ನಾಯಕ ಆರ್ ಅಶೋಕ,ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
    ನಿಗಮದಲ್ಲಿ ಸಚಿವ ಬಿ.ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.
    ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ಆಪಾದಿಸಿದರು.
    ರೈತರಿಗೆ 800 ಕೋಟಿ ರೂ. ಹಾಲಿನ ಪ್ರೋತ್ಸಾಹಧನ ನೀಡಬೇಕಿದೆ. ರೈತರು ಬರ ಪರಿಹಾರ, ಪ್ರೋತ್ಸಾಹಧನ ಇಲ್ಲದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಕುಡಿಯುವ ನೀರು ಕೊಡಲು ಕೂಡ ಯೋಗ್ಯತೆ ಇಲ್ಲದೆ ಕಲುಷಿತ ನೀರು ಕುಡಿದು ಜನರು ಸತ್ತಿದ್ದಾರೆ. ಡೆಂಘೀ ರೋಗ ಹರಡುತ್ತಿದ್ದು, ಅದಕ್ಕೆ ಚಿಕಿತ್ಸೆ ನೀಡಲು ಸರ್ಕಾರದ ಬಳಿ ಹಣವಿಲ್ಲ.ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬುದ್ಧಿ ಕಲಿಸಬೇಕು ಎಂದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚಿತ್ರದುರ್ಗ ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿವೃತ್ತ ನೌಕರರಿಗೆ ರಾಮಲಿಂಗಾರೆಡ್ಡಿ ಬಂಪರ್ ಕೊಡುಗೆ.
    Next Article ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬೀಗ.
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಬೆಂಗಳೂರು ಕೆರೆಗಳಲ್ಲಿ ಬೋಟಿಂಗ್

    ಫೆಬ್ರವರಿ 20, 2026

    ಸೇವಾದಳ ಘಟಕಗಳ ವಿಸರ್ಜನೆ

    ಫೆಬ್ರವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • overseas no rx drugs online ರಲ್ಲಿ ಅಶೋಕ್ ಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಇನ್ಸ್ ಪೆಕ್ಟರ್ ಸಹಕಾರ.
    • https://strongcarkeychains.com/product-category/volkswagen/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • https://indianwomenorg.com/read-blog/49907 ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.