Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    ಬೆಂಗಳೂರು

    ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 202341 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.7-

    ಭ್ರಷ್ಟಾಚಾರ ಆರೋಪ ಸಂಬಂಧ ಉದ್ಯೋಗ ಮತ್ತು ತರಬೇತಿ ಇಲಾಖೆಯ (Department Of Employment & Training) ನಿವೃತ್ತ ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂಗಳನ್ನು ಹಿಂದಿರುಗಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈಗಾಗಲೇ ಸೇವೆಯಿಂದ ನಿವೃತ್ತರಾಗಿರುವ  ಶಿವಲಿಂಗ ಮೂರ್ತಿ(67)ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

    ಜೊತೆಗೆ ಅರ್ಜಿದಾರರಿಂದ ವಶಪಡಿಸಿಕೊಂಡ ಹಣ ಆದಾಯಕ್ಕೂ ಮೀರಿದ್ದಾಗಿದೆ ಎಂದು ಸಾಬೀತು ಪಡಿಸಲು ಲೋಕಾಯುಕ್ತ ಪೊಲೀಸರು (Lokayukta Police) ಯಾವುದೇ ತನಿಖೆ ನಡೆಸಿಲ್ಲ. ಹೀಗಾಗಿ ಅರ್ಜಿದಾರರಿಗೆ ಸೇರಬೇಕಾದ 12.15 ಲಕ್ಷ ಮೊತ್ತವನ್ನು ಹಿಂದಿರುಗಿಸಬೇಕು ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ. ಈ ನಡುವೆ ಅರ್ಜಿದಾರರು ನಿವೃತ್ತ IAS ಅಧಿಕಾರಿಯಾಗಿದ್ದು, ಅವರ ವಿರುದ್ಧ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರವಾದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ, ಯಾವುದೇ ರೀತಿಯ ಮನವಿಯನ್ನು ಅಂಗೀಕರಿಸಿರಲಿಲ್ಲ.

    ಪ್ರಕರಣದ ಹಿನ್ನೆಲೆ:

    ಕಳೆದ 2003ರಲ್ಲಿ ಐಟಿಐ (ITI) ಪರೀಕ್ಷೆಯಲ್ಲಿ ಅವ್ಯವಹಾರ ನಡೆಸುವುದಕ್ಕಾಗಿ ವಿದ್ಯಾರ್ಥಿಗಳು ಮತ್ತು ಐಟಿಐ ಕಾಲೇಜುಗಳಿಂದ ಲಂಚ ಪಡೆದು, ಅವ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೆ, ಆವರಣದಲ್ಲಿ ಇಬ್ಬರು ಖಾಸಗಿ ವ್ಯಕ್ತಿಗಳು ಅರ್ಜಿದಾರರ ಪರವಾಗಿ ಹಣ ಸ್ವೀಕರಿಸುತ್ತಿರುವುದಾಗಿ ತಿಳಿದು 7 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿದ್ದರು.

    ಅಲ್ಲದೇ, ಅದೇ ಸಂದರ್ಭದಲ್ಲಿ ಅರ್ಜಿದಾರರ ಮನೆ ಮೇಲೆ ದಾಳಿ ನಡೆಸಿ ಆದಾಯ ಮೀರಿ ಆಸ್ತಿ ಹೊಂದಿರುವುದಾಗಿ ಆರೋಪಿಸಿ 12.15 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಆರೋಪ ಪಟ್ಟಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬಳಿಕ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಅರ್ಜಿದಾರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲ ಆರೋಪಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಆದರೆ ಅರ್ಜಿದಾರರ ಮನೆಯಿಂದ ವಶ ಪಡಿಸಿಕೊಂಡಿದ್ದ 12.15 ಲಕ್ಷ ರೂ.ಗಳ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ಮಾಡಿರಲಿಲ್ಲ.

    ಅರ್ಜಿದಾರರನ್ನು ಖುಲಾಸೆಗೊಳಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಮೇಲ್ಮನವಿ ಸಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದು, ತಮ್ಮಿಂದ ವಶಪಡಿಸಿಕೊಂಡ ಹಣವನ್ನು ಹಿಂದಿರುಗಿಸಬೇಕು ಎಂದು ಕೋರಿ ಅರ್ಜಿದಾರ ಶಿವಲಿಂಗ ಮೂರ್ತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

    Verbattle
    Verbattle
    Verbattle
    #rain art Bangalore bribe accept Department Of Employment & Training high court IAS ITI lic lokayukta m News Police ಅಪರಾಧ ಸುದ್ದಿ ಕಾಲೇಜು ನ್ಯಾಯ ಲಂಚ ವಿದ್ಯಾರ್ಥಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ
    Next Article ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    ಫೆಬ್ರವರಿ 9, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Coplgs ರಲ್ಲಿ ಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    • LinwoodGah ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • LeonardReawn ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.