ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರ ವಿರುದ್ಧ ಶೇ.1ರಷ್ಟು ಕಮಿಷನ್ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ಮಂಗಳವಾರ ವಜಾಗೊಳಿಸಿದ ತಕ್ಷಣ ಪಂಜಾಬ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಈ ಬೆಳವಣಿಗೆ ನಡೆದಿದೆ. ಭ್ರಷ್ಟಾಚಾರ ಆರೋಪದ ಮೇಲೆ ಸಚಿವರ ಮೊದಲ ತಲೆದಂಡವಾಗಿದ್ದು, ಸಂಪುಟದಿಂದ ಕಿತ್ತು ಹಾಕುತ್ತಿದ್ದಂತೆ ಪಂಜಾಬ್ ಪೊಲೀಸರು ಸಚಿವರನ್ನು ಬಂಧಿಸಿದ್ದಾರೆ.
ತಮ್ಮ ಇಲಾಖೆಯಲ್ಲಿ ಗುತ್ತಿಗೆ ಪಡೆದ ಅಧಿಕಾರಿಗಳಿಂದ ವಿಜಯ್ ಸಿಂಗ್ಲಾ ಶೇ.1ರಷ್ಟು ಕಮಿಷನ್ ಕೇಳಿದ್ದರು. ಈ ಕುರಿತಾಗಿ ಸಿಎಂ ಭಗವಂತ್ ಮಾನ್ ಅವರಿಗೆ ದೂರು ಬಂದಿತ್ತು. ಬಲವಾದ ಸಾಕ್ಷ್ಯ ಕೂಡ ಲಭ್ಯವಾಗಿತ್ತು.
ಮುಖ್ಯಮಂತ್ರಿಯೊಬ್ಬರು ತಮ್ಮ ಸಚಿವರ ವಿರುದ್ಧ ನೇರ ಕ್ರಮಕ್ಕೆ ಮುಂದಾಗಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. 2015ರಲ್ಲಿ ಕೇಜ್ರಿವಾಲ್ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಸಚಿವರೊಬ್ಬರನ್ನು ವಜಾಗೊಳಿಸಿದ್ದು, ದೇಶದ ಮೊದಲ ಪ್ರಕರಣವಾಗಿತ್ತು.
ಶೇಕಡಾ 1ರಷ್ಟು ಭ್ರಷ್ಟಾಚಾರವನ್ನು ಕೂಡ ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಮಾನ್ ಹೇಳಿದ್ದಾರೆ.
Previous Articleಲಕ್ಷ್ಮೀ ಮಿತ್ತಲ್ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ
Next Article ಕನ್ನಡ ನಟಿಯರ ಬಗ್ಗೆ ಲಘುವಾಗಿ ಮಾತಾಡಿದ ತೆಲುಗು ನಿರ್ದೇಶಕ