ಬೆಂಗಳೂರು,ಮೇ.22:
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಎಲ್ಲೆಡೆ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ನಿರತವಾಗಿರುವ ಬೆನ್ನೆಲ್ಲೇ ಆಡಳಿತರೂಢ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಗುಪ್ತದಳ ವರದಿ ನೀಡಿದೆ.
ಇದರ ಜೊತೆಗೆ ಪಕ್ಷ ಮತ್ತು ಸರ್ಕಾರ ಪ್ರತ್ಯೇಕವಾಗಿ ನಡೆಸಿರುವ ಖಾಸಗಿ ಸಮೀಕ್ಷೆ ವರದಿಗಳೂ ಕೂಡ ಕಾಂಗ್ರೆಸ್ 18 ರಿಂದ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂಬ ವರದಿಗಳನ್ನು ನೀಡಿದ್ದು ಇದು ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.
ಗ್ಯಾರಂಟಿಗಳು ಮತ್ತು ಬಿಜೆಪಿಯೊಳಗಿನ ಭಿನ್ನಮತ ಮತದಾರರು ಕಾಂಗ್ರೆಸ್ ಕೈ ಹಿಡಿಯುವಂತೆ ಮಾಡಿದ್ದು ಇದೇ ಆಧಾರದಲ್ಲಿ ನೆನೆಗುಡಿಗೆ ಬಿದ್ದಿರುವ ಜಿಲ್ಲಾ ತಾಲೂಕು ಪಂಚಾಯಿತಿ ಮತ್ತು ನಗರ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಪಕ್ಷ ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಲ್ಲಾ ಸಚಿವರಿಗೆ ಔತಣ ಕೂಟ ಆಯೋಜಿಸಿದ್ದಾರೆ. ಇದರಲ್ಲಿ ಪ್ರತಿಯೊಂದು ಜಿಲ್ಲೆಯ ಮತದಾನದ ವರದಿ ಪಡೆಯಲಿದ್ದಾರೆ.
ಲೋಕಸಭೆ ಚುನಾವಣೆ ಹೊರಬಿದ್ದ ತಕ್ಷಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಕುರಿತಂತೆ ಎಲ್ಲಾ ಸಚಿವರ ಅಭಿಪ್ರಾಯ ಪಡೆಯಲು ತೀರ್ಮಾನಿಸಲಾಗಿದ್ದು, ಎಲ್ಲಾ ಸಚಿವರಿಗೂ ಸಂಬಂಧಪಟ್ಟ ಜಿಲ್ಲೆಯ ಜವಾಬ್ದಾರಿ ಹಂಚಿಕೆ ಮಾಡಲು ಚಿಂತನೆ ನಡೆದಿದೆ.
ಪರಿಷತ್ ಪೈಪೋಟಿ:
ವಿಧಾನಸಭೆಯಿಂದ ರಾಜ್ಯ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆದಿರುವ ಚುನಾವಣೆ ಕುರಿತಂತೆಯೂ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 7 ಸ್ಥಾನಗಳು ಸುಲಭವಾಗಿ ಲಭಿಸಲಿದ್ದು, ಜೆಡಿಎಸ್ ಮತ್ತು ಬಿಜೆಪಿಯಲ್ಲಿನ ಒಡಕಿನ ಲಾಭ ಪಡೆದರೆ ಮತ್ತೊಂದು ಸ್ಥಾನ ಕೂಡ ಲಭಿಸಲಿದೆ.
ಕಾಂಗ್ರೆಸ್ ಪಕ್ಷಕ್ಕೆ ಸಿಗಲಿರುವ ಏಳು ಸ್ಥಾನಗಳಿಗೆ ಸುಮಾರು ಐವತ್ತಕ್ಕೂ ಹೆಚ್ಚು ಜನ ಪೈಪೋಟಿ ನಡೆಸುತ್ತಿದ್ದಾರೆ. ಈ ಬಾರಿ ಜಾತಿವಾರು, ಹಿರಿತನ, ವಿಧಾನಸಭೆ, ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಸಿಗದ ವಂಚಿತರಿಗೆ ಅವಕಾಶ ಮಾಡಿಕೊಡುವ ಕಾರಣ ಅನೇಕ ಹಿರಿಯ ಮುಖಂಡರು ಸದ್ದಿಲ್ಲದೆ ನಾಯಕರ ಮನವೊಲಿಕೆಗೆ ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಎಲ್ಲ ಮಂತ್ರಿಗಳ ಅಭಿಪ್ರಾಯ ಆಲಿಸಲಿರುವ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಾಮಾಜಿಕ ನ್ಯಾಯ ಪ್ರಾದೇಶಿಕ ಸಮತೋಲನ ಹಾಗೂ ಪಕ್ಷದಲ್ಲಿ ನಿಷ್ಠಾವಂತರಿಗೆ ಆದ್ಯತೆ ನೀಡಲು ಹೈಕಮಾಂಡ್ ನೀಡಿರುವ ಸೂಚನೆಯ ಬಗ್ಗೆ ವಿವರಿಸಲಿದ್ದಾರೆ ಎಂದು ಗೊತ್ತಾಗಿದೆ.
ಕಾಂಗ್ರೆಸ್ ಗೆ ಸಿಗಲಿರುವ ಏಳು ಸ್ಥಾನಗಳಲ್ಲಿ ತಲಾ ಒಂದು ಸ್ಥಾನ ಪಂಚಮಸಾಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ ಬಲಗೈ, ಬೋವಿ ಮತ್ತು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಗೊತ್ತಾಗಿದೆ.
ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.
Previous Articleರಾಹುಲ್ ಗಾಂಧಿಗೆ ಸಮನ್ಸ್ ನೀಡಲು ಜೆಡಿಎಸ್ ಆಗ್ರಹ
Next Article ಫೋನ್ ಕದ್ದಾಲಿಕೆ ಬಗ್ಗೆ ದೂರು ಸಲ್ಲಿಸಲು ಡಿಸಿಎಂ ಸೂಚನೆ.

8 ಪ್ರತಿಕ್ರಿಯೆಗಳು
?Celebremos a cada entusiasta del triunfo !
muestra estas facilidades.
muestra estas facilidades.
Intercambia experiencias en http://caponesaurora.es/ libres – caponesaurora.es
?Que la fortuna te favorezca con que obtengas formidables tiradas afortunadas !
Техническая проблема возникает когда не работает кракен ссылка из-за устаревшего адреса, DDoS атаки на серверы или блокировки Tor подключения интернет провайдером.
Uwielbiasz hazard? https://online-nv-casino.com: rzetelne oceny kasyn, weryfikacja licencji oraz wybor bonusow i promocji dla nowych i powracajacych graczy. Szczegolowe recenzje, porownanie warunkow i rekomendacje dotyczace odpowiedzialnej gry.
La plateforme 1xbet burkina faso: paris sportifs en ligne, matchs de football, evenements en direct et statistiques. Description du service, marches disponibles, cotes et principales fonctionnalites du site.
Современная Стоматология в Воронеже лечение кариеса, протезирование, имплантация, профессиональная гигиена и эстетика улыбки. Квалифицированные специалисты, точная диагностика и забота о пациентах.
сайты с кейсами кс 2 открой кейс cs go
Play at https://elon-casino-top.com online: slots from popular providers, live dealers, promotions, and tournaments. Learn about the bonus policy, wagering requirements, payment methods, and withdrawal times. Information for adult players. 18+. Gambling requires supervision.
Нужен трафик и лиды? avigroup SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.