ಬೆಂಗಳೂರು,ಆ.6:
ಮದರಸಾಗಳಲ್ಲಿ ಕಾರ್ಯನಿರ್ವಹಿಸುವ ಮೌಲ್ವಿಗಳು ಕನ್ನಡ ಮಾತನಾಡುವುದಿಲ್ಲ ಅವರಿಗೆ ಕನ್ನಡ ಬರುವುದಿಲ್ಲ ಎಂಬ ದೂರುಗಳಿಗೆ ಅಲ್ಪಸಂಖ್ಯಾತರ ಇಲಾಖೆ ಸ್ಪಂದಿಸಿದೆ. ಈ ಮೂಲಕ ಕನ್ನಡಬಾರದ ಮದರಸಾಗಳ ಮೌಲ್ವಿಗಳಿಗೆ ಕನ್ನಡ ಕಲಿಸಲು ತೀರ್ಮಾನಿಸಲಾಗಿದೆ.
ಈ ಕುರಿತಂತೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು ಮದರಸಗಳ ಮೌಲ್ಯಗಳಿಗೆ ಕನ್ನಡ ಕಲಿಸುತ್ತೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಅಲ್ಪಸಂಖ್ಯಾತರ ಆಯೋಗ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾತನಾಡಿದ ಅವರು ರಾಜ್ಯದ ಮದರಸಾ ಮೌಲ್ವಿಗಳಿಗೆ ಕನ್ನಡ ಪಾಠ ಕಲಿಸುವ ನಿಟ್ಟಿನಲ್ಲಿ ಮದರಸಾಗಳಿಂದ 200 ಜನರನ್ನು ಆಯ್ಕೆ ಮಾಡಿದ್ದೇವೆ. 3 ತಿಂಗಳ ಒಳಗೆ ಅವರಿಗೆ ಕನ್ನಡ ಕಲಿಸುತ್ತೇವೆ. ಕನ್ನಡ ರಾಜ್ಯ ನಮ್ಮದು, ನಮಗೆಲ್ಲಾ ಕನ್ನಡ ಬರಬೇಕು. ಎಲ್ಲಾ ಮಸೀದಿ ಗುರುಗಳಿಗೂ ಕನ್ನಡ ಕಲಿಸುತ್ತೇವೆ ಎಂದು ಹೇಳಿದರು.
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಈ ನಿಟ್ಟಿನಲ್ಲಿ ಈಗ ಆದೇಶ ಆಗಿದೆ. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.
ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣ ಸಹಾಯ ಮಾಡುತ್ತಿದ್ದೇವೆ. 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕವಾಗಿ ವಿವಾಹ ಆಗಿವವರು ಬಡವರು. ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೆ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿರುವ ವಿಚಾರವಾಗಿ ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಉದಾಹರಣೆ ಇದೆ. ಮಹದೇವಪುರ ಕ್ಷೇತ್ರದಲ್ಲಿ 1.15 ಲಕ್ಷ ಬಿಜೆಪಿಗೆ ಲೀಡ್ ಬಂದಿದೆ. ಏನೇನೂ ಅಭಿವೃದ್ಧಿ ಮಾಡಿಲ್ಲ, ಆದರೂ ಅಷ್ಟು ಲೀಡ್ ಹೇಗೆ ಬಂತು? ಹೀಗಾಗಿ ರಾಹುಲ್ ಗಾಂಧಿ ಪ್ರತಿಭಟನೆ ಮಾಡ್ತಿದ್ದಾರೆ ಎಂದು ವಿವರಿಸಿದರು.
ಮದರಸಾ ಶಿಕ್ಷಕರು ಮತ್ತು ಮಕ್ಕಳಿಗೆ ಕನ್ನಡ ಕಲಿಸುವ ವಿಚಾರವಾಗಿ ಕನ್ನಡ ಅಭಿವೃದ್ದಿ ಪ್ರಾಧಿಕಾರ ಮುಂದಾಗಿತ್ತು. ಈ ಸಂಬಂಧಿಸಿದಂತೆ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮುಂದಾಗಿದ್ದರು. ಆದರೆ ಅದು ಅಂದು ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮದರಸಾಗಳಲ್ಲಿ ಬೋಧಿಸುತ್ತಿರುವ ಸುಮಾರು 180 ಶಿಕ್ಷಕರುಗಳಿಗೆ ಕನ್ನಡ ಕಲಿಕಾ ಅಭಿಯಾನವನ್ನು ಉದ್ಘಾಟಿಸಲಾಗಿದೆ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ದ ಬಿಳಿಮಲೆ “ಅಲ್ಪಸಂಖ್ಯಾತ ಮತ್ತು ಬಹುಸಂಖ್ಯಾತ ಸಮುದಾಯಗಳ ನಡುವಿನ ಸಾಮರಸ್ಯವನ್ನು ಕದಡುವ ವಿಭಜಕ ರಾಜಕಾರಣ ವಿಜೃಂಭಿಸುತ್ತಿದೆ. ಇಂತಹ ದಿನದಲ್ಲಿ ಭಾಷೆಯ ಮೂಲಕವೇ ಸಂವಹನ ಗಟ್ಟಿಯಾಗಬೇಕಿದೆ. ಈ ಕಾರಣಕ್ಕಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡವನ್ನು ಕಲಿಸುವ ಪ್ರಯತ್ನಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ ಎಂದಿದ್ದರು.
Previous Articleಕೇಂದ್ರ ಆರೋಗ್ಯ ಮಂತ್ರಿಗೆ ದಿನೇಶ್ ಗುಂಡೂರಾವ್ ಪತ್ರ
Next Article ನಾಗಾ ಸಾಧುಗಳು ಉಂಗುರ ದೋಚಿದ ಕತೆ.