Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂದಿನ ವಾರ ಶಿವ 143
    ಸುದ್ದಿ

    ಮುಂದಿನ ವಾರ ಶಿವ 143

    vartha chakraBy vartha chakraಆಗಷ್ಟ್ 17, 2022Updated:ಆಗಷ್ಟ್ 17, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ವರನಟ ಡಾ.ರಾಜಕುಮಾರ್ ಮೊಮ್ಮಗ, ರಾಮ್ ಕುಮಾರ್ ಪುತ್ರ ಧೀರನ್ ರಾಮ್ ಕುಮಾರ್ ನಾಯಕನಾಗಿ ನಟಿಸಿರುವ ‘ಶಿವ 143′ ಚಿತ್ರವು ಮುಂದಿನ ವಾರ( ಆಗಸ್ಟ್ 26) ತೆರೆಗೆ ಬರಲಿದೆ.
    ಇದು ಲಾಕ್ ಡೌನ್ ಪೂರ್ವದಲ್ಲೇ ತಯಾರಾದ ಸಿನಿಮಾವಾಗಿದ್ದು, ಕೊರೊನಾ ಕಾರಣದಿಂದ ಬಿಡುಗಡೆ ವಿಳಂಬವಾಗಿದೆ.
    ಈಗಾಗಲೇ ಈ ಚಿತ್ರದ ಟ್ರೇಲರ್ ಹಾಗು ಹಾಡು ನೋಡುಗರ ಮನ ಗೆದ್ದಿದೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಈ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
    ಇದೇ ಆಗಸ್ಟ್ 26 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದು ರೌಡಿಸಂ ಸಿನಿಮಾ ಅಲ್ಲ. ವಿಭಿನ್ನ ಪ್ರೇಮಕಥೆಯ ಚಿತ್ರ. ಜಯಣ್ಣ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ನಿರ್ಮಾಪಕರು ಹಾಗು ಧೀರನ್ ಅವರ ಕುಟುಂಬದವರು ಕುಳಿತು, ಧೀರನ್ ಅವರಿಗೆ ಇಂತಹುದೇ ಕಥೆ ಇದ್ದರೆ ಚೆನ್ನ ಎಂದು ತೀರ್ಮಾನಿಸಿದ್ದರು. ನಾನು ಆನಂತರ ತಂಡ ಸೇರಿಕೊಂಡೆ. ಧೀರನ್ ಅವರಿಗೆ ಈ ಮಾಸ್ ಲುಕ್ ಸರಿ ಹೊಂದುವುದೊ, ಇಲ್ಲವೋ? ಎಂಬ ಯೋಚನೆಯಿತ್ತು. ಅವರ ನಟನೆ ನೋಡಿ ಅದು ದೂರವಾಯಿತು. ನಾಯಕಿ ಮಾನ್ವಿತಾ ಕಾಮತ್ ಹಾಗು ಚರಣ್ ರಾಜ್ ಅವರ ಅಭಿನಯ‌ ಕೂಡ ತುಂಬಾ ಚೆನ್ನಾಗಿದೆ. ಸಾಧುಕೋಕಿಲ ಹಾಗು ಚಿಕ್ಕಣ್ಣ ಅವರ ಕಾಮಿಡಿ ಮೋಡಿ ಮಾಡಲಿದೆ’ ಎಂದು ನಿರ್ದೇಶಕ ಅನಿಲ್ ಕುಮಾರ್ ಚಿತ್ರದ ಬಗ್ಗೆ ವಿವರಣೆ ನೀಡಿದರು.
    ‘ನನಗೂ ಈ ಕಥೆ ಇಷ್ಟವಾಗಿತ್ತು. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೆ. ಮೈಸೂರಿನಲ್ಲಿ ಈ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲೇ ಅಪ್ಪು ಮಾಮ‌ ‘ಜೇಮ್ಸ್’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಾಹಸ ನಿರ್ದೇಶಕ ರವಿವರ್ಮ ಅವರು ಎರಡೂ ಚಿತ್ರಗಳಿಗೂ ಸಾಹಸ ಸಂಯೋಜನೆ ಮಾಡುತ್ತಿದ್ದರು‌. ನಾನು ಪಾಲ್ಗೊಂಡ ಸಾಹಸ ದೃಶ್ಯವೊಂದರ ತುಣುಕನ್ನು ಅವರು, ಅಪ್ಪು ಮಾಮ ಅವರಿಗೆ ತೋರಿಸಿದರಂತೆ. ಅದನ್ನು ನೋಡಿದ ಅಪ್ಪು ಮಾಮ, ಸ್ನೇಹಿತರೊಬ್ಬರ ಬಳಿ ಅವನ ಕಣ್ಣು ನೋಡಿ ಎಷ್ಟು ಚೆನ್ನಾಗಿದೆ. ನಮ್ಮ ಕುಟುಂಬದಿಂದ ಒಳ್ಳೆಯ ಹೀರೋ ಬರುತ್ತಿದ್ದಾನೆ ಎಂದು ತುಂಬಾ ಸಂತೋಷಪಟ್ಟಿದ್ದರಂತೆ. ಈ ವಿಷಯವನ್ನು ನನಗೆ ಎಷ್ಟೋ ದಿನಗಳ ಬಳಿಕ ಆ ಸ್ನೇಹಿತರು ಹೇಳಿದರು’ ಎಂದರು ನಾಯಕ ಧೀರನ್.
    ಜಯಣ್ಣ, ಭೋಗೇಂದ್ರ ಹಾಗು ಡಾ.ಸೂರಿ ನಿರ್ಮಿಸಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಾನ್ಸೂನ್‌ ರಾಗ ಮುಂದಕ್ಕೆ
    Next Article ಯಶ್ 19ನೇ ಚಿತ್ರದ ಪೋಸ್ಟರ್ ಲೀಕ್
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • ScottRep ರಲ್ಲಿ DK ಶಿವಕುಮಾರ್ ಬಗ್ಗೆ ವಿನಯ್ ಗುರೂಜಿ ನುಡಿದ ಭವಿಷ್ಯ ನಿಜವಾಗುತ್ತಾ?
    • Chriswot ರಲ್ಲಿ ಚುರುಕಾದ ನಕ್ಸಲರು.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe