Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    ರಾಜಕೀಯ

    ಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ

    vartha chakraBy vartha chakraಜನವರಿ 22, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜಿ.22:
    ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಭಿನ್ನರ ವಿರುದ್ಧ ಕ್ರಮಕ್ಕೆ ಆಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ.
    ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ರೇಣುಕಾಚಾರ್ಯ ಮತ್ತು ಹರತಾಳು ಹಾಲಪ್ಪ ನೇತ್ರತ್ವದಲ್ಲಿ ಸಭೆ ನಡೆಸಿದ 40ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಮತ್ತು ಹಿರಿಯ ನಾಯಕರು ಇದೀಗ ಭಿನ್ನರ ವಿರುದ್ಧ ಕ್ರಮಕ್ಕೆ ಪಟ್ಟು ಹಿಡಿದಿದ್ದಾರೆ.
    ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಅವರು ಪಕ್ಷದ ಶಿಸ್ತು ಉಲ್ಲಂಘಿಸಿ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಹೀಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಕೋರಿ ವರಿಷ್ಠರಿಗೆ ಪತ್ರ ಬರೆದಿದ್ದಾರೆ.
    40ಕ್ಕೂ ಹೆಚ್ಚು ಮಂದಿ ಹಿರಿಯ ನಾಯಕರು ಸಹಿ ಹಾಕಿರುವ ಮನವಿ ಪತ್ರವನ್ನು ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರಿಗೆ ನೀಡಿರುವ ಈ ನಾಯಕರು ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಎಂದು ನೇಮಕ ಮಾಡಿದೆ. ಅದನ್ನೇ ಪ್ರಶ್ನಿಸುವ ಮೂಲಕ ಯತ್ನಾಳ್ ನೇತೃತ್ವದ ಗುಂಪು ಅನಗತ್ಯ ಗೊಂದಲ ಉಂಟು ಮಾಡುತ್ತಿದೆ.
    ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಮನಬಂದಂತೆ ಹೇಳಿಕೆಗಳನ್ನು ನೀಡುವ ಮೂಲಕ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದೆ ಎಲ್ಲರೂ ಒಟ್ಟಾಗಿ ಪಕ್ಷವನ್ನು ಸಂಘಟಿಸಬೇಕಾದ ಸಮಯದಲ್ಲಿ ಇವರ ವರ್ತನೆ ಪಕ್ಷವನ್ನು ದುರ್ಬಲಗೊಳಿಸುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
    ರಾಜ್ಯ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಆರೋಪ ಸೇರಿದಂತೆ ಹಲವಾರು ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ ಪಕ್ಷದ ನಾಯಕತ್ವಕ್ಕೆ ಇವರು ನೀಡುತ್ತಿರುವ ಹೇಳಿಕೆಗಳು ಮುಳ್ಳಾಗಿ ಪರಿಣಮಿಸಿದೆ. ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಈ ನಾಯಕರು ವಿಭಿನ್ನ ರೀತಿಯ ಹೇಳಿಕೆಗಳು ಮತ್ತು ಆರೋಪಗಳನ್ನು ಮಾಡುವ ಮೂಲಕ ಕಾರ್ಯಕರ್ತರಲ್ಲಿ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
    ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಯತ್ನಾಳ್ ಮತ್ತು ರಮೇಶ ಜಾರಕಿಹೊಳಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಹಾಗೂ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
    ಇದೇ ಮನವಿ ಪತ್ರವನ್ನು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೂ ಸಲ್ಲಿಸಲು ತೀರ್ಮಾನಿಸಿರುವ ಈ ನಾಯಕರು ಶನಿವಾರ ಮತ್ತೊಮ್ಮೆ ಸಭೆ ಸೇರಿ ದೆಹಲಿಗೆ ನಿಯೋಗದಲ್ಲಿ ತೆರಳುವ ಕುರಿತಂತೆ ಚರ್ಚೆ ನಡೆಸಲಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದಂಡೆತ್ತಿ ಬಂದ ಜವರಾಯ
    Next Article ಬಿ.ಶ್ರೀರಾಮುಲು ಬಿಜೆಪಿ ಬಿಡೋದು ನಿಜಾನಾ..
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    1 ಟಿಪ್ಪಣಿ

    1. Bkfipz on ಫೆಬ್ರವರಿ 12, 2026 11:37 ಅಪರಾಹ್ನ

      mgm online gambling betmgm Alabama betmgm sportsbook app

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Tracymix ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.