Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು
    ರಾಜಕೀಯ

    ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು

    vartha chakraBy vartha chakraಜುಲೈ 2, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಾಮಕರಣ, ಅಧಿಕಾರ ಹಂಚಿಕೆ ಮತ್ತು ವರ್ಗಾವಣೆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹೈಕಮಾಂಡ್ ಗೆ ದೂರು ಸಲ್ಲಿಸಿದ್ದಾರೆ.
    ದೆಹಲಿ ಪ್ರವಾಸದಲ್ಲಿರುವ ಹಲವು ಮುಖಂಡರು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ವರ್ಗಾವಣೆ ವಿಷಯದಲ್ಲಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ.
    ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಹಲವು ಇಲಾಖೆಗಳ ಕಾರ್ಯ ವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಮುಖ್ಯಮಂತ್ರಿಗಳ ಪುತ್ರ ಇವರಿಗೆ ಬೆಂಗಾವಲಾಗಿ ನಿಂತಿದ್ದಾರೆ ಕೆಲವು ಅಧಿಕಾರಿಗಳು ಶಾಸಕ ಸಚಿವರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿಲ್ಲ ಮುಖ್ಯಮಂತ್ರಿಗಳಿಗೆ ದೂರು ನೀಡಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆ ಹೈಕಮಾಂಡ್ ಗಮನಹರಿಸಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
    ವಿಧಾನ ಪರಿಷತ್ ನಾಮಕರಣ ಸಮಯದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡಿಲ್ಲ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದ ಸುಧಾಮ್ ದಾಸ್ ಅವರಿಗೆ ನಾಮಕರಣ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿರುವುದಾಗಿ ಗೊತ್ತಾಗಿದೆ
    ಇದೆ ವೇಳೆಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಬೆಂಬಲಿಗರ ವಿವಾದಿತ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದಾರೆ. ಬುಧವಾರದಿಂದ ದೆಹಲಿ ಪ್ರವಾಸದಲ್ಲಿರುವ ಡಿ.ಕೆ.ಶಿವಕುಮಾರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.
    ಈಗಾಗಲೇ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾಯಕರುಗಳ ಜೊತೆ ನಡೆದಿರುವ ಚರ್ಚೆಯ ಪ್ರಕಾರ, ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆಯ ವಿರುದ್ಧ ರಾಜ್ಯ ಕಾಂಗ್ರೆಸ್‍ನಲ್ಲಿ ಯಾರೂ ಪ್ರತಿಕ್ರಿಯೆ ನೀಡದಂತೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ.
    ರಾಜ್ಯ ನಾಯಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಅಧಿಕಾರ ಹಂಚಿಕೆ ಸೂತ್ರ ಎಂಬುದಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣಾವಯ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಇದರಿಂದ ಆಡಳಿತದಲ್ಲಿ ಹಾಗೂ ಸರ್ಕಾರದಲ್ಲಿ ಗೊಂದಲದ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧನ ಹೊರಹಾಕಿದ್ದಾರೆ.
    ಸಿದ್ದರಾಮಯ್ಯ ಆಪ್ತರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ ಸೇರಿದಂತೆ ಅನೇಕ ಹಿರಿಯ ಸಚಿವರೆ ಈ ಬಗ್ಗೆ ಹೇಳಿಕೆ ನೀಡುತ್ತಿರುವ ಸರಿಯಲ್ಲ. ಹೈಕಮಾಂಡ್‍ನ ನಿರ್ಧಾರ ಗೌಪ್ಯವಾಗಿರಬೇಕು ಮತ್ತು ಸಾರ್ವಜನಿಕವಾಗಿ ಚರ್ಚಿಸುವ ವಿಷಯವಾಗಬಾರದು.ಸಚಿವರು ತಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಸರ್ಕಾರಕ್ಕೆ ಉತ್ತಮ ಹೆಸರು ತರುವ ಕೆಲಸ ಮಾಡುವುದರ ಜೊತೆಗೆ ಪಕ್ಷ ಸಂಘಟನೆಗೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಪಕ್ಷದ ಆಂತರಿಕ ವಿಚಾರಗಳ ಕುರಿತು ಅನಗತ್ಯ ಚರ್ಚೆ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ ಎಂದು ಹೇಳಲಾಗಿದೆ

    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೇಕಾಗಿದ್ದಾರೆ! ಪ್ರತಿಪಕ್ಷ ನಾಯಕ.
    Next Article ಅನಾಥವಾಗುತ್ತಿದೆ ಜಯನಗರ
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ispbruf ರಲ್ಲಿ ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    • long term effects Of performance Enhancing Drugs ರಲ್ಲಿ ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • how to get generic cipro without rx ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe