Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ
    ಸುದ್ದಿ

    ಹನಿಟ್ರ್ಯಾಪ್, ಆನೆಗಳ ಖೆಡ್ಡಾಕ್ಕೂ ಬೀಳದ ಚಾಲಾಕಿ ಚಿರತೆ

    vartha chakraBy vartha chakraಆಗಷ್ಟ್ 29, 2022Updated:ಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    ಸೆರೆ ಹಿಡಿಯಲಾಗದ ಚಿರತೆ
    Share
    Facebook Twitter LinkedIn Pinterest Email WhatsApp

    ಕಳೆದ 25 ದಿನಗಳಿಂದ ನಗರದ ಜನತೆಯ ನಿದ್ದೆಗೆಡಿಸುತ್ತಿರುವ ಚಾಲಾಕಿ ಚಿರತೆಯನ್ನು ಸೆರೆ ಹಿಡಿಯಲು ಹಲವು ರೀತಿಯ ಸರ್ಕಸ್​ ಮಾಡಿದರೂ  ಸಾಧ್ಯವಾಗುತ್ತಿಲ್ಲ.
    ಹನಿಟ್ರ್ಯಾಪ್, ಆನೆಗಳ ಖೆಡ್ಡಾ,ಹಂದಿಬಲೆಗೂ ಸಿಗದ
    ಚಾಲಾಕಿ ಚಿರತೆ ಕಣ್ಣಾಮುಚ್ಚಾಲೇ ಆಟವಾಡುತ್ತಿದೆ.
    ಚಿರತೆ ಭೀತಿಯಿಂದ ಕಳೆದ 20ಕ್ಕೂ ದಿನಗಳಿಂದ ಶಾಲೆಗಳಿಗೆ ರಜೆಯನ್ನೂ ಘೋಷಿಸಲಾಗಿದೆ.
    ಇತ್ತ ಚಿರತೆ ಸಿಗುತ್ತಿಲ್ಲ, ಅತ್ತ ಮಕ್ಕಳಿಗೆ ಪಾಠ ಆಗುತ್ತಿಲ್ಲ ಎನ್ನುವ ಸ್ಥಿತಿ ಬೆಳಗಾವಿ ಮಂದಿಯದ್ದಾಗಿದೆ, ಜತೆಗೆ ಆಗಾಗ್ಗೆ ಕಾಣಿಸಿಕೊಳ್ಳುವ ಚಿರತೆಯಿಂದಾಗಿ ಓಡಾಡುವುದೂ ಕಷ್ಟ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
    ಇದಾಗಲೇ ಅರಣ್ಯ ಇಲಾಖೆ ಸಾಧ್ಯವಾದಷ್ಟು ರೀತಿಯ ಯೋಜನೆ ರೂಪಿಸಿದರೂ ಅದು ಫಲಪ್ರದವಾಗಲಿಲ್ಲ.
    ಈ ಹಿನ್ನೆಲೆಯಲ್ಲಿ ಚಾಲಾಕಿ ಚಿರತೆ ಶೋಧಕ್ಕಾಗಿ ಅರಣ್ಯ ಇಲಾಖೆ ಯೋಜನೆ ಬದಲಾವಣೆ ಮಾಡಿದೆ. ಎರಡು ದಿನ ಕೇವಲ ಆಪರೇಷನ್ ಗಜಪಡೆ ನಡೆಸಲು ನಿರ್ಧಾರ ಮಾಡಿದೆ.
    ಚಿರತೆಗೆ ಡಿಸ್ಟರ್ಬ್ ಮಾಡದೇ ಸೆರೆಹಿಡಿಯಲು ಯೋಜನೆ ರೂಪಿಸಲಾಗಿದೆ.
    ಇಷ್ಟು ದಿನ ಅಳವಡಿಸಿದ್ದ ಸ್ಥಳ ಬಿಟ್ಟು ಬೋನು, ಟ್ರ್ಯಾಪ್ ಕ್ಯಾಮೆರಾ ಬೇರೆ ಸ್ಥಳದಲ್ಲಿ ಅಳವಡಿಕೆ ಮಾಡಲು ಸಿದ್ಧತೆ ನಡೆಸಲಾಗಿದೆ. 8 ಸಾಮಾನ್ಯ ಬೋನು,1 ದೊಡ್ಡದಾದ ಬೋನು, 23 ಟ್ರ್ಯಾಪ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.
    ಕೋಂಬಿಂಗ್ ವೇಳೆ ಚಿರತೆಯ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಆ ಜಾಗದಸುತ್ತಮುತ್ತ ಟ್ರ್ಯಾಪ್ ಕ್ಯಾಮೆರಾ, ಬೋನುಗಳ ಅಳವಡಿಕೆ ಮಾಡುವ ಯೋಜನೆಯನ್ನು ಅರಣ್ಯ ಇಲಾಖೆ ರೂಪಿಸಿದೆ.
    ಟ್ರ್ಯಾಪ್ ಕ್ಯಾಮೆರಾ ಬೋನುಗಳನ್ನು ಶಿಫ್ಟ್ ಮಾಡುತ್ತೇವೆ. ಆದಷ್ಟು ಚಿರತೆಯನ್ನು ಸೆರೆ ಹಿಡಿಯುವ ಪ್ರಯತ್ನ ಮಾಡುತ್ತಿದ್ದೇವೆ. ನಿನ್ನೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ ಎಂದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿ ಹೇಳಿದ್ದಾರೆ.
    250 ಎಕರೆ ಪ್ರದೇಶದಲ್ಲಿಯೇ ಚಿರತೆ ಇರುವ ಶಂಕೆ ವ್ಯಕ್ತವಾಗಿದೆ. ಈ ನಡುವೆಯೇ ಶಾಲೆ ಇನ್ನೂ ಆರಂಭ ಮಾಡಲಿಲ್ಲ. ಗಾಲ್ಫ್ ಮೈದಾನ ಸುತ್ತ ಬಿಗಿ ಭದ್ರತೆ ಒದಗಿಸಿ ಶಾಲೆ ಆರಂಭಿಸುವ ವಿಚಾರದ ಕುರಿತು ಜಿಲ್ಲಾಧಿಕಾರಿಗಳು ತಗೆದುಕೊಳ್ಳಬೇಕು ಎಂದು ಡಿಎಫ್ಒ ಆ್ಯಂಥೋನಿ ಮರಿಯಪ್ಪ ಹೇಳಿಕೆ ನೀಡಿದ್ದಾರೆ.
    ಮೂತ್ರ ಸಿಂಪಡಣೆ:
    ಇಂದು ಎಂಬತ್ತು ಜನ ಸಿಬ್ಬಂದಿ, ಜೆಸಿಬಿ, ಆನೆಗಳಿಂದ ಚಿರತೆ ಸೆರೆಗೆ ಪ್ಲ್ಯಾನ್ ಮಾಡಲಾಗಿದೆ. ಪ್ರತಿದಿನ 250 ಎಕರೆ ಪ್ರದೇಶದಲ್ಲಿರುವ ಗಾಲ್ಫ್ ಮೈದಾನವನ್ನು ಸಿಬ್ಬಂದಿ ಶೋಧ ಮಾಡುತ್ತಿದ್ದಾರೆ. ಚಿರತೆ ಸೆರೆಯಾಗದ ಹಿನ್ನೆಲೆ ಎರಡು ದಿನಗಳಿಂದ ಹನಿಟ್ರ್ಯಾಪ್ ಅಸ್ತ್ರ ಪ್ರಯೋಗ ಮಾಡಲಾಗುತ್ತಿದೆ. ಚಿರತೆ ಸೆರೆಗೆ ಇಟ್ಟಿರುವ ಬೋನ್ ನಲ್ಲಿ ಹೆಣ್ಣು ಚಿರತೆ ಮೂತ್ರ ಸಿಂಪಡಣೆ ಮಾಡಲಾಗಿದೆ.
    ಈ ಮೂಲಕ ಚಿರತೆ‌ಯನ್ನ ಲೈಂಗಿಕವಾಗಿ ಆಕರ್ಷಣೆ ಮಾಡಿ ಖೆಡ್ಡಾಗಿ ಬೀಳಿಸುವ ಪ್ಲ್ಯಾನ್ ಮಾಡಲಾಗಿದೆ. ಆದರು ಅರಣ್ಯ ಇಲಾಖೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸಿ ಚಾಲಾಕಿ ಚಿರತೆ ಓಡಾಡುತ್ತಿದೆ.
    ಸೆರೆಯಾಗದ ಚಿರತೆಯಿಂದಾಗಿ ನಗರದ ಜನರಲ್ಲಿ ಆತಂಕ ದೂರವಾಗುತ್ತಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ.

    ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮುಳುಗುತ್ತಿದ್ದ ಬಸ್ ನಿಂದ ಪ್ರಯಾಣಿಕರು ಪಾರು
    Next Article ಇಂದೂ ಬರಲಿಲ್ಲ ಹಿಜಾಬ್ ತೀರ್ಪು..
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • lfh6n ರಲ್ಲಿ 16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ
    • rrtd3 ರಲ್ಲಿ ದಂಡೆತ್ತಿ ಬಂದ ಜವರಾಯ
    • rh5x6 ರಲ್ಲಿ ಬಿಯರ್ ಪ್ರಿಯರ ಬಾಯಿ ಸುಡಲಿದೆ ಸರ್ಕಾರದ ಆದೇಶ | Beer
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe